<p><strong>ಚಂಡೀಗಡ (ಪಿಟಿಐ): </strong>ಸ್ವಯಂಘೋಷಿತ ‘ದೇವಮಾನವ’ ರಾಮ್ಪಾಲ್ ಅವರ ವಿರುದ್ಧದ 2006ರ ಕೊಲೆ ಪ್ರಕರಣದ ಜಾಮೀನನ್ನು ಗುರುವಾರ ರದ್ದುಗೊಳಿಸಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಈ ಪ್ರಕರಣ ಸಂಬಂಧ ರಾಮ್ಪಾಲ್ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.</p>.<p>ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪೊಲೀಸರು ರಾಮ್ಪಾಲ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಹೈಕೋರ್ಟ್ ಈ ಸೂಚನೆ ನೀಡಿದೆ. ಹರಿಯಾಣದ ಅಡ್ವೊಕೇಟ್ ಜನರಲ್ ಮತ್ತು ವಿಶೇಷ ಅಧಿಕಾರಿ, ರಾಮ್ಪಾಲ್ ಬಂಧನದ ವಿಷಯವನ್ನು ಹೈಕೋರ್ಟ್ಗೆ ತಿಳಿಸಿದ ಕೆಲ ಹೊತ್ತಿನಲ್ಲೆ ಈ ಆದೇಶ ನೀಡಲಾಗಿದೆ.</p>.<p>ನ್ಯಾಯಮೂರ್ತಿ ಎಂ.ಜಯಪಾಲ್ ಮತ್ತು ದರ್ಶನ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, ರಾಮ್ಪಾಲ್ ವಿರುದ್ಧ 2006ರ ಕೊಲೆ ಪ್ರಕರಣದ ಸಂಬಂಧ ಕ್ರಮ ಜರುಗಿಸುವುದು ಸ್ಪಷ್ಟವಾಗಿದೆ.</p>.<p>ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ನೀಡಿದ್ದ ಗಡುವು ಮುಗಿದರೂ ರಾಮ್ಪಾಲ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.</p>.<p>ರಾಮ್ಪಾಲ್ ಅವರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಹೈಕೋರ್ಟ್ ಹರಿಯಾಣ ಪೊಲೀಸರಿಗೆ ಸೂಚನೆ ನೀಡಿತ್ತು. ಎರಡು ವಾರಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಬುಧವಾರ ರಾತ್ರಿ ಸತ್ಲೋಕ್ ಆಶ್ರಮದಲ್ಲಿ ರಾಮ್ಪಾಲ್ ಅವರನ್ನು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ (ಪಿಟಿಐ): </strong>ಸ್ವಯಂಘೋಷಿತ ‘ದೇವಮಾನವ’ ರಾಮ್ಪಾಲ್ ಅವರ ವಿರುದ್ಧದ 2006ರ ಕೊಲೆ ಪ್ರಕರಣದ ಜಾಮೀನನ್ನು ಗುರುವಾರ ರದ್ದುಗೊಳಿಸಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, ಈ ಪ್ರಕರಣ ಸಂಬಂಧ ರಾಮ್ಪಾಲ್ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ.</p>.<p>ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಪೊಲೀಸರು ರಾಮ್ಪಾಲ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಹೈಕೋರ್ಟ್ ಈ ಸೂಚನೆ ನೀಡಿದೆ. ಹರಿಯಾಣದ ಅಡ್ವೊಕೇಟ್ ಜನರಲ್ ಮತ್ತು ವಿಶೇಷ ಅಧಿಕಾರಿ, ರಾಮ್ಪಾಲ್ ಬಂಧನದ ವಿಷಯವನ್ನು ಹೈಕೋರ್ಟ್ಗೆ ತಿಳಿಸಿದ ಕೆಲ ಹೊತ್ತಿನಲ್ಲೆ ಈ ಆದೇಶ ನೀಡಲಾಗಿದೆ.</p>.<p>ನ್ಯಾಯಮೂರ್ತಿ ಎಂ.ಜಯಪಾಲ್ ಮತ್ತು ದರ್ಶನ್ ಸಿಂಗ್ ಅವರನ್ನೊಳಗೊಂಡ ಪೀಠವು ಈ ಆದೇಶ ನೀಡಿದ್ದು, ರಾಮ್ಪಾಲ್ ವಿರುದ್ಧ 2006ರ ಕೊಲೆ ಪ್ರಕರಣದ ಸಂಬಂಧ ಕ್ರಮ ಜರುಗಿಸುವುದು ಸ್ಪಷ್ಟವಾಗಿದೆ.</p>.<p>ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನ್ಯಾಯಾಲಯ ನೀಡಿದ್ದ ಗಡುವು ಮುಗಿದರೂ ರಾಮ್ಪಾಲ್ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.</p>.<p>ರಾಮ್ಪಾಲ್ ಅವರನ್ನು ಬಂಧಿಸಿ ವಿಚಾರಣೆಗೆ ಹಾಜರುಪಡಿಸುವಂತೆ ಹೈಕೋರ್ಟ್ ಹರಿಯಾಣ ಪೊಲೀಸರಿಗೆ ಸೂಚನೆ ನೀಡಿತ್ತು. ಎರಡು ವಾರಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಬುಧವಾರ ರಾತ್ರಿ ಸತ್ಲೋಕ್ ಆಶ್ರಮದಲ್ಲಿ ರಾಮ್ಪಾಲ್ ಅವರನ್ನು ಬಂಧಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>