<p>ಹೊಸನಗರ: ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ವ್ಯಾಪ್ತಿಯಲ್ಲಿ ಹಿಂದೂ ರುದ್ರಭೂಮಿ ಕೊರತೆ ಕಾರಣ ಎಲ್ಲೆಂದರಲ್ಲಿ ಶವಗಳ ಅಂತ್ಯಸಂಸ್ಕಾರ ನಡೆಸಬೇಕಾದ ಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿಗ್ರಾಮ ಪಂಚಾಯ್ತಿಯ ಸಹಕಾರದೊಂದಿಗೆ ಗ್ರಾಮಸ್ಥರೇ ಹಣ ಕ್ರೋಡೀಕರಿಸಿ ಶುಕ್ರವಾರ ರುದ್ರಭೂಮಿಯಲ್ಲಿ ಶೆಡ್ ನಿರ್ಮಿಸಿದರು.<br /> <br /> ಗ್ರಾಮ ಪಂಚಾಯ್ತಿ ಕಚೇರಿಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ 298 ಸರ್ವೆ ನಂಬರಿನಲ್ಲಿ ಜಾಗ ಸಮತಟ್ಟು ಮಾಡಿ, ಶವ ಸುಡಲು ಶೆಡ್ ನಿರ್ಮಾಣ ಮಾಡುವುದರ ಮೂಲಕ ಗ್ರಾಮಸ್ಥರು ಸ್ಮಶಾನದ ವ್ಯವಸ್ಥೆ ಮಾಡಿಕೊಂಡರು.<br /> <br /> ಗ್ರಾಮ ಪಂಚಾಯ್ತಿ ಸದಸ್ಯ ರಾಜೇಂದ್ರ ಶೆಟ್ಟಿ ಮಾತನಾಡಿ, ‘ಗ್ರಾಮದಲ್ಲಿ ರುದ್ರಭೂಮಿಯ ಅಗತ್ಯವಿತ್ತು. ಸ್ಮಶಾನ ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿದ್ದೆವು. ಆದರೆ, ಸರ್ಕಾರ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಹಣ ಹಾಕಿಕೊಂಡು ರುದ್ರಭೂಮಿ ನಿರ್ಮಿಸಲು ಪಣತೊಟ್ಟರು’ ಎಂದು ಹೇಳಿದರು.<br /> <br /> ನಿಟ್ಟೂರು ಗ್ರಾಮದ ಪ್ರಮುಖರಾದ ಪ್ರಮುಖರಾದ ಪ್ರಶಾಂತ್, ಅಶೋಕ ಕುಂಬ್ಳೆ, ಮಂಜುನಾಥ್, ಸಂತೋಷ ರಾವ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸನಗರ: ತಾಲ್ಲೂಕಿನ ನಿಟ್ಟೂರು ಗ್ರಾಮದಲ್ಲಿ ವ್ಯಾಪ್ತಿಯಲ್ಲಿ ಹಿಂದೂ ರುದ್ರಭೂಮಿ ಕೊರತೆ ಕಾರಣ ಎಲ್ಲೆಂದರಲ್ಲಿ ಶವಗಳ ಅಂತ್ಯಸಂಸ್ಕಾರ ನಡೆಸಬೇಕಾದ ಸ್ಥಿತಿ ಇತ್ತು. ಈ ಹಿನ್ನೆಲೆಯಲ್ಲಿಗ್ರಾಮ ಪಂಚಾಯ್ತಿಯ ಸಹಕಾರದೊಂದಿಗೆ ಗ್ರಾಮಸ್ಥರೇ ಹಣ ಕ್ರೋಡೀಕರಿಸಿ ಶುಕ್ರವಾರ ರುದ್ರಭೂಮಿಯಲ್ಲಿ ಶೆಡ್ ನಿರ್ಮಿಸಿದರು.<br /> <br /> ಗ್ರಾಮ ಪಂಚಾಯ್ತಿ ಕಚೇರಿಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ 298 ಸರ್ವೆ ನಂಬರಿನಲ್ಲಿ ಜಾಗ ಸಮತಟ್ಟು ಮಾಡಿ, ಶವ ಸುಡಲು ಶೆಡ್ ನಿರ್ಮಾಣ ಮಾಡುವುದರ ಮೂಲಕ ಗ್ರಾಮಸ್ಥರು ಸ್ಮಶಾನದ ವ್ಯವಸ್ಥೆ ಮಾಡಿಕೊಂಡರು.<br /> <br /> ಗ್ರಾಮ ಪಂಚಾಯ್ತಿ ಸದಸ್ಯ ರಾಜೇಂದ್ರ ಶೆಟ್ಟಿ ಮಾತನಾಡಿ, ‘ಗ್ರಾಮದಲ್ಲಿ ರುದ್ರಭೂಮಿಯ ಅಗತ್ಯವಿತ್ತು. ಸ್ಮಶಾನ ನಿರ್ಮಿಸಿಕೊಡುವಂತೆ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿದ್ದೆವು. ಆದರೆ, ಸರ್ಕಾರ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಗ್ರಾಮಸ್ಥರೇ ಹಣ ಹಾಕಿಕೊಂಡು ರುದ್ರಭೂಮಿ ನಿರ್ಮಿಸಲು ಪಣತೊಟ್ಟರು’ ಎಂದು ಹೇಳಿದರು.<br /> <br /> ನಿಟ್ಟೂರು ಗ್ರಾಮದ ಪ್ರಮುಖರಾದ ಪ್ರಮುಖರಾದ ಪ್ರಶಾಂತ್, ಅಶೋಕ ಕುಂಬ್ಳೆ, ಮಂಜುನಾಥ್, ಸಂತೋಷ ರಾವ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>