<p>ನವದೆಹಲಿ (ಪಿಟಿಐ): ದೇಶದ ದಕ್ಷಿಣದ ತುದಿಯಲ್ಲಿರುವ ವಿವಾದಿತ ರಾಮ್ಸೇತು ಬದಲಾಗಿ ಧನುಷ್ಕೋಟಿ ಮೂಲಕ ಪರ್ಯಾಯ ಹಡಗು ಮಾರ್ಗ ನಿರ್ಮಿಸುವ ಬಗ್ಗೆ ತಜ್ಞರು ನೀಡಿರುವ ಅಧ್ಯಯನ ವರದಿಯನ್ನು ತನಗೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. <br /> <br /> ಭಾರತ- ಶ್ರೀಲಂಕಾ ನಡುವೆ ಸಂಪರ್ಕ ಕಲ್ಪಿಸುವ, ಕೇಂದ್ರದ ರೂ 2,240 ಕೋಟಿಯ ಸೇತು ಸಮುದ್ರಂ ಹಡಗು ಮಾರ್ಗ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪರ್ಯಾಯ ಸಾಧ್ಯತೆ ಕುರಿತು ವರದಿ ಸಲ್ಲಿಸಲು ಪ್ರಧಾನಿ ಮನಮೋಹನ್ ಸಮಿತಿ ನೇಮಿಸಿದ್ದರು.<br /> <br /> 2008ರಲ್ಲಿ ಪರಿಸರ ತಜ್ಞ ಆರ್.ಕೆ. ಪಚೌರಿ ನೇತೃತ್ವದಲ್ಲಿ ರಚಿಸಲಾಗಿದ್ದ ಆರು ತಜ್ಞರ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು.<br /> <br /> ರಾಮ್ಸೇತುವಿನ ಐತಿಹಾಸಿಕ ಮಹತ್ವ ಮತ್ತು ಹಡಗು ಮಾರ್ಗದಿಂದ ಪರಿಸರಕ್ಕೆ ಹಾನಿಯಾಗುವ ಕಾರಣ ಯೋಜನೆ ಕೈಬಿಡಲು ಕೋರಿ ಮದ್ರಾಸ್ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಅನೇಕ ಅರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ದೇಶದ ದಕ್ಷಿಣದ ತುದಿಯಲ್ಲಿರುವ ವಿವಾದಿತ ರಾಮ್ಸೇತು ಬದಲಾಗಿ ಧನುಷ್ಕೋಟಿ ಮೂಲಕ ಪರ್ಯಾಯ ಹಡಗು ಮಾರ್ಗ ನಿರ್ಮಿಸುವ ಬಗ್ಗೆ ತಜ್ಞರು ನೀಡಿರುವ ಅಧ್ಯಯನ ವರದಿಯನ್ನು ತನಗೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. <br /> <br /> ಭಾರತ- ಶ್ರೀಲಂಕಾ ನಡುವೆ ಸಂಪರ್ಕ ಕಲ್ಪಿಸುವ, ಕೇಂದ್ರದ ರೂ 2,240 ಕೋಟಿಯ ಸೇತು ಸಮುದ್ರಂ ಹಡಗು ಮಾರ್ಗ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಪರ್ಯಾಯ ಸಾಧ್ಯತೆ ಕುರಿತು ವರದಿ ಸಲ್ಲಿಸಲು ಪ್ರಧಾನಿ ಮನಮೋಹನ್ ಸಮಿತಿ ನೇಮಿಸಿದ್ದರು.<br /> <br /> 2008ರಲ್ಲಿ ಪರಿಸರ ತಜ್ಞ ಆರ್.ಕೆ. ಪಚೌರಿ ನೇತೃತ್ವದಲ್ಲಿ ರಚಿಸಲಾಗಿದ್ದ ಆರು ತಜ್ಞರ ಸಮಿತಿ ಅಧ್ಯಯನ ನಡೆಸಿ ವರದಿ ಸಲ್ಲಿಸಿತ್ತು.<br /> <br /> ರಾಮ್ಸೇತುವಿನ ಐತಿಹಾಸಿಕ ಮಹತ್ವ ಮತ್ತು ಹಡಗು ಮಾರ್ಗದಿಂದ ಪರಿಸರಕ್ಕೆ ಹಾನಿಯಾಗುವ ಕಾರಣ ಯೋಜನೆ ಕೈಬಿಡಲು ಕೋರಿ ಮದ್ರಾಸ್ ಹೈಕೋರ್ಟ್ನಲ್ಲಿ ಸಲ್ಲಿಸಲಾಗಿದ್ದ ಅನೇಕ ಅರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>