<p><strong>ಕೋಲ್ಕತ್ತ (ಪಿಟಿಐ): </strong>ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ಚರ್ಚಿಸಲು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೆ ತಾವು ಸಕಾರಾತ್ಮಕ ಮಾತುಕತೆ ನಡೆಸಿದ್ದಾಗಿ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕಿರಣ್ಮಯ್ ನಂದಾ ಗುರುವಾರ ತಿಳಿಸಿದ್ದಾರೆ.<br /> <br /> `ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಪ್ರಾದೇಶಿಕ ಪಕ್ಷಗಳ ಜತೆ ಮಾತುಕತೆ ನಡೆಸುವ ನಿಮ್ಮ ಮನವಿಗೆ ಮಮತಾ ಒಪ್ಪುವರೆ~ ಎಂಬ ಪ್ರಶ್ನೆಗೆ ನಂದಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.<br /> <br /> `ಚುನಾವಣೆಯಲ್ಲಿ ನಮ್ಮ ಪಾತ್ರ ಏನು ಎನ್ನುವುದನ್ನು ನಾವು ಚರ್ಚಿಸಿ ನಿರ್ಧರಿಸುತ್ತೇವೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ ಸ್ಥಾಪನೆ (ಎನ್ಸಿಟಿಸಿ) ಸೇರಿದಂತೆ ಹಲವಾರು ವಿಷಯಗಳಲ್ಲಿ ತಮ್ಮ ಪಕ್ಷವು ತೃಣಮೂಲ ಕಾಂಗ್ರೆಸ್ ಜತೆ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ): </strong>ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದ ಕಾರ್ಯತಂತ್ರ ಚರ್ಚಿಸಲು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರೊಂದಿಗೆ ತಾವು ಸಕಾರಾತ್ಮಕ ಮಾತುಕತೆ ನಡೆಸಿದ್ದಾಗಿ ಸಮಾಜವಾದಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕಿರಣ್ಮಯ್ ನಂದಾ ಗುರುವಾರ ತಿಳಿಸಿದ್ದಾರೆ.<br /> <br /> `ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಪ್ರಾದೇಶಿಕ ಪಕ್ಷಗಳ ಜತೆ ಮಾತುಕತೆ ನಡೆಸುವ ನಿಮ್ಮ ಮನವಿಗೆ ಮಮತಾ ಒಪ್ಪುವರೆ~ ಎಂಬ ಪ್ರಶ್ನೆಗೆ ನಂದಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.<br /> <br /> `ಚುನಾವಣೆಯಲ್ಲಿ ನಮ್ಮ ಪಾತ್ರ ಏನು ಎನ್ನುವುದನ್ನು ನಾವು ಚರ್ಚಿಸಿ ನಿರ್ಧರಿಸುತ್ತೇವೆ~ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.<br /> <br /> ಉದ್ದೇಶಿತ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರ ಸ್ಥಾಪನೆ (ಎನ್ಸಿಟಿಸಿ) ಸೇರಿದಂತೆ ಹಲವಾರು ವಿಷಯಗಳಲ್ಲಿ ತಮ್ಮ ಪಕ್ಷವು ತೃಣಮೂಲ ಕಾಂಗ್ರೆಸ್ ಜತೆ ಒಪ್ಪಿಗೆ ನೀಡಿದೆ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>