<p><strong>ಬೆಳಗಾವಿ:</strong> ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರಾದ 112 ಮಂದಿಗೆ 32.44 ಲಕ್ಷ ರೂ ಪರಿಹಾರ ಧನವನ್ನು ಜಿಲ್ಲಾ ಆಡಳಿತದ ವತಿಯಿಂದ ವಿತರಿಸಲಾಯಿತು.<br /> <br /> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಒಟ್ಟು 47 ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸಲಾಯಿತು.<br /> <br /> ಅದರಂತೆ 2011ರ ಸೆ. 1 ರಿಂದ ನವೆಂಬರ್ 30ರ ವರೆಗೆ ಪರಿಶಿಷ್ಟ ಜಾತಿ, ಪಂಗಡದ ದೌರ್ಜನ್ಯ ಅಧಿನಿಯಮದ ಅಡಿ ಒಟ್ಟು 36 ಪ್ರಕರಣಗಳು ವರದಿಯಾಗಿವೆ. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ 22 ಪ್ರಕರಣಗಳಿವೆ ಎಂದು ತಿಳಿಸಲಾಯಿತು.<br /> <br /> ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಅವರು ಭೋಜ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಕೊಲೆಗೆ ಈಡಾಗಿದ್ದ ಪರಿಶಿಷ್ಟ ಜಾತಿಯ ರಾಜೀವ ಸಣ್ಣಕ್ಕಿ ಅವರ ಪತ್ನಿಗೆ 2 ಲಕ್ಷ ರೂ. ಪರಿಹಾರ ಧನ ವಿತರಿಸಲಾಯಿತು.<br /> <br /> ವಿವಿಧ ಇಲಾಖೆಗಳ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳಿಗೆ ನಗರ, ಸ್ಥಳೀಯ ಸಂಸ್ಥೆಗಳು ಶೇ 22.75 ಹಾಗೂ ಗ್ರಾಮ ಪಂಚಾಯಿತಿಯ ಶೇ 25 ರ ಮೀಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚನೆ ನಡೆಸಿದರು.<br /> <br /> ಅನುಗೋಳ, ಬಸವನಕುಡಚಿ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ವರ್ಗದ ಜನರಿಗೆ ಜನಸಂಖ್ಯೆ ಆಧಾರದ ಮೇಲೆ ಸ್ಮಶಾನ ಭೂಮಿ ದೊರಕಿಸಿಕೊಡಬೇಕು. ಯಾವುದೇ ಕಾರಣ ನೀಡದೇ ಸೌಲಭ್ಯ ಕಲ್ಪಿಸಬೇಕು. ಅದರಂತೆ ಅಲಾರವಾಡ ಗ್ರಾಮದಲ್ಲಿ ಹಾಗೂ ಖಾನಾಪುರ ಪಟ್ಟಣದಲ್ಲಿ ಅವಶ್ಯಕ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಸಂದೀಪ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಜನಾಂಗದ ಮೇಲೆ ದೌರ್ಜನ್ಯ ಮಾಡುವವರು ವಿವಿಧ ಪ್ರಕರಣಗಳಲ್ಲಿ ತ್ವರಿತವಾಗಿ ಜಾಮೀನು ಪಡೆಯುತ್ತಿರುವುದು ಮನಗಂಡು, ಈ ಕುರಿತಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದರು.<br /> <br /> ಶಾಸಕ ಕಾಕಾಸಾಹೇಬ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ಶಿಷ್ಯವೇತನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಗಂಗಾ ಕಲ್ಯಾಣ ಯೋಜನೆಯಡಿ ತೋಡಲಾಗುವ ಕೊಳವೆ ಬಾವಿಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಕ್ರಮಕೈಗೊಳ್ಳಬೇಕು ಎಂದರು.<br /> <br /> ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ಮಲ್ಲೆೀಶ ಚೌಗಲೆ, ಪ್ರಕಾಶ ಹಲಗಿ, ಅಶೋಕ ಐನವರ, ಸಿ.ಆರ್.ಇ. ಸೆಲ್ ಎಸ್.ಪಿ. ಅಶೋಕ ಕುರೇರ, ಜಿ.ಪಂ. ಉಪಕಾರ್ಯದರ್ಶಿ ಶಶಿಧರ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವರ್ಗಗಳ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ಥರಾದ 112 ಮಂದಿಗೆ 32.44 ಲಕ್ಷ ರೂ ಪರಿಹಾರ ಧನವನ್ನು ಜಿಲ್ಲಾ ಆಡಳಿತದ ವತಿಯಿಂದ ವಿತರಿಸಲಾಯಿತು.<br /> <br /> ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (ದೌರ್ಜನ್ಯ ನಿಯಂತ್ರಣ) ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಒಟ್ಟು 47 ಪ್ರಕರಣಗಳಲ್ಲಿ ಪರಿಹಾರ ಧನ ವಿತರಿಸಲಾಯಿತು.<br /> <br /> ಅದರಂತೆ 2011ರ ಸೆ. 1 ರಿಂದ ನವೆಂಬರ್ 30ರ ವರೆಗೆ ಪರಿಶಿಷ್ಟ ಜಾತಿ, ಪಂಗಡದ ದೌರ್ಜನ್ಯ ಅಧಿನಿಯಮದ ಅಡಿ ಒಟ್ಟು 36 ಪ್ರಕರಣಗಳು ವರದಿಯಾಗಿವೆ. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ 22 ಪ್ರಕರಣಗಳಿವೆ ಎಂದು ತಿಳಿಸಲಾಯಿತು.<br /> <br /> ಜಿಲ್ಲಾಧಿಕಾರಿ ವಿ. ಅನ್ಬುಕುಮಾರ ಅವರು ಭೋಜ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಯಲ್ಲಿ ಕೊಲೆಗೆ ಈಡಾಗಿದ್ದ ಪರಿಶಿಷ್ಟ ಜಾತಿಯ ರಾಜೀವ ಸಣ್ಣಕ್ಕಿ ಅವರ ಪತ್ನಿಗೆ 2 ಲಕ್ಷ ರೂ. ಪರಿಹಾರ ಧನ ವಿತರಿಸಲಾಯಿತು.<br /> <br /> ವಿವಿಧ ಇಲಾಖೆಗಳ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಸಮಸ್ಯೆಗಳಿಗೆ ನಗರ, ಸ್ಥಳೀಯ ಸಂಸ್ಥೆಗಳು ಶೇ 22.75 ಹಾಗೂ ಗ್ರಾಮ ಪಂಚಾಯಿತಿಯ ಶೇ 25 ರ ಮೀಸಲು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಸೂಚನೆ ನಡೆಸಿದರು.<br /> <br /> ಅನುಗೋಳ, ಬಸವನಕುಡಚಿ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪಂಗಡ ವರ್ಗದ ಜನರಿಗೆ ಜನಸಂಖ್ಯೆ ಆಧಾರದ ಮೇಲೆ ಸ್ಮಶಾನ ಭೂಮಿ ದೊರಕಿಸಿಕೊಡಬೇಕು. ಯಾವುದೇ ಕಾರಣ ನೀಡದೇ ಸೌಲಭ್ಯ ಕಲ್ಪಿಸಬೇಕು. ಅದರಂತೆ ಅಲಾರವಾಡ ಗ್ರಾಮದಲ್ಲಿ ಹಾಗೂ ಖಾನಾಪುರ ಪಟ್ಟಣದಲ್ಲಿ ಅವಶ್ಯಕ ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಸಭೆಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಸಂದೀಪ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ಪಂಗಡ ಜನಾಂಗದ ಮೇಲೆ ದೌರ್ಜನ್ಯ ಮಾಡುವವರು ವಿವಿಧ ಪ್ರಕರಣಗಳಲ್ಲಿ ತ್ವರಿತವಾಗಿ ಜಾಮೀನು ಪಡೆಯುತ್ತಿರುವುದು ಮನಗಂಡು, ಈ ಕುರಿತಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ ಎಂದರು.<br /> <br /> ಶಾಸಕ ಕಾಕಾಸಾಹೇಬ ಪಾಟೀಲ ಮಾತನಾಡಿ, ಪರಿಶಿಷ್ಟ ಜಾತಿ, ವರ್ಗದ ಮಕ್ಕಳಿಗೆ ಶಿಷ್ಯವೇತನ ನೀಡುವಲ್ಲಿ ವಿಳಂಬ ಧೋರಣೆ ಅನುಸರಿಸಬಾರದು. ಗಂಗಾ ಕಲ್ಯಾಣ ಯೋಜನೆಯಡಿ ತೋಡಲಾಗುವ ಕೊಳವೆ ಬಾವಿಗಳಿಗೆ ಸಮರ್ಪಕ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲು ಕ್ರಮಕೈಗೊಳ್ಳಬೇಕು ಎಂದರು.<br /> <br /> ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ಮಲ್ಲೆೀಶ ಚೌಗಲೆ, ಪ್ರಕಾಶ ಹಲಗಿ, ಅಶೋಕ ಐನವರ, ಸಿ.ಆರ್.ಇ. ಸೆಲ್ ಎಸ್.ಪಿ. ಅಶೋಕ ಕುರೇರ, ಜಿ.ಪಂ. ಉಪಕಾರ್ಯದರ್ಶಿ ಶಶಿಧರ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>