<p><strong>ನೆಲಮಂಗಲ</strong>: ಬಾಬಾ ರಾಮ್ ದೇವ್ ಅವರು ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಭಾಸ್ಕರ್ಪ್ರಸಾದ್, ‘ರಾಮ್ ದೇವ್ ಅವರು ತಮ್ಮ ಜನ್ಮರಹಸ್ಯ ತಿಳಿಸಲಿ. ಗುರುಗಳ ಸ್ಥಾನದಲ್ಲಿರುವವರು ಸರ್ವರಿಗೂ ಜ್ಞಾನದ ಬೆಳಕನ್ನುಂಟು ಮಾಡುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ರಾಜಕೀಯ ಪಕ್ಷದ ವಕ್ತಾರನಂತೆ ಮಾತನಾಡಬಾರದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ದಲಿತ ಕೂಲಿ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಗಂಗಬೈಲಪ್ಪ ಮಾತನಾಡಿದರು. ಒಕ್ಕೂಟದ ವತಿಯಿಂದ ತಹಶೀಲ್ದಾರ್ ರಾಮಕೃಷ್ಣಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸಂಚಾಲಕ ಟಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಎನ್.ನಾಗರಾಜು ಮತ್ತಿತರರು ಇದ್ದರು.<br /> <br /> <strong>ಹೊಸಕೋಟೆ ವರದಿ</strong>: ಯೋಗಗುರು ಬಾಬಾ ರಾಮ್ ದೇವ್ ಅವರು ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ತಾಲ್ಲೂಕು ಘಟಕದ ಪರಿಶಿಷ್ಟ ಜಾತಿ/ಪಂಗಡ ಘಟಕದ ಸದಸ್ಯರು ಸೋಮವಾರ ಪ್ರತಿಭಟನೆ ಮಾಡಿದರು. ಕಾಂಗ್ರೆಸ್ ಕಚೇರಿಯಿಂದ ತಾಲ್ಲೂಕು ಕಚೇರಿಯವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ತಾಲ್ಲೂಕು ಕಚೇರಿ ಎದುರು ರಾಮ್ ದೇವ್ ಅವರ ಪ್ರತಿಕೃತಿ ದಹನ ಮಾಡಿದರು.<br /> <br /> ನಂತರ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪುರಸಭೆ ಅಧ್ಯಕ್ಷೆ ಗುಲಾಬ್ ಜಾನ್, ಉಪಾಧ್ಯಕ್ಷೆ ಗಿರಿಜಮ್ಮ, ಮುಖಂಡರಾದ ಮಂಜುನಾಥ್, ಚಿನ್ನಸ್ವಾಮಿ, ಅಬ್ದುಲ್ಲಾ, ಕೆ.ರಮೇಶ್, ಎನ್.ಕುಮಾರ್, ನರಸಿಂಹಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಬಾಬಾ ರಾಮ್ ದೇವ್ ಅವರು ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಸೋಮವಾರ ತಾಲ್ಲೂಕು ಕಚೇರಿ ಮುಂಭಾಗ ಅಣಕು ಶವಯಾತ್ರೆ ನಡೆಸಿ ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಭಾಸ್ಕರ್ಪ್ರಸಾದ್, ‘ರಾಮ್ ದೇವ್ ಅವರು ತಮ್ಮ ಜನ್ಮರಹಸ್ಯ ತಿಳಿಸಲಿ. ಗುರುಗಳ ಸ್ಥಾನದಲ್ಲಿರುವವರು ಸರ್ವರಿಗೂ ಜ್ಞಾನದ ಬೆಳಕನ್ನುಂಟು ಮಾಡುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ರಾಜಕೀಯ ಪಕ್ಷದ ವಕ್ತಾರನಂತೆ ಮಾತನಾಡಬಾರದು’ ಎಂದು ಆಕ್ರೋಶ ವ್ಯಕ್ತಪಡಿಸಿದರು.<br /> <br /> ದಲಿತ ಕೂಲಿ ಕಾರ್ಮಿಕ ಸಂಘಟನೆಯ ಅಧ್ಯಕ್ಷ ಗಂಗಬೈಲಪ್ಪ ಮಾತನಾಡಿದರು. ಒಕ್ಕೂಟದ ವತಿಯಿಂದ ತಹಶೀಲ್ದಾರ್ ರಾಮಕೃಷ್ಣಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯ ಸಂಚಾಲಕ ಟಿ.ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಎನ್.ನಾಗರಾಜು ಮತ್ತಿತರರು ಇದ್ದರು.<br /> <br /> <strong>ಹೊಸಕೋಟೆ ವರದಿ</strong>: ಯೋಗಗುರು ಬಾಬಾ ರಾಮ್ ದೇವ್ ಅವರು ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ತಾಲ್ಲೂಕು ಘಟಕದ ಪರಿಶಿಷ್ಟ ಜಾತಿ/ಪಂಗಡ ಘಟಕದ ಸದಸ್ಯರು ಸೋಮವಾರ ಪ್ರತಿಭಟನೆ ಮಾಡಿದರು. ಕಾಂಗ್ರೆಸ್ ಕಚೇರಿಯಿಂದ ತಾಲ್ಲೂಕು ಕಚೇರಿಯವರೆಗೆ ಮೆರವಣಿಗೆಯಲ್ಲಿ ತೆರಳಿದ ಅವರು ತಾಲ್ಲೂಕು ಕಚೇರಿ ಎದುರು ರಾಮ್ ದೇವ್ ಅವರ ಪ್ರತಿಕೃತಿ ದಹನ ಮಾಡಿದರು.<br /> <br /> ನಂತರ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಪುರಸಭೆ ಅಧ್ಯಕ್ಷೆ ಗುಲಾಬ್ ಜಾನ್, ಉಪಾಧ್ಯಕ್ಷೆ ಗಿರಿಜಮ್ಮ, ಮುಖಂಡರಾದ ಮಂಜುನಾಥ್, ಚಿನ್ನಸ್ವಾಮಿ, ಅಬ್ದುಲ್ಲಾ, ಕೆ.ರಮೇಶ್, ಎನ್.ಕುಮಾರ್, ನರಸಿಂಹಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>