<p><strong>ನವದೆಹಲಿ (ಪಿಟಿಐ) : </strong>ನರೇಂದ್ರ ಮೋದಿ ದೇಶದ ಪ್ರಧಾನಿ ಆದಲ್ಲಿ 22 ಸಾವಿರ ಜನರು ಹತ್ಯೆಯಾಗಲಿದ್ದಾರೆ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಶನಿವಾರ ದೂರು ಸಲ್ಲಿಸಿದೆ.</p>.<p>‘ಒಂದೊಮ್ಮೆ ಮೋದಿ ಪ್ರಧಾನಿ ಆದರೆ 22 ಸಾವಿರ ಮಂದಿಯ ಸಾಮೂಹಿಕ ಹತ್ಯಾಕಾಂಡ ನಡೆಯುವ ಸಾಧ್ಯತೆ ಇದೆ ಎಂದು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ರಾಹುಲ್ ಶುಕ್ರವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿ ಅನಂತ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಅಧಿಕಾರಿ ವಿ. ಎಸ್. ಸಂಪತ್ ಅವರನ್ನು ಭೇಟಿ ಮಾಡಿ ರಾಹುಲ್ ವಿರುದ್ಧ ಕ್ರಮ ಜರುಗಿಸುವಂತೆ ದೂರು ನೀಡಿದೆ.</p>.<p>ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 30ರಂದು ಮತದಾನದ ವೇಳೆ ಅಹಿತಕರ ಘಟನೆ ಸಂಭವಿಸಲು ಹಲವು ಮತಗಟ್ಟೆಗಳಲ್ಲಿ ಸಿಸಿಟಿವಿ ಮತ್ತು ಕೇಂದ್ರ ಭದ್ರತಾ ಪಡೆ ಇಲ್ಲದಿರುವುದೇ ಕಾರಣ. ಹೀಗಾಗಿ ಮುಂದಿನ 7 ಮತ್ತು 8ನೇ ಹಂತದ ಮತದಾನಕ್ಕೆ ಸಿಸಿಟಿವಿ ಮತ್ತು ಕೇಂದ್ರ ಭದ್ರತಾ ಪಡೆ ನಿಯೋಜಿಸುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ) : </strong>ನರೇಂದ್ರ ಮೋದಿ ದೇಶದ ಪ್ರಧಾನಿ ಆದಲ್ಲಿ 22 ಸಾವಿರ ಜನರು ಹತ್ಯೆಯಾಗಲಿದ್ದಾರೆ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಶನಿವಾರ ದೂರು ಸಲ್ಲಿಸಿದೆ.</p>.<p>‘ಒಂದೊಮ್ಮೆ ಮೋದಿ ಪ್ರಧಾನಿ ಆದರೆ 22 ಸಾವಿರ ಮಂದಿಯ ಸಾಮೂಹಿಕ ಹತ್ಯಾಕಾಂಡ ನಡೆಯುವ ಸಾಧ್ಯತೆ ಇದೆ ಎಂದು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದ ವೇಳೆ ರಾಹುಲ್ ಶುಕ್ರವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆ ಖಂಡಿಸಿ ಅನಂತ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಅಧಿಕಾರಿ ವಿ. ಎಸ್. ಸಂಪತ್ ಅವರನ್ನು ಭೇಟಿ ಮಾಡಿ ರಾಹುಲ್ ವಿರುದ್ಧ ಕ್ರಮ ಜರುಗಿಸುವಂತೆ ದೂರು ನೀಡಿದೆ.</p>.<p>ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 30ರಂದು ಮತದಾನದ ವೇಳೆ ಅಹಿತಕರ ಘಟನೆ ಸಂಭವಿಸಲು ಹಲವು ಮತಗಟ್ಟೆಗಳಲ್ಲಿ ಸಿಸಿಟಿವಿ ಮತ್ತು ಕೇಂದ್ರ ಭದ್ರತಾ ಪಡೆ ಇಲ್ಲದಿರುವುದೇ ಕಾರಣ. ಹೀಗಾಗಿ ಮುಂದಿನ 7 ಮತ್ತು 8ನೇ ಹಂತದ ಮತದಾನಕ್ಕೆ ಸಿಸಿಟಿವಿ ಮತ್ತು ಕೇಂದ್ರ ಭದ್ರತಾ ಪಡೆ ನಿಯೋಜಿಸುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>