<p><strong>ಬೆಂಗಳೂರು:</strong> ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಜೆಡಿಎಸ್ ಬೆಂಬಲಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಪ್ರಕಟಿಸಿದರು.<br /> <br /> ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, `ಪ್ರಣವ್ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಂಡ ನಂತರ ಪ್ರಧಾನಿ ಸಿಂಗ್ ನನ್ನನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಕೋರಿದರು. ಹಾಗೆಯೇ ಪ್ರಣವ್ ಅವರೂ ಮನವಿ ಮಾಡಿದ್ದಾರೆ~ ಎಂದರು.<br /> <br /> ಎಲ್ಲವನ್ನೂ ತೆರೆದಿಡುವೆ: `50 ವರ್ಷಗಳ ನನ್ನ ರಾಜಕೀಯ ಜೀವನದ ಏಳು-ಬೀಳುಗಳನ್ನು ಪುಸ್ತಕದಲ್ಲಿ ದಾಖಲಿಸುತ್ತಿದ್ದೇನೆ. ಬಾಲ್ಯದ ಕುರಿತೂ ಪುಸ್ತಕದಲ್ಲಿ ಮಾಹಿತಿ ಇರಲಿದೆ. ಕುಮಾರಸ್ವಾಮಿ ಹಿಂದೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ಸಂದರ್ಭ ಹೇಗಿತ್ತು ಎಂಬ ಬಗ್ಗೆ ಬರೆಯುತ್ತೇನೆ. ಪುಸ್ತಕ ಬರೆಯುವುದಕ್ಕಾಗಿ ಪ್ರತಿ ದಿನ ಒಂದು ಗಂಟೆ ಮೀಸಲಿಟ್ಟಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರನ್ನು ಜೆಡಿಎಸ್ ಬೆಂಬಲಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಪ್ರಕಟಿಸಿದರು.<br /> <br /> ತಮ್ಮ ನಿವಾಸದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, `ಪ್ರಣವ್ ಅವರನ್ನು ರಾಷ್ಟ್ರಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ನಿರ್ಧಾರ ತೆಗೆದುಕೊಂಡ ನಂತರ ಪ್ರಧಾನಿ ಸಿಂಗ್ ನನ್ನನ್ನು ಸಂಪರ್ಕಿಸಿ ಬೆಂಬಲ ನೀಡುವಂತೆ ಕೋರಿದರು. ಹಾಗೆಯೇ ಪ್ರಣವ್ ಅವರೂ ಮನವಿ ಮಾಡಿದ್ದಾರೆ~ ಎಂದರು.<br /> <br /> ಎಲ್ಲವನ್ನೂ ತೆರೆದಿಡುವೆ: `50 ವರ್ಷಗಳ ನನ್ನ ರಾಜಕೀಯ ಜೀವನದ ಏಳು-ಬೀಳುಗಳನ್ನು ಪುಸ್ತಕದಲ್ಲಿ ದಾಖಲಿಸುತ್ತಿದ್ದೇನೆ. ಬಾಲ್ಯದ ಕುರಿತೂ ಪುಸ್ತಕದಲ್ಲಿ ಮಾಹಿತಿ ಇರಲಿದೆ. ಕುಮಾರಸ್ವಾಮಿ ಹಿಂದೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡ ಸಂದರ್ಭ ಹೇಗಿತ್ತು ಎಂಬ ಬಗ್ಗೆ ಬರೆಯುತ್ತೇನೆ. ಪುಸ್ತಕ ಬರೆಯುವುದಕ್ಕಾಗಿ ಪ್ರತಿ ದಿನ ಒಂದು ಗಂಟೆ ಮೀಸಲಿಟ್ಟಿದ್ದೇನೆ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>