<p><strong>ನವದೆಹಲಿ (ಪಿಟಿಐ): </strong>ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಪಕ್ಷದ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮ ಗುರುವಾರ ಹೇಳಿದ್ದಾರೆ.<br /> <br /> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ನಂದನ್ ನಿಲೇಕಣಿ ಅವರು ಸ್ಪರ್ಧಿಸಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪ್ರಧಾನಿ ಆಗುವವರು ರಾಹುಲ್ ಗಾಂಧಿಯೇ ಹೊರತು ಬೇರೆ ಯಾರೂ ಅಲ್ಲ. ರಾಹುಲ್ ಅವರೇ ಪ್ರಧಾನಿ ಅಭ್ಯರ್ಥಿ’ ಎಂದು ಸ್ಪಷ್ಟಪಡಿಸಿದರು.<br /> <br /> ನಂದನ್ ನಿಲೇಕಣಿ ಅವರು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಊಹಾಪೋಹಗಳನ್ನು ಬುಧವಾರವೇ ಕಾಂಗ್ರೆಸ್ ನಿರಾಕರಿಸಿತ್ತು.<br /> ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಲಿದ್ದಾರೆಯೇ ಎಂಬ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಚೆಗಷ್ಟೇ ಸುಳಿವು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.<br /> <br /> ನಿಲೇಕಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ದಕ್ಷಿಣ ಬೆಂಗಳೂರು ಸ್ಥಾನದಿಂದ ಸ್ಪರ್ಧಿಸುವರು ಎಂದು ಈ ಹಿಂದೆ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರೇ ಪಕ್ಷದ ಪ್ರಧಾನಿ ಅಭ್ಯರ್ಥಿ ಆಗಲಿದ್ದಾರೆ ಎಂದು ಕೇಂದ್ರ ಸಚಿವ ಬೇನಿ ಪ್ರಸಾದ್ ವರ್ಮ ಗುರುವಾರ ಹೇಳಿದ್ದಾರೆ.<br /> <br /> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ನಂದನ್ ನಿಲೇಕಣಿ ಅವರು ಸ್ಪರ್ಧಿಸಲಿದ್ದಾರೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ನಮ್ಮ ಪ್ರಧಾನಿ ಆಗುವವರು ರಾಹುಲ್ ಗಾಂಧಿಯೇ ಹೊರತು ಬೇರೆ ಯಾರೂ ಅಲ್ಲ. ರಾಹುಲ್ ಅವರೇ ಪ್ರಧಾನಿ ಅಭ್ಯರ್ಥಿ’ ಎಂದು ಸ್ಪಷ್ಟಪಡಿಸಿದರು.<br /> <br /> ನಂದನ್ ನಿಲೇಕಣಿ ಅವರು ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಊಹಾಪೋಹಗಳನ್ನು ಬುಧವಾರವೇ ಕಾಂಗ್ರೆಸ್ ನಿರಾಕರಿಸಿತ್ತು.<br /> ಕಾಂಗ್ರೆಸ್ನ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಅವರು ಆಯ್ಕೆಯಾಗಲಿದ್ದಾರೆಯೇ ಎಂಬ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಈಚೆಗಷ್ಟೇ ಸುಳಿವು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.<br /> <br /> ನಿಲೇಕಣಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ, ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ದಕ್ಷಿಣ ಬೆಂಗಳೂರು ಸ್ಥಾನದಿಂದ ಸ್ಪರ್ಧಿಸುವರು ಎಂದು ಈ ಹಿಂದೆ ವರದಿಯಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>