<p><strong>ಬೆಂಗಳೂರು: </strong> `ನದಿ ನೀರಿನ ಸಮರ್ಪಕ ಹಂಚಿಕೆಗಾಗಿ ರಾಷ್ಟ್ರೀಯ ಜಲನೀತಿಯನ್ನು ರೂಪಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು' ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ರಮೇಶ್ಗೌಡ ಆಗ್ರಹಿಸಿದರು.<br /> <br /> ಕಾವೇರಿ ಉಳಿವಿಗಾಗಿ ಭಾನುವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.ಕೇಂದ್ರ ಸರ್ಕಾರವು ಕಾವೇರಿ ನೀರಿನ ಹಂಚಿಕೆ ಸಂಬಂಧ ರಚಿಸಿರುವ ಕಾವೇರಿ ಮೇಲುಸ್ತುವಾರಿ ಸಮಿತಿಯು ರಾಜ್ಯದ ನದಿಗಳು, ಜಲಾಶಯಗಳ ವಿಚಾರದಲ್ಲಿ ರಾಜ್ಯದ ಮೇಲೆ ಸವಾರಿ ಮಾಡುತ್ತಿದೆ.</p>.<p>ಈ ಧೋರಣೆಯನ್ನು ಬಿಡಬೇಕು. ಬದಲಿಗೆ ನೀರಿನ ಹಂಚಿಕೆಗಾಗಿ ರಾಷ್ಟ್ರೀಯ ಜಲನೀತಿಯನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.ಈ ಕುರಿತು ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯ ಮತ್ತು ಕೇಂದ್ರದ ಶಾಸಕರು, ಸಚಿವರು ಜವಾಬ್ದಾರಿಯುತವಾಗಿ ವರ್ತಿಸಬೇಕು.</p>.<p>ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿನ ವಸ್ತುಸ್ಥಿತಿಯನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.<br /> <br /> ರಾಜ್ಯ ನೀರು ಬಿಡದ ಕಾರಣ ತಮಿಳುನಾಡಿಗೆ ರೂ 2,500 ಕೋಟಿ ಬೆಳೆ ನಷ್ಟವಾಗಿದೆ ಎಂಬ ಆರೋಪದ ಜತೆಗೆ ಕರ್ನಾಟಕ ಸರ್ಕಾರವು ಬೆಳೆ ಪರಿಹಾರವನ್ನು ಭರಿಸಬೇಕು ಮತ್ತು 53 ಟಿಎಂಸಿ ನೀರು ಬಿಡಬೇಕು ಎಂಬ ತಮಿಳುನಾಡಿನ ಬೇಡಿಕೆಯಲ್ಲಿ ನ್ಯಾಯವಿಲ್ಲ.</p>.<p>ಹೀಗಾಗಿ ರಾಜ್ಯ ಸರ್ಕಾರವು ಇಂತಹ ಒತ್ತಡಗಳಿಗೆ ಮಣಿಯಬಾರದು. ಕಾವೇರಿ ವಿಚಾರದಲ್ಲಿ ನಾಡಿನ ಜನತೆ ನಿರಂತರ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.ನಂತರ ಸ್ವಾತಂತ್ರ್ಯ ಉದ್ಯಾನದವರೆಗೆ ಜಾಥಾ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> `ನದಿ ನೀರಿನ ಸಮರ್ಪಕ ಹಂಚಿಕೆಗಾಗಿ ರಾಷ್ಟ್ರೀಯ ಜಲನೀತಿಯನ್ನು ರೂಪಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು' ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷ ರಮೇಶ್ಗೌಡ ಆಗ್ರಹಿಸಿದರು.<br /> <br /> ಕಾವೇರಿ ಉಳಿವಿಗಾಗಿ ಭಾನುವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.ಕೇಂದ್ರ ಸರ್ಕಾರವು ಕಾವೇರಿ ನೀರಿನ ಹಂಚಿಕೆ ಸಂಬಂಧ ರಚಿಸಿರುವ ಕಾವೇರಿ ಮೇಲುಸ್ತುವಾರಿ ಸಮಿತಿಯು ರಾಜ್ಯದ ನದಿಗಳು, ಜಲಾಶಯಗಳ ವಿಚಾರದಲ್ಲಿ ರಾಜ್ಯದ ಮೇಲೆ ಸವಾರಿ ಮಾಡುತ್ತಿದೆ.</p>.<p>ಈ ಧೋರಣೆಯನ್ನು ಬಿಡಬೇಕು. ಬದಲಿಗೆ ನೀರಿನ ಹಂಚಿಕೆಗಾಗಿ ರಾಷ್ಟ್ರೀಯ ಜಲನೀತಿಯನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.ಈ ಕುರಿತು ರಾಜ್ಯದ ಮುಖ್ಯಮಂತ್ರಿಗಳು, ರಾಜ್ಯ ಮತ್ತು ಕೇಂದ್ರದ ಶಾಸಕರು, ಸಚಿವರು ಜವಾಬ್ದಾರಿಯುತವಾಗಿ ವರ್ತಿಸಬೇಕು.</p>.<p>ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ನೀರಿಲ್ಲದೆ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿನ ವಸ್ತುಸ್ಥಿತಿಯನ್ನು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.<br /> <br /> ರಾಜ್ಯ ನೀರು ಬಿಡದ ಕಾರಣ ತಮಿಳುನಾಡಿಗೆ ರೂ 2,500 ಕೋಟಿ ಬೆಳೆ ನಷ್ಟವಾಗಿದೆ ಎಂಬ ಆರೋಪದ ಜತೆಗೆ ಕರ್ನಾಟಕ ಸರ್ಕಾರವು ಬೆಳೆ ಪರಿಹಾರವನ್ನು ಭರಿಸಬೇಕು ಮತ್ತು 53 ಟಿಎಂಸಿ ನೀರು ಬಿಡಬೇಕು ಎಂಬ ತಮಿಳುನಾಡಿನ ಬೇಡಿಕೆಯಲ್ಲಿ ನ್ಯಾಯವಿಲ್ಲ.</p>.<p>ಹೀಗಾಗಿ ರಾಜ್ಯ ಸರ್ಕಾರವು ಇಂತಹ ಒತ್ತಡಗಳಿಗೆ ಮಣಿಯಬಾರದು. ಕಾವೇರಿ ವಿಚಾರದಲ್ಲಿ ನಾಡಿನ ಜನತೆ ನಿರಂತರ ಹೋರಾಟಕ್ಕೆ ಮುಂದಾಗಬೇಕು ಎಂದು ಕರೆ ನೀಡಿದರು.ನಂತರ ಸ್ವಾತಂತ್ರ್ಯ ಉದ್ಯಾನದವರೆಗೆ ಜಾಥಾ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>