<p><strong>ರಾಯ್ ಬರೇಲಿ (ಪಿಟಿಐ): </strong>ಉತ್ತರ ಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಭದ್ರಕೋಟೆಯಾದ ಅಮೇಥಿ ಹಾಗೂ ರಾಯ್ಬರೇಲಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿರುವ ಪ್ರಿಯಾಂಕಾ ವಾದ್ರಾ ತಮ್ಮ ಸಹೋದರ ರಾಹುಲ್ಗಾಗಿ `ಯಾವುದೇ ತೆರನಾದ ನೆರವು ನೀಡಲು ಸಿದ್ಧ~ ಎಂದು ಹೇಳಿದ್ದಾರೆ. <br /> <br /> ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಅವರು, `ಸದ್ಯಕ್ಕೆ ನಾನು ನಮ್ಮ ಸಂಸತ್ ಕ್ಷೇತ್ರಗಳ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದೇನೆ. ರಾಹುಲ್ ಇಚ್ಛಿಸಿ ದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತೇನೆ~ ಎಂದು ತಿಳಿಸಿದರು. `ನಾನು ಈವರೆಗೆ ಏನೂ ನಿರ್ಧರಿಸಿಲ್ಲ. ನನ್ನ ಅಣ್ಣನ ಜತೆ ಚರ್ಚಿಸಿ, ಅವನಿಗೆ ಏನು ಬೇಕೋ ಹಾಗೆ ಮಾಡುವೆ~ ಎಂದೂ ಅವರು ಹೇಳಿದರು.<br /> <br /> ಕಳೆದ ಎರಡು ವರ್ಷಗಳಿಂದ ಮುಚ್ಚಿರುವ ಖಾಸಗಿ ಕಾರ್ಖಾನೆಯ ನೌಕರರ ಜತೆ ಮಾತನಾಡಿದ ಪ್ರಿಯಾಂಕಾ, ಕಾರ್ಮಿಕರ ಸಮಸ್ಯೆ ಬಗೆಹರಿಸಲು ಯತ್ನ ನಡೆಯುತ್ತಿದೆ ಎಂದರು. ಇದು ಚುನಾವಣಾ ಸಮಯವಾದ್ದರಿಂದ ಭರವಸೆ ನೀಡಲು ಸಾಧ್ಯವಿಲ್ಲ. <br /> <br /> ಆದರೆ, ಎರಡು ವರ್ಷಗಳಿಂದಲೂ ನಾವು ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತಿದ್ದೇವೆ. ನೌಕರರು ಕಾರ್ಖಾನೆ ತೆರೆಯುವಂತೆ ಒತ್ತಾಯಿಸುತ್ತಿದ್ದಾರೆ. ಯಾರಾದರೂ ಉದ್ಯಮಿಗಳು ಬಂದು ಹೊಸ ಕಾರ್ಖಾನೆ ತೆರೆಯಬೇಕಿದೆ ಎಂದೂ ಆಕೆ ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ ಬರೇಲಿ (ಪಿಟಿಐ): </strong>ಉತ್ತರ ಪ್ರದೇಶ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ಭದ್ರಕೋಟೆಯಾದ ಅಮೇಥಿ ಹಾಗೂ ರಾಯ್ಬರೇಲಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿರುವ ಪ್ರಿಯಾಂಕಾ ವಾದ್ರಾ ತಮ್ಮ ಸಹೋದರ ರಾಹುಲ್ಗಾಗಿ `ಯಾವುದೇ ತೆರನಾದ ನೆರವು ನೀಡಲು ಸಿದ್ಧ~ ಎಂದು ಹೇಳಿದ್ದಾರೆ. <br /> <br /> ವರದಿಗಾರರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಅವರು, `ಸದ್ಯಕ್ಕೆ ನಾನು ನಮ್ಮ ಸಂಸತ್ ಕ್ಷೇತ್ರಗಳ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಕಾರ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದೇನೆ. ರಾಹುಲ್ ಇಚ್ಛಿಸಿ ದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತೇನೆ~ ಎಂದು ತಿಳಿಸಿದರು. `ನಾನು ಈವರೆಗೆ ಏನೂ ನಿರ್ಧರಿಸಿಲ್ಲ. ನನ್ನ ಅಣ್ಣನ ಜತೆ ಚರ್ಚಿಸಿ, ಅವನಿಗೆ ಏನು ಬೇಕೋ ಹಾಗೆ ಮಾಡುವೆ~ ಎಂದೂ ಅವರು ಹೇಳಿದರು.<br /> <br /> ಕಳೆದ ಎರಡು ವರ್ಷಗಳಿಂದ ಮುಚ್ಚಿರುವ ಖಾಸಗಿ ಕಾರ್ಖಾನೆಯ ನೌಕರರ ಜತೆ ಮಾತನಾಡಿದ ಪ್ರಿಯಾಂಕಾ, ಕಾರ್ಮಿಕರ ಸಮಸ್ಯೆ ಬಗೆಹರಿಸಲು ಯತ್ನ ನಡೆಯುತ್ತಿದೆ ಎಂದರು. ಇದು ಚುನಾವಣಾ ಸಮಯವಾದ್ದರಿಂದ ಭರವಸೆ ನೀಡಲು ಸಾಧ್ಯವಿಲ್ಲ. <br /> <br /> ಆದರೆ, ಎರಡು ವರ್ಷಗಳಿಂದಲೂ ನಾವು ಸಮಸ್ಯೆ ಪರಿಹಾರಕ್ಕೆ ಯತ್ನಿಸುತ್ತಿದ್ದೇವೆ. ನೌಕರರು ಕಾರ್ಖಾನೆ ತೆರೆಯುವಂತೆ ಒತ್ತಾಯಿಸುತ್ತಿದ್ದಾರೆ. ಯಾರಾದರೂ ಉದ್ಯಮಿಗಳು ಬಂದು ಹೊಸ ಕಾರ್ಖಾನೆ ತೆರೆಯಬೇಕಿದೆ ಎಂದೂ ಆಕೆ ನುಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>