<p><strong>ನವದೆಹಲಿ (ಪಿಟಿಐ): </strong>ಮುಂಬರುವ ಲೋಕಸಭೆ ಚುನಾವಣೆಯ ಪೂರ್ವ ತಯಾರಿಗೆ ಕಾಂಗ್ರೆಸ್ ಜನವರಿ 17ರಂದು ನವದೆಹಲಿಯಲ್ಲಿ ಎಐಸಿಸಿ ಸಭೆ ಕರೆದಿದ್ದು, ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರ ಹೆಸರು ಘೋಷಿಸುವ ಸಾಧ್ಯತೆ ಇದೆ.<br /> <br /> ಎಐಸಿಸಿ ಸಭೆಯಲ್ಲಿ ದೇಶದಾದ್ಯಂತ ಇರುವ ಪಕ್ಷದ ಸಾವಿರಾರು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ಎಐಸಿಸಿ ಸಭೆಯನ್ನು ಇಡೀ ಪಕ್ಷವೇ ಎದುರು ನೋಡುತ್ತಿದೆ. ಪ್ರಧಾನಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿರುವುದರಿಂದ ಈ ಬಗ್ಗೆ ತೀವ್ರ ಉತ್ಸುಕರಾಗಿದ್ದೇವೆ’ ಎಂದು ದ್ವಿವೇದಿ ಅವರು ಸುದ್ದಿಗೋಷ್ಠಿ ನಡೆಸಿದ ಕೆಲ ಗಂಟೆಗಳ ಬಳಿಕ ಕಾಂಗ್ರೆಸ್ ವಕ್ತಾರೆ ಮತ್ತು ಎಐಸಿಸಿ ಮಾಧ್ಯಮ ಕಾರ್ಯದರ್ಶಿ ಪ್ರಿಯಾ ದತ್ ಅವರು ಮಾಧ್ಯಮದವರಿಗೆ ತಿಳಿಸಿದರು.<br /> <br /> ‘ರಾಹುಲ್ ಗಾಂಧಿ ಅವರನ್ನು ಬಿಂಬಿಸುತ್ತಿರುವುದಕ್ಕೆ ನಾವು ಅವರಿಗೆ ಶುಭ ಕೋರುತ್ತೇವೆ. ಭವಿಷ್ಯದಲ್ಲಿ ಅವರು ಪಕ್ಷವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಈ ಕುರಿತು ಪಕ್ಷದಲ್ಲಿ ಒಮ್ಮತ ಮೂಡಿದೆ. ಈ ಬಗ್ಗೆ ಹೆಚ್ಚಿನ ವಿವರಣೆ ನೀಡುವ ಅಗತ್ಯವಿಲ್ಲ ಅಂದುಕೊಂಡಿದ್ದೇನೆ. ನಾಯಕತ್ವದ ಬಗ್ಗೆ ಪಕ್ಷದಲ್ಲಿ ಒಮ್ಮತ ಮೂಡಿರುವ ವಿಚಾರವನ್ನು ಈ ಮೊದಲು ಕೂಡ ತಿಳಿಸಲಾಗಿತ್ತು’ ಎಂದು ಪ್ರಶ್ನೆಯೊಂದಕ್ಕೆ ದತ್ ಉತ್ತರಿಸಿದರು.<br /> <br /> ಕಾಂಗ್ರೆಸ್ ಎದುರಿಸುತ್ತಿರುವ ಸರ್ವರೋಗಕ್ಕೂ ರಾಹುಲ್ ಗಾಂಧಿ ಅವರು ದಿವ್ಯ ಔಷಧಿ ಆಗುವರೇ ಎಂಬ ಪ್ರಶ್ನೆಗೆ, ‘ಯಾವುದನ್ನು ಕೂಡ ಪರಿಹಾರ ಎಂಬುದಾಗಿ ಪರಿಗಣಿಸಿಲ್ಲ. ಕಾಂಗ್ರೆಸ್ ಎಂದೂ ಕೂಡ ಪ್ರಧಾನಿ ಅಥವಾ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಮುಂಚಿತವಾಗಿ ಘೋಷಿಸಿಲ್ಲ. ಆದರೆ, ಈ ಕುರಿತು ಜನ ಬಯಕೆ ಹೊಂದಿದ್ದಾರೆ ಎನ್ನುವುದನ್ನು ನಾವೆಲ್ಲರೂ ಮನಗಂಡಿದ್ದೇವೆ’ ಎಂದು ಹೇಳಿದರು.<br /> <br /> ಜನವರಿಯಲ್ಲಿ ಜೈಪುರದಲ್ಲಿ ನಡೆದಿದ್ದ ಎಐಸಿಸಿ ಸಭೆ ಮತ್ತು ಚಿಂತನ ಶಿಬಿರದ ಬಳಿಕ ಎಐಸಿಸಿ ಮತ್ತೆ ಸಭೆ ಸೇರಿರಲಿಲ್ಲ. ಆ ಸಭೆಯಲ್ಲೇ ರಾಹುಲ್ ಗಾಂಧಿ ಅವರನ್ನು ಪಕ್ಷದ ಉಪಾಧ್ಯಕ್ಷರಾಗಿ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮುಂಬರುವ ಲೋಕಸಭೆ ಚುನಾವಣೆಯ ಪೂರ್ವ ತಯಾರಿಗೆ ಕಾಂಗ್ರೆಸ್ ಜನವರಿ 17ರಂದು ನವದೆಹಲಿಯಲ್ಲಿ ಎಐಸಿಸಿ ಸಭೆ ಕರೆದಿದ್ದು, ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರ ಹೆಸರು ಘೋಷಿಸುವ ಸಾಧ್ಯತೆ ಇದೆ.<br /> <br /> ಎಐಸಿಸಿ ಸಭೆಯಲ್ಲಿ ದೇಶದಾದ್ಯಂತ ಇರುವ ಪಕ್ಷದ ಸಾವಿರಾರು ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.<br /> <br /> ‘ಎಐಸಿಸಿ ಸಭೆಯನ್ನು ಇಡೀ ಪಕ್ಷವೇ ಎದುರು ನೋಡುತ್ತಿದೆ. ಪ್ರಧಾನಿ ಅಭ್ಯರ್ಥಿ ಹೆಸರು ಘೋಷಣೆಯಾಗಲಿರುವುದರಿಂದ ಈ ಬಗ್ಗೆ ತೀವ್ರ ಉತ್ಸುಕರಾಗಿದ್ದೇವೆ’ ಎಂದು ದ್ವಿವೇದಿ ಅವರು ಸುದ್ದಿಗೋಷ್ಠಿ ನಡೆಸಿದ ಕೆಲ ಗಂಟೆಗಳ ಬಳಿಕ ಕಾಂಗ್ರೆಸ್ ವಕ್ತಾರೆ ಮತ್ತು ಎಐಸಿಸಿ ಮಾಧ್ಯಮ ಕಾರ್ಯದರ್ಶಿ ಪ್ರಿಯಾ ದತ್ ಅವರು ಮಾಧ್ಯಮದವರಿಗೆ ತಿಳಿಸಿದರು.<br /> <br /> ‘ರಾಹುಲ್ ಗಾಂಧಿ ಅವರನ್ನು ಬಿಂಬಿಸುತ್ತಿರುವುದಕ್ಕೆ ನಾವು ಅವರಿಗೆ ಶುಭ ಕೋರುತ್ತೇವೆ. ಭವಿಷ್ಯದಲ್ಲಿ ಅವರು ಪಕ್ಷವನ್ನು ಮುನ್ನಡೆಸಿಕೊಂಡು ಹೋಗುತ್ತಾರೆ. ಈ ಕುರಿತು ಪಕ್ಷದಲ್ಲಿ ಒಮ್ಮತ ಮೂಡಿದೆ. ಈ ಬಗ್ಗೆ ಹೆಚ್ಚಿನ ವಿವರಣೆ ನೀಡುವ ಅಗತ್ಯವಿಲ್ಲ ಅಂದುಕೊಂಡಿದ್ದೇನೆ. ನಾಯಕತ್ವದ ಬಗ್ಗೆ ಪಕ್ಷದಲ್ಲಿ ಒಮ್ಮತ ಮೂಡಿರುವ ವಿಚಾರವನ್ನು ಈ ಮೊದಲು ಕೂಡ ತಿಳಿಸಲಾಗಿತ್ತು’ ಎಂದು ಪ್ರಶ್ನೆಯೊಂದಕ್ಕೆ ದತ್ ಉತ್ತರಿಸಿದರು.<br /> <br /> ಕಾಂಗ್ರೆಸ್ ಎದುರಿಸುತ್ತಿರುವ ಸರ್ವರೋಗಕ್ಕೂ ರಾಹುಲ್ ಗಾಂಧಿ ಅವರು ದಿವ್ಯ ಔಷಧಿ ಆಗುವರೇ ಎಂಬ ಪ್ರಶ್ನೆಗೆ, ‘ಯಾವುದನ್ನು ಕೂಡ ಪರಿಹಾರ ಎಂಬುದಾಗಿ ಪರಿಗಣಿಸಿಲ್ಲ. ಕಾಂಗ್ರೆಸ್ ಎಂದೂ ಕೂಡ ಪ್ರಧಾನಿ ಅಥವಾ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಮುಂಚಿತವಾಗಿ ಘೋಷಿಸಿಲ್ಲ. ಆದರೆ, ಈ ಕುರಿತು ಜನ ಬಯಕೆ ಹೊಂದಿದ್ದಾರೆ ಎನ್ನುವುದನ್ನು ನಾವೆಲ್ಲರೂ ಮನಗಂಡಿದ್ದೇವೆ’ ಎಂದು ಹೇಳಿದರು.<br /> <br /> ಜನವರಿಯಲ್ಲಿ ಜೈಪುರದಲ್ಲಿ ನಡೆದಿದ್ದ ಎಐಸಿಸಿ ಸಭೆ ಮತ್ತು ಚಿಂತನ ಶಿಬಿರದ ಬಳಿಕ ಎಐಸಿಸಿ ಮತ್ತೆ ಸಭೆ ಸೇರಿರಲಿಲ್ಲ. ಆ ಸಭೆಯಲ್ಲೇ ರಾಹುಲ್ ಗಾಂಧಿ ಅವರನ್ನು ಪಕ್ಷದ ಉಪಾಧ್ಯಕ್ಷರಾಗಿ ಘೋಷಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>