<p><strong>ನವದೆಹಲಿ (ಪಿಟಿಐ</strong>): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಪ್ರಥಮ ಪ್ರಜೆ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತದಾನ ಮಾಡುವುದಿಲ್ಲ.<br /> <br /> ಹೌದು, ರಾಷ್ಟ್ರಪತಿಗಳ ಪತ್ರಿಕಾ ಕಾರ್ಯದರ್ಶಿ ವೇಣು ರಾಜಮೊನಿ ಅವರೇ ಸ್ವತಃ ಈ ವಿಷಯ ಸ್ಪಷ್ಟಪಡಿಸಿದ್ದಾರೆ.<br /> ರಾಜಕೀಯ ಜಿದ್ದಾಜಿದ್ದಿ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷದ ಪರ ಮತದಾನ ಮಾಡದೆ ತಟಸ್ಥವಾಗಿರುವ ದಿಸೆಯಲ್ಲಿ ಈ ಹಿಂದಿನ ರಾಷ್ಟ್ರಪತಿಗಳಲ್ಲಿ ಬಹುತೇಕರು ಪಾಲಿಸಿಕೊಂಡುಬಂದ ಸಂಪ್ರದಾಯದಂತೆ ಪ್ರಣವ್ ಅವರೂ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.<br /> <br /> ಪ್ರಣವ್ ದಕ್ಷಿಣ ಕೋಲ್ಕತ್ತ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದು ಮೇ 12 ರಂದು ಇಲ್ಲಿ ಚುನಾವಣೆ ನಡೆಯಲಿದೆ. ಕ್ಷೇತ್ರಕ್ಕೆ ತೆರಳಿ ಮತದಾನ ಮಾಡುವುದಕ್ಕಿಂತ ಅಂಚೆ ಮೂಲಕವೇ ಮತದಾನ ಮಾಡುವುದಕ್ಕೆ ಈ ಮೊದಲು ಪ್ರಣವ್ ನಿರ್ಧರಿಸಿದ್ದರು, ಆದರೆ ನಂತರ ಈ ನಿರ್ಧಾರವನ್ನು ಬದಲಿಸಿದ್ದಾರೆ ಎಂದು ತಿಳಿಸಲಾಗಿದೆ.<br /> <br /> ದಕ್ಷಿಣ ಕೋಲ್ಕತ್ತ ಕ್ಷೇತ್ರದಲ್ಲಿ ಬಹುಕೋನ ಸ್ಪರ್ಧೆ ಏರ್ಪಟ್ಟಿದ್ದು ಹಾಲಿ ಸಂಸದ ತೃಣಮೂಲ ಕಾಂಗ್ರೆಸ್ನ ಸುಬ್ರತಾ ಬಕ್ಷಿ ಅವರು, ಬಿಜೆಪಿ, ಕಾಂಗ್ರೆಸ್ ಹಾಗೂ ಸಿಪಿಎಂಗಳಿಂದ ತೀವ್ರ ಸ್ಪರ್ಧೆ ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ</strong>): ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ದೇಶದ ಪ್ರಥಮ ಪ್ರಜೆ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತದಾನ ಮಾಡುವುದಿಲ್ಲ.<br /> <br /> ಹೌದು, ರಾಷ್ಟ್ರಪತಿಗಳ ಪತ್ರಿಕಾ ಕಾರ್ಯದರ್ಶಿ ವೇಣು ರಾಜಮೊನಿ ಅವರೇ ಸ್ವತಃ ಈ ವಿಷಯ ಸ್ಪಷ್ಟಪಡಿಸಿದ್ದಾರೆ.<br /> ರಾಜಕೀಯ ಜಿದ್ದಾಜಿದ್ದಿ ಚುನಾವಣೆಯಲ್ಲಿ ಯಾವುದೇ ಒಂದು ಪಕ್ಷದ ಪರ ಮತದಾನ ಮಾಡದೆ ತಟಸ್ಥವಾಗಿರುವ ದಿಸೆಯಲ್ಲಿ ಈ ಹಿಂದಿನ ರಾಷ್ಟ್ರಪತಿಗಳಲ್ಲಿ ಬಹುತೇಕರು ಪಾಲಿಸಿಕೊಂಡುಬಂದ ಸಂಪ್ರದಾಯದಂತೆ ಪ್ರಣವ್ ಅವರೂ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಮಾಡದೇ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.<br /> <br /> ಪ್ರಣವ್ ದಕ್ಷಿಣ ಕೋಲ್ಕತ್ತ ಲೋಕಸಭಾ ಕ್ಷೇತ್ರದ ಮತದಾರರಾಗಿದ್ದು ಮೇ 12 ರಂದು ಇಲ್ಲಿ ಚುನಾವಣೆ ನಡೆಯಲಿದೆ. ಕ್ಷೇತ್ರಕ್ಕೆ ತೆರಳಿ ಮತದಾನ ಮಾಡುವುದಕ್ಕಿಂತ ಅಂಚೆ ಮೂಲಕವೇ ಮತದಾನ ಮಾಡುವುದಕ್ಕೆ ಈ ಮೊದಲು ಪ್ರಣವ್ ನಿರ್ಧರಿಸಿದ್ದರು, ಆದರೆ ನಂತರ ಈ ನಿರ್ಧಾರವನ್ನು ಬದಲಿಸಿದ್ದಾರೆ ಎಂದು ತಿಳಿಸಲಾಗಿದೆ.<br /> <br /> ದಕ್ಷಿಣ ಕೋಲ್ಕತ್ತ ಕ್ಷೇತ್ರದಲ್ಲಿ ಬಹುಕೋನ ಸ್ಪರ್ಧೆ ಏರ್ಪಟ್ಟಿದ್ದು ಹಾಲಿ ಸಂಸದ ತೃಣಮೂಲ ಕಾಂಗ್ರೆಸ್ನ ಸುಬ್ರತಾ ಬಕ್ಷಿ ಅವರು, ಬಿಜೆಪಿ, ಕಾಂಗ್ರೆಸ್ ಹಾಗೂ ಸಿಪಿಎಂಗಳಿಂದ ತೀವ್ರ ಸ್ಪರ್ಧೆ ಎದುರಿಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>