<p><strong>ರಾಯಚೂರು: </strong>ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಬುದ್ಧನ ಪ್ರತಿಮೆಯನ್ನು ಕಿಡಿಗೇಡಿಗಳು ಮಂಗಳವಾರ ರಾತ್ರಿ ಧ್ವಂಸ ಮಾಡಿದ್ದಾರೆ.<br /> <br /> ಸುಮಾರು ನಾಲ್ಕೂವರೆ ಅಡಿ ಎತ್ತರದ ಪೀಠದ ಮೇಲೆ ಪ್ರತಿಷ್ಠಾಪಿಸಲಾಗಿದ್ದ ಈ ಪ್ರತಿಮೆ, ಬುದ್ಧನ ಕುಳಿತ ಭಂಗಿಯಾದಾಗಿದೆ. ಪ್ರತಿಮೆಯ ಮುಕ್ಕಾಲು ಭಾಗ ಧ್ವಂಸಗೊಂಡು ಕೆಳಗೆ ಬಿದ್ದಿದೆ.<br /> <br /> ಪ್ರತಿಮೆ ಧ್ವಂಸಗೊಂಡಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಕೆಲವು ಸಂಘ– ಸಂಸ್ಥೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ‘ಹದಿಮೂರು ವರ್ಷಗಳ ಹಿಂದೆ ಬುದ್ಧನ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದೆವು. ಬುದ್ಧಪೌರ್ಣಿಮೆ ದಿನ ಪೂಜೆ ಸಹ ಮಾಡುತ್ತಿದ್ದೆವು. ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಜಿಲ್ಲಾಡಳಿತದ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ರವೀಂದ್ರನಾಥ ಪಟ್ಟಿ ಹೇಳಿದರು.<br /> <br /> ‘ಬುದ್ಧನ ಪ್ರತಿಮೆ ಇರುವ ಆವರಣ ಸುತ್ತ ಕಾಂಪೌಂಡ್ ನಿರ್ಮಿಸಲು ಸಂಸದರು ಮತ್ತು ಶಾಸಕರ ನಿಧಿಯಿಂದ ನೆರವು ಕೇಳಿದರೆ, ಈ ಜಾಗ ಅಕ್ರಮದ್ದು, ಆದ್ದರಿಂದ ನೆರವು ನೀಡಲು ಬರುವುದಿಲ್ಲ ಎನ್ನುತ್ತಾರೆ. ಆದರೆ, ಈ ಸ್ಥಳದ ಪಕ್ಕದಲ್ಲೇ ಇರುವ ಭವನಗಳ ನಿರ್ಮಾಣಕ್ಕೆ ನೆರವು ನೀಡಿದ್ದಾರೆ. ಇಂತಹ ತಾರತಮ್ಯ ಏಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ನಗರ ಕೇಂದ್ರ ಗ್ರಂಥಾಲಯದ ಮುಂಭಾಗದ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಬುದ್ಧನ ಪ್ರತಿಮೆಯನ್ನು ಕಿಡಿಗೇಡಿಗಳು ಮಂಗಳವಾರ ರಾತ್ರಿ ಧ್ವಂಸ ಮಾಡಿದ್ದಾರೆ.<br /> <br /> ಸುಮಾರು ನಾಲ್ಕೂವರೆ ಅಡಿ ಎತ್ತರದ ಪೀಠದ ಮೇಲೆ ಪ್ರತಿಷ್ಠಾಪಿಸಲಾಗಿದ್ದ ಈ ಪ್ರತಿಮೆ, ಬುದ್ಧನ ಕುಳಿತ ಭಂಗಿಯಾದಾಗಿದೆ. ಪ್ರತಿಮೆಯ ಮುಕ್ಕಾಲು ಭಾಗ ಧ್ವಂಸಗೊಂಡು ಕೆಳಗೆ ಬಿದ್ದಿದೆ.<br /> <br /> ಪ್ರತಿಮೆ ಧ್ವಂಸಗೊಂಡಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಕೆಲವು ಸಂಘ– ಸಂಸ್ಥೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ‘ಹದಿಮೂರು ವರ್ಷಗಳ ಹಿಂದೆ ಬುದ್ಧನ ಪ್ರತಿಮೆಯನ್ನು ಪ್ರತಿಷ್ಠಾಪಿಸಿದ್ದೆವು. ಬುದ್ಧಪೌರ್ಣಿಮೆ ದಿನ ಪೂಜೆ ಸಹ ಮಾಡುತ್ತಿದ್ದೆವು. ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಇಲ್ಲದಿದ್ದರೆ ಜಿಲ್ಲಾಡಳಿತದ ವಿರುದ್ಧ ಹೋರಾಟ ಮಾಡುತ್ತೇವೆ’ ಎಂದು ದಲಿತ ಸಂಘರ್ಷ ಸಮಿತಿ ಮುಖಂಡ ರವೀಂದ್ರನಾಥ ಪಟ್ಟಿ ಹೇಳಿದರು.<br /> <br /> ‘ಬುದ್ಧನ ಪ್ರತಿಮೆ ಇರುವ ಆವರಣ ಸುತ್ತ ಕಾಂಪೌಂಡ್ ನಿರ್ಮಿಸಲು ಸಂಸದರು ಮತ್ತು ಶಾಸಕರ ನಿಧಿಯಿಂದ ನೆರವು ಕೇಳಿದರೆ, ಈ ಜಾಗ ಅಕ್ರಮದ್ದು, ಆದ್ದರಿಂದ ನೆರವು ನೀಡಲು ಬರುವುದಿಲ್ಲ ಎನ್ನುತ್ತಾರೆ. ಆದರೆ, ಈ ಸ್ಥಳದ ಪಕ್ಕದಲ್ಲೇ ಇರುವ ಭವನಗಳ ನಿರ್ಮಾಣಕ್ಕೆ ನೆರವು ನೀಡಿದ್ದಾರೆ. ಇಂತಹ ತಾರತಮ್ಯ ಏಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>