<p><strong>ಶ್ರೀರಂಗಪಟ್ಟಣ:</strong> ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ರೂ11.5 ಲಕ್ಷ ನಗದನ್ನು ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಸಿಬ್ಬಂದಿ ಶನಿವಾರ ತಾಲ್ಲೂಕಿನ ಗಡಿಭಾಗದಲ್ಲಿ ವಶಪಡಿಸಿಕೊಂಡಿದ್ದಾರೆ.<br /> <br /> ಮೈಸೂರು– ಶ್ರೀರಂಗಪಟ್ಟಣ ರಸ್ತೆಯ ಕಳಸ್ತವಾಡಿ ಬಳಿ ಕಾರನ್ನು ಚುನಾವಣಾ ಸಿಬ್ಬಂದಿ ತಡೆದು ತಪಾಸಣೆ ನಡೆಸಿದಾಗ ಕಾರಿನಲ್ಲಿ ಹಣ ಇರುವುದು ಪತ್ತೆಯಾಗಿದೆ.<br /> <br /> ಮೈಸೂರಿನ ಶ್ರೀರಾಂಪುರ ಬಡಾವಣೆಯ ಎಂ. ನಾಗರಾಜು ಅವರು ಹಣ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> ಹಾಸನ ಜಿಲ್ಲೆಯ ಹಿರೀಸಾವೆಯಲ್ಲಿರುವ ತಮ್ಮ ಸ್ನೇಹಿತರಿಗೆ ನೀಡಲು ಹಣ ಕೊಂಡೊಯ್ಯುತ್ತಿರುವುದಾಗಿ ನಾಗರಾಜು ಅಧಿಕಾರಿಗಳ ಎದುರು ಹೇಳಿದ್ದಾರೆ.<br /> <br /> ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಜಯಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಸೂಕ್ತ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ರೂ11.5 ಲಕ್ಷ ನಗದನ್ನು ಸೆಕ್ಟರಲ್ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ಸಿಬ್ಬಂದಿ ಶನಿವಾರ ತಾಲ್ಲೂಕಿನ ಗಡಿಭಾಗದಲ್ಲಿ ವಶಪಡಿಸಿಕೊಂಡಿದ್ದಾರೆ.<br /> <br /> ಮೈಸೂರು– ಶ್ರೀರಂಗಪಟ್ಟಣ ರಸ್ತೆಯ ಕಳಸ್ತವಾಡಿ ಬಳಿ ಕಾರನ್ನು ಚುನಾವಣಾ ಸಿಬ್ಬಂದಿ ತಡೆದು ತಪಾಸಣೆ ನಡೆಸಿದಾಗ ಕಾರಿನಲ್ಲಿ ಹಣ ಇರುವುದು ಪತ್ತೆಯಾಗಿದೆ.<br /> <br /> ಮೈಸೂರಿನ ಶ್ರೀರಾಂಪುರ ಬಡಾವಣೆಯ ಎಂ. ನಾಗರಾಜು ಅವರು ಹಣ ಸಾಗಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> ಹಾಸನ ಜಿಲ್ಲೆಯ ಹಿರೀಸಾವೆಯಲ್ಲಿರುವ ತಮ್ಮ ಸ್ನೇಹಿತರಿಗೆ ನೀಡಲು ಹಣ ಕೊಂಡೊಯ್ಯುತ್ತಿರುವುದಾಗಿ ನಾಗರಾಜು ಅಧಿಕಾರಿಗಳ ಎದುರು ಹೇಳಿದ್ದಾರೆ.<br /> <br /> ವಶಪಡಿಸಿಕೊಂಡ ಹಣವನ್ನು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಲಾಗಿದೆ ಎಂದು ಇನ್ಸ್ಪೆಕ್ಟರ್ ಜಯಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>