<p>ರಾಜರಾಜೇಶ್ವರಿನಗರ: `ಇಂದಿನ ರಾಜಕೀಯ ಸಂಪೂರ್ಣ ಕಲುಷಿತಗೊಂಡಿದ್ದು, ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಲಾಗುತ್ತಿದೆ~ ಎಂದು ರಾಜ್ಯಸಭಾ ಸದಸ್ಯ ರಾಮಾಜೋಯಿಸ್ ವಿಷಾದ ವ್ಯಕ್ತಪಡಿಸಿದರು.<br /> <br /> ಇಲ್ಲಿನ ನೇತಾಜಿ ಸುಭಾಷ್ಚಂದ್ರಬೋಸ್ ಸಂಶೋಧನಾ ಮತ್ತು ಬಹು ಅಭಿವೃದ್ದಿ ಟ್ರಸ್ಟ್ ಹಮ್ಮಿಕೊಂಡಿದ್ದ ನೇತಾಜಿ ಮಾಡೆಲ್ ಶಾಲೆಯ ಭೂಮಿ ಪೂಜೆ ಮತ್ತು ಸುಭಾಷ್ಚಂದ್ರಬೋಸರ 115ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.<br /> <br /> `ಎಲ್ಲೆಡೆ ಭ್ರಷ್ಟಾಚಾರ, ಲಂಚಕೋರತನ ತುಂಬಿ ತುಳುಕುತ್ತಿದೆ. ಅಣ್ಣಾ ಹಜಾರೆ ಹೋರಾಟ ಸೇರಿದಂತೆ ಯಾವುದೇ ಕಾನೂನಿನಿಂದ ಲಂಚಗುಳಿತನ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ~ ಎಂದು ವಿಷಾದದಿಂದ ನುಡಿದರು.<br /> ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.<br /> <br /> ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿ ಎಂ.ರಾಜಕುಮಾರ್, ನೇತಾಜಿ ಅವರ ತತ್ವ ಆದರ್ಶಗಳನ್ನು ಮಕ್ಕಳಿಗೆ ಕಲಿಸಿ ಅವರಲ್ಲಿ ದೇಶ ಪ್ರೇಮ ಬೆಳೆಸುವ ದೃಷ್ಟಿಯಿಂದ ಮಾದರಿ ಶಾಲೆ ಪ್ರಾರಂಭಿಸಲಾಗುತ್ತಿದೆ ಎಂದರು.<br /> <br /> ಟ್ರಸ್ಟ್ ಅಧ್ಯಕ್ಷ, ರಾಜ ಯೋಗೀಂದ್ರ ವೀರಯ್ಯಸ್ವಾಮಿ ಶಾಸ್ತ್ರಿಮಠ ಗುರೂಜಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಜಿ.ಆರ್.ಶಿವಶಂಕರ್, ಎನ್.ಎಸ್. ಜೋಷಿ, ಡಾ.ಉಮಾಶೇಷಗಿರಿ, ಸಂಜಯ್ ಡಿ.ಕಲ್ಮಣಕರ್, ನಿವೃತ್ತ ಐಎಎಸ್ ಅಧಿಕಾರಿ ಕೆ.ಎಂ. ಕೊಟ್ಟಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿನಗರ: `ಇಂದಿನ ರಾಜಕೀಯ ಸಂಪೂರ್ಣ ಕಲುಷಿತಗೊಂಡಿದ್ದು, ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಲಾಗುತ್ತಿದೆ~ ಎಂದು ರಾಜ್ಯಸಭಾ ಸದಸ್ಯ ರಾಮಾಜೋಯಿಸ್ ವಿಷಾದ ವ್ಯಕ್ತಪಡಿಸಿದರು.<br /> <br /> ಇಲ್ಲಿನ ನೇತಾಜಿ ಸುಭಾಷ್ಚಂದ್ರಬೋಸ್ ಸಂಶೋಧನಾ ಮತ್ತು ಬಹು ಅಭಿವೃದ್ದಿ ಟ್ರಸ್ಟ್ ಹಮ್ಮಿಕೊಂಡಿದ್ದ ನೇತಾಜಿ ಮಾಡೆಲ್ ಶಾಲೆಯ ಭೂಮಿ ಪೂಜೆ ಮತ್ತು ಸುಭಾಷ್ಚಂದ್ರಬೋಸರ 115ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.<br /> <br /> `ಎಲ್ಲೆಡೆ ಭ್ರಷ್ಟಾಚಾರ, ಲಂಚಕೋರತನ ತುಂಬಿ ತುಳುಕುತ್ತಿದೆ. ಅಣ್ಣಾ ಹಜಾರೆ ಹೋರಾಟ ಸೇರಿದಂತೆ ಯಾವುದೇ ಕಾನೂನಿನಿಂದ ಲಂಚಗುಳಿತನ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ~ ಎಂದು ವಿಷಾದದಿಂದ ನುಡಿದರು.<br /> ಕೈಲಾಸ ಆಶ್ರಮದ ಜಯೇಂದ್ರಪುರಿ ಸ್ವಾಮಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.<br /> <br /> ಟ್ರಸ್ಟ್ನ ಸಂಘಟನಾ ಕಾರ್ಯದರ್ಶಿ ಎಂ.ರಾಜಕುಮಾರ್, ನೇತಾಜಿ ಅವರ ತತ್ವ ಆದರ್ಶಗಳನ್ನು ಮಕ್ಕಳಿಗೆ ಕಲಿಸಿ ಅವರಲ್ಲಿ ದೇಶ ಪ್ರೇಮ ಬೆಳೆಸುವ ದೃಷ್ಟಿಯಿಂದ ಮಾದರಿ ಶಾಲೆ ಪ್ರಾರಂಭಿಸಲಾಗುತ್ತಿದೆ ಎಂದರು.<br /> <br /> ಟ್ರಸ್ಟ್ ಅಧ್ಯಕ್ಷ, ರಾಜ ಯೋಗೀಂದ್ರ ವೀರಯ್ಯಸ್ವಾಮಿ ಶಾಸ್ತ್ರಿಮಠ ಗುರೂಜಿ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಜಿ.ಆರ್.ಶಿವಶಂಕರ್, ಎನ್.ಎಸ್. ಜೋಷಿ, ಡಾ.ಉಮಾಶೇಷಗಿರಿ, ಸಂಜಯ್ ಡಿ.ಕಲ್ಮಣಕರ್, ನಿವೃತ್ತ ಐಎಎಸ್ ಅಧಿಕಾರಿ ಕೆ.ಎಂ. ಕೊಟ್ಟಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>