<p><strong>ಹೊನ್ನಾಳಿ:</strong> ಜಮ್ಮು-ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಗೊಳಿಸುವ ರಾಷ್ಟ್ರ ವಿರೋಧಿಗಳ ಹುನ್ನಾರಕ್ಕೆ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರಗಳು ಸಹಕರಿಸುತ್ತಿವೆ ಎಂದು ತಾಲ್ಲೂಕು ಆರ್ಎಸ್ಎಸ್ ಸಂಪರ್ಕ ಪ್ರಮುಖ್ ಶ್ರೀನಿವಾಸ್ ಆರೋಪಿಸಿದರು. <br /> <br /> ಜಮ್ಮು-ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಗೊಳಿಸಬಾರದು ಎಂದು ಆಗ್ರಹಿಸಿ ಪಟ್ಟಣದಲ್ಲಿ ಶುಕ್ರವಾರ `ಜಮ್ಮು-ಕಾಶ್ಮೀರ ಉಳಿಸಿ~ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. <br /> <br /> ಕಾಶ್ಮೀರ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯ 2010ರ ಅಕ್ಟೋಬರ್ನಲ್ಲಿ ಪತ್ರಕರ್ತ ದಿಲೀಪ್ ಪಡಗಾಂವ್ಕರ್, ಪ್ರೊ.ರಾಧಾ ಕುಮಾರ್, ಎಂ.ಎಂ. ಅನ್ಸಾರಿ ಎಂಬ ಮೂವರು ಸಂವಾದಕಾರರ ತಂಡ ರಚಿಸಿತು. ಈ ತಂಡ 2011ರ ಅಕ್ಟೋಬರ್ 12ರಂದು ಕೇಂದ್ರಕ್ಕೆ ವರದಿ ಸಲ್ಲಿಸಿತು. <br /> <br /> ಆದರೆ, 7 ತಿಂಗಳ ಕಾಲ ವರದಿಯನ್ನು ಗೌಪ್ಯವಾಗಿ ಇರಿಸಿಕೊಂಡ ಕೇಂದ್ರ ಸರ್ಕಾರ, 2012ರ ಮೇ 24ರಂದು ವರದಿಯನ್ನು ಸಾರ್ವಜನಿಕರ ಮುಂದಿಟ್ಟಿತು. ವರದಿಯಲ್ಲಿ ದೇಶದ ಏಕತೆ, ಅಖಂಡತೆ, ಸಾರ್ವಭೌಮತೆಗೆ ಧಕ್ಕೆಯಾಗುವಂತಹ ಅಂಶಗಳಿರುವುದು ಮೇಲ್ನೋಟಕ್ಕೇ ಕಂಡುಬರುತ್ತಿದ್ದು, ಮೂಲಭೂತವಾದಿಗಳ- ಪ್ರತ್ಯೇಕವಾದಿಗಳ ಬೇಡಿಕೆಗೆ ಸರ್ಕಾರ ಅಧಿಕೃತ ಮುದ್ರೆಯೊತ್ತಲು ಹೊರಟಿದೆ ಎಂದು ಟೀಕಿಸಿದರು. <br /> <br /> ವರದಿಯನ್ನು ಕೇಂದ್ರ ತಿರಸ್ಕರಿಸಬೇಕು ಹಾಗೂ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಾದ ಹಿಂದೂ ಮತ್ತು ಸಿಖ್ಖರಿಗೆ ರಕ್ಷಣೆ ನೀಡಬೇಕು ಎಂದೂ ಅವರು ಒತ್ತಾಯಿಸಿದರು. <br /> <br /> ಆರ್ಎಸ್ಎಸ್ ಮುಖಂಡ ಎಚ್.ಎಂ. ಅರುಣ್ಕುಮಾರ್ ಮಾತನಾಡಿ, ಜಮ್ಮು-ಕಾಶ್ಮೀರ ಕಬಳಿಸಲು ಮತ್ತು ಭಾರತದ ಆರ್ಥಿಕ ಪರಿಸ್ಥಿತಿ ಬುಡಮೇಲು ಮಾಡುವ ದುಷ್ಕೃತ್ಯ ನಡೆಸುತ್ತಿರುವ ಪಾಕಿಸ್ತಾನಕ್ಕೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು. <br /> <br /> ವರದಿ ವಿರೋಧಿಸಿ ಶಿರಸ್ತೇದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪ್ರವೀಣ್ ಪಟೇಲ್, ಮಂಜುನಾಥ್, ವಸಂತ್, ಜಯಪ್ಪ, ಮಂಜು, ಸಿದ್ದು, ವಿದ್ಯಾರ್ಥಿ ಮುಖಂಡರಾದ ಪ್ರಿಯದರ್ಶಿನಿ, ರಂಜಿತಾ, ಜ್ಯೋತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಜಮ್ಮು-ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಗೊಳಿಸುವ ರಾಷ್ಟ್ರ ವಿರೋಧಿಗಳ ಹುನ್ನಾರಕ್ಕೆ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ರಾಜ್ಯ ಸರ್ಕಾರಗಳು ಸಹಕರಿಸುತ್ತಿವೆ ಎಂದು ತಾಲ್ಲೂಕು ಆರ್ಎಸ್ಎಸ್ ಸಂಪರ್ಕ ಪ್ರಮುಖ್ ಶ್ರೀನಿವಾಸ್ ಆರೋಪಿಸಿದರು. <br /> <br /> ಜಮ್ಮು-ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಗೊಳಿಸಬಾರದು ಎಂದು ಆಗ್ರಹಿಸಿ ಪಟ್ಟಣದಲ್ಲಿ ಶುಕ್ರವಾರ `ಜಮ್ಮು-ಕಾಶ್ಮೀರ ಉಳಿಸಿ~ ಹೋರಾಟ ಸಮಿತಿ ವತಿಯಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. <br /> <br /> ಕಾಶ್ಮೀರ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವಾಲಯ 2010ರ ಅಕ್ಟೋಬರ್ನಲ್ಲಿ ಪತ್ರಕರ್ತ ದಿಲೀಪ್ ಪಡಗಾಂವ್ಕರ್, ಪ್ರೊ.ರಾಧಾ ಕುಮಾರ್, ಎಂ.ಎಂ. ಅನ್ಸಾರಿ ಎಂಬ ಮೂವರು ಸಂವಾದಕಾರರ ತಂಡ ರಚಿಸಿತು. ಈ ತಂಡ 2011ರ ಅಕ್ಟೋಬರ್ 12ರಂದು ಕೇಂದ್ರಕ್ಕೆ ವರದಿ ಸಲ್ಲಿಸಿತು. <br /> <br /> ಆದರೆ, 7 ತಿಂಗಳ ಕಾಲ ವರದಿಯನ್ನು ಗೌಪ್ಯವಾಗಿ ಇರಿಸಿಕೊಂಡ ಕೇಂದ್ರ ಸರ್ಕಾರ, 2012ರ ಮೇ 24ರಂದು ವರದಿಯನ್ನು ಸಾರ್ವಜನಿಕರ ಮುಂದಿಟ್ಟಿತು. ವರದಿಯಲ್ಲಿ ದೇಶದ ಏಕತೆ, ಅಖಂಡತೆ, ಸಾರ್ವಭೌಮತೆಗೆ ಧಕ್ಕೆಯಾಗುವಂತಹ ಅಂಶಗಳಿರುವುದು ಮೇಲ್ನೋಟಕ್ಕೇ ಕಂಡುಬರುತ್ತಿದ್ದು, ಮೂಲಭೂತವಾದಿಗಳ- ಪ್ರತ್ಯೇಕವಾದಿಗಳ ಬೇಡಿಕೆಗೆ ಸರ್ಕಾರ ಅಧಿಕೃತ ಮುದ್ರೆಯೊತ್ತಲು ಹೊರಟಿದೆ ಎಂದು ಟೀಕಿಸಿದರು. <br /> <br /> ವರದಿಯನ್ನು ಕೇಂದ್ರ ತಿರಸ್ಕರಿಸಬೇಕು ಹಾಗೂ ಕಾಶ್ಮೀರದಲ್ಲಿ ಅಲ್ಪಸಂಖ್ಯಾತರಾದ ಹಿಂದೂ ಮತ್ತು ಸಿಖ್ಖರಿಗೆ ರಕ್ಷಣೆ ನೀಡಬೇಕು ಎಂದೂ ಅವರು ಒತ್ತಾಯಿಸಿದರು. <br /> <br /> ಆರ್ಎಸ್ಎಸ್ ಮುಖಂಡ ಎಚ್.ಎಂ. ಅರುಣ್ಕುಮಾರ್ ಮಾತನಾಡಿ, ಜಮ್ಮು-ಕಾಶ್ಮೀರ ಕಬಳಿಸಲು ಮತ್ತು ಭಾರತದ ಆರ್ಥಿಕ ಪರಿಸ್ಥಿತಿ ಬುಡಮೇಲು ಮಾಡುವ ದುಷ್ಕೃತ್ಯ ನಡೆಸುತ್ತಿರುವ ಪಾಕಿಸ್ತಾನಕ್ಕೆ ನೀಡುತ್ತಿರುವ ಎಲ್ಲಾ ಸೌಲಭ್ಯಗಳನ್ನು ಸರ್ಕಾರ ನಿಲ್ಲಿಸಬೇಕು ಎಂದು ಆಗ್ರಹಿಸಿದರು. <br /> <br /> ವರದಿ ವಿರೋಧಿಸಿ ಶಿರಸ್ತೇದಾರರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪ್ರವೀಣ್ ಪಟೇಲ್, ಮಂಜುನಾಥ್, ವಸಂತ್, ಜಯಪ್ಪ, ಮಂಜು, ಸಿದ್ದು, ವಿದ್ಯಾರ್ಥಿ ಮುಖಂಡರಾದ ಪ್ರಿಯದರ್ಶಿನಿ, ರಂಜಿತಾ, ಜ್ಯೋತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>