<p><strong>ನವದೆಹಲಿ (ಪಿಟಿಐ):</strong> ರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿ ಬಗ್ಗೆ ಚರ್ಚಿಸಲು ಡಿಎಂಕೆ ಮುಖಂಡರರಾದ ಟಿ. ಆರ್. ಬಾಲು ಮತ್ತು ಎಂ.ಕೆ. ಸ್ಟಾಲಿನ್ ಅವರು ಗುರುವಾರ ಇಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.</p>.<p>ಬಾಲು ಮತ್ತು ಸ್ಟಾಲಿನ್ ಅವರು ಸಿಂಗ್ ಅವರನ್ನು ಸೌತ್ ಬ್ಲಾಕ್ನಲ್ಲಿ ಭೇಟಿ ಮಾಡಿ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಪ್ರಧಾನಿ ಭೇಟಿ ಬಳಿಕ ಈ ಮುಖಂಡರು ಸೋನಿಯಾ ಅವರನ್ನು ಭೇಟಿಯಾಗಿ ರಾಷ್ಟ್ರಪತಿ ಸ್ಥಾನಕ್ಕೆ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಸಂಭಾವ್ಯ ಸ್ಪರ್ಧೆ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ರಕ್ಷಣಾ ಸಚಿವ ಎ.ಕೆ. ಆಂಟನಿ ಅವರೊಂದಿಗೆ ಚೆನ್ನೈನಲ್ಲಿ ನಡೆಸಿದ ಮಾತುಕತೆಗೆ ಪಕ್ಷ ಬದ್ಧವಾಗಿದೆ ಎಂದರು.</p>.<p>ಈ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮುಖರ್ಜಿ ಅವರನ್ನು ಆಯ್ಕೆ ಮಾಡಿದರೆ ತಮ್ಮ ಅಭ್ಯಂತರ ಇಲ್ಲ ಎಂದು ಕರುಣಾನಿಧಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ರಾಷ್ಟ್ರಪತಿ ಚುನಾವಣೆಗೆ ಯುಪಿಎ ಅಭ್ಯರ್ಥಿ ಬಗ್ಗೆ ಚರ್ಚಿಸಲು ಡಿಎಂಕೆ ಮುಖಂಡರರಾದ ಟಿ. ಆರ್. ಬಾಲು ಮತ್ತು ಎಂ.ಕೆ. ಸ್ಟಾಲಿನ್ ಅವರು ಗುರುವಾರ ಇಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರು.</p>.<p>ಬಾಲು ಮತ್ತು ಸ್ಟಾಲಿನ್ ಅವರು ಸಿಂಗ್ ಅವರನ್ನು ಸೌತ್ ಬ್ಲಾಕ್ನಲ್ಲಿ ಭೇಟಿ ಮಾಡಿ ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಪ್ರಧಾನಿ ಭೇಟಿ ಬಳಿಕ ಈ ಮುಖಂಡರು ಸೋನಿಯಾ ಅವರನ್ನು ಭೇಟಿಯಾಗಿ ರಾಷ್ಟ್ರಪತಿ ಸ್ಥಾನಕ್ಕೆ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರ ಸಂಭಾವ್ಯ ಸ್ಪರ್ಧೆ ಬಗ್ಗೆ ಚರ್ಚಿಸಿದರು ಎನ್ನಲಾಗಿದೆ.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರು ರಕ್ಷಣಾ ಸಚಿವ ಎ.ಕೆ. ಆಂಟನಿ ಅವರೊಂದಿಗೆ ಚೆನ್ನೈನಲ್ಲಿ ನಡೆಸಿದ ಮಾತುಕತೆಗೆ ಪಕ್ಷ ಬದ್ಧವಾಗಿದೆ ಎಂದರು.</p>.<p>ಈ ಚುನಾವಣೆಗೆ ಯುಪಿಎ ಅಭ್ಯರ್ಥಿಯಾಗಿ ಮುಖರ್ಜಿ ಅವರನ್ನು ಆಯ್ಕೆ ಮಾಡಿದರೆ ತಮ್ಮ ಅಭ್ಯಂತರ ಇಲ್ಲ ಎಂದು ಕರುಣಾನಿಧಿ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>