<p><strong>ನವದೆಹಲಿ (ಪಿಟಿಐ):</strong> ಸಂಸದ ರಾಹುಲ್ ಗಾಂಧಿ 2009ರ ಚುನಾವಣಾ ಸಂದರ್ಭದಲ್ಲಿ ಆಸ್ತಿ ವಿವರ ಸಲ್ಲಿಸುವಾಗ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗವು ಅಮೇಥಿ ಕ್ಷೇತ್ರದ ಚುನಾವಣಾ ಅಧಿಕಾರಿಗೆ ಆದೇಶಿಸಿದೆ. <br /> <br /> ರಾಷ್ಟ್ರೀಯ ದಿನಪತ್ರಿಕೆಯೊಂದರ (ಈಗ ನಿಂತು ಹೋಗಿದೆ) ಮೇಲೆ ಹೊಂದಿರುವ ಷೇರಿನ ವಿವರ ನೀಡಿಲ್ಲ ಹಾಗೂ ಆಯೋಗಕ್ಕೆ ರಾಹುಲ್ ಕೆಲವೊಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ವಾಮಿ ನ.15ರಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.<br /> </p>.<p><strong>ಗಣಿ ಮರು ಹಂಚಿಕೆ<br /> ಕೋಲ್ಕತ್ತ (ಪಿಟಿಐ): </strong>ಎಂಟು ಕಲ್ಲಿದ್ದಲು ಗಣಿಗಳನ್ನು ಮರು ಹಂಚಿಕೆ ಮಾಡಲಾಗಿದೆ. ಅಂತರ ಸಚಿವಾಲಯ ಸಮಿತಿಯು ನಿರ್ಧಾರ ತೆಗೆದುಕೊಂಡ ಬಳಿಕ ಕಲ್ಲಿದ್ದಲು ಸಚಿವಾಲಯವು ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.<br /> `ಒಂದೇ ಕಂಪೆನಿ ಅಥವಾ ಜಂಟಿಯಾಗಿ ನಡೆಸಲು ನೀಡಿದ್ದ 8 ಕಲ್ಲಿದ್ದಲು ಗಣಿಗಳ ಮರು ಹಂಚಿಕೆ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ~ ಎಂದು ಮೂಲಗಳು ತಿಳಿಸಿವೆ.<br /> <br /> <strong>`ದ್ವೇಷ ಮರೆಯಬೇಕಾಗಿದೆ~<br /> ನವದೆಹಲಿ (ಪಿಟಿಐ): </strong>ಉಭಯ ದೇಶಗಳು ದ್ವೇಷವನ್ನು ಮರೆಯಬೇಕಾಗಿದೆ ಎಂದು ಹೇಳಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, `ಸಂಘರ್ಷಕ್ಕೆ ಮೂಲ ಕಾರಣವಾಗಿರುವ ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು~ ಎಂದು ಶನಿವಾರ ಇಲ್ಲಿ ಹೇಳಿದ್ದಾರೆ.ಉಭಯ ದೇಶಗಳ ನಡುವಿನ ದೀರ್ಘ ಕಾಲದ ವಿವಾದಗಳು ಸಂಘರ್ಷಕ್ಕೆ ಕಾರಣವಾಗಿವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸಂಸದ ರಾಹುಲ್ ಗಾಂಧಿ 2009ರ ಚುನಾವಣಾ ಸಂದರ್ಭದಲ್ಲಿ ಆಸ್ತಿ ವಿವರ ಸಲ್ಲಿಸುವಾಗ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ತನಿಖೆ ನಡೆಸುವಂತೆ ಚುನಾವಣಾ ಆಯೋಗವು ಅಮೇಥಿ ಕ್ಷೇತ್ರದ ಚುನಾವಣಾ ಅಧಿಕಾರಿಗೆ ಆದೇಶಿಸಿದೆ. <br /> <br /> ರಾಷ್ಟ್ರೀಯ ದಿನಪತ್ರಿಕೆಯೊಂದರ (ಈಗ ನಿಂತು ಹೋಗಿದೆ) ಮೇಲೆ ಹೊಂದಿರುವ ಷೇರಿನ ವಿವರ ನೀಡಿಲ್ಲ ಹಾಗೂ ಆಯೋಗಕ್ಕೆ ರಾಹುಲ್ ಕೆಲವೊಂದು ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸ್ವಾಮಿ ನ.15ರಂದು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು.<br /> </p>.<p><strong>ಗಣಿ ಮರು ಹಂಚಿಕೆ<br /> ಕೋಲ್ಕತ್ತ (ಪಿಟಿಐ): </strong>ಎಂಟು ಕಲ್ಲಿದ್ದಲು ಗಣಿಗಳನ್ನು ಮರು ಹಂಚಿಕೆ ಮಾಡಲಾಗಿದೆ. ಅಂತರ ಸಚಿವಾಲಯ ಸಮಿತಿಯು ನಿರ್ಧಾರ ತೆಗೆದುಕೊಂಡ ಬಳಿಕ ಕಲ್ಲಿದ್ದಲು ಸಚಿವಾಲಯವು ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.<br /> `ಒಂದೇ ಕಂಪೆನಿ ಅಥವಾ ಜಂಟಿಯಾಗಿ ನಡೆಸಲು ನೀಡಿದ್ದ 8 ಕಲ್ಲಿದ್ದಲು ಗಣಿಗಳ ಮರು ಹಂಚಿಕೆ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ~ ಎಂದು ಮೂಲಗಳು ತಿಳಿಸಿವೆ.<br /> <br /> <strong>`ದ್ವೇಷ ಮರೆಯಬೇಕಾಗಿದೆ~<br /> ನವದೆಹಲಿ (ಪಿಟಿಐ): </strong>ಉಭಯ ದೇಶಗಳು ದ್ವೇಷವನ್ನು ಮರೆಯಬೇಕಾಗಿದೆ ಎಂದು ಹೇಳಿರುವ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, `ಸಂಘರ್ಷಕ್ಕೆ ಮೂಲ ಕಾರಣವಾಗಿರುವ ಕಾಶ್ಮೀರ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಬೇಕು~ ಎಂದು ಶನಿವಾರ ಇಲ್ಲಿ ಹೇಳಿದ್ದಾರೆ.ಉಭಯ ದೇಶಗಳ ನಡುವಿನ ದೀರ್ಘ ಕಾಲದ ವಿವಾದಗಳು ಸಂಘರ್ಷಕ್ಕೆ ಕಾರಣವಾಗಿವೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>