<p><strong>ಬೆಂಗಳೂರು:</strong> ನಗರದ ರಾಜಾಜಿನಗರ, ಮಲ್ಲೆೀಶ್ವರ ಹಾಗೂ ಗಾಂಧಿನಗರ ಸೇರಿದಂತೆ ಬೆಂಗಳೂರು ಪಶ್ಚಿಮ ಭಾಗದಿಂದ ಪೂರ್ವ ಭಾಗಕ್ಕೆ ತೆರಳುವ ಜನರ ಅನುಕೂಲಕ್ಕಾಗಿ ಬಿಬಿಎಂಪಿ ಸಹಯೋಗದೊಂದಿಗೆ 5.62 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ನಗರಾಭಿವೃದ್ಧಿ ಸಚಿವ ಎಸ್.ಸುರೇಶ್ಕುಮಾರ್ ಇತ್ತೀಚೆಗೆ ಚಾಲನೆ ನೀಡಿದರು. <br /> <br /> ಅತ್ಯಾಧುನಿಕ ಪುಂಗ್ ಟೆಕ್ನಿಕ್ ತಾಂತ್ರಿಕತೆ ಅಳವಡಿಸಿ ಕೈಗೊಳ್ಳುತ್ತಿರುವ ಈ ರೈಲ್ವೆ ಸುರಂಗಮಾರ್ಗ ಕಾಮಗಾರಿಗೆ ಶೇಷಾದ್ರಿಪುರದ ಲಿಂಕ್ ರಸ್ತೆಗೆ ಸಂಪರ್ಕಿಸುವ ಶ್ರೀರಾಮಪುರದ ರೈಲ್ವೆ ಕ್ರಾಸಿಂಗ್ ಬಳಿ ಚಾಲನೆ ನೀಡಿ ಮಾತನಾಡಿದ ಅವರು, `ಓಕಳಿಪುರಂ ರೈಲ್ವೆ ಕಾರಿಡಾರ್ನ್ನು ಸುಮಾರು 105 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ~ ಎಂದರು.<br /> `ಶೇಷಾದ್ರಿಪುರದ ಸ್ವಾತಿ ಹೋಟೆಲ್ ಬಳಿ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಸ್ಥಳ ಪರಿಶೀಲನೆ ಮಾಡಿ ಚಾಲನೆ ನೀಡಲಾಗುವುದು~ ಎಂದು ಭರವಸೆ ನೀಡಿದರು. <br /> <br /> ಶಾಸಕ ದಿನೇಶ್ ಗುಂಡೂರಾವ್, `ಕಳೆದ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಚಾಲನೆ ನೀಡಿದ್ದು ಶ್ಲಾಘನೀಯ ಕಾರ್ಯ. ಪಕ್ಷ ಭೇದ ಮರೆತು ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರೊಂದಿಗೆ ಕೈಜೋಡಿಸಿದ್ದೇನೆ~ ಎಂದು ಹೇಳಿದರು. <br /> <br /> ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹಾಗೂ ಬಿಬಿಎಂಪಿ ಸದಸ್ಯರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ರಾಜಾಜಿನಗರ, ಮಲ್ಲೆೀಶ್ವರ ಹಾಗೂ ಗಾಂಧಿನಗರ ಸೇರಿದಂತೆ ಬೆಂಗಳೂರು ಪಶ್ಚಿಮ ಭಾಗದಿಂದ ಪೂರ್ವ ಭಾಗಕ್ಕೆ ತೆರಳುವ ಜನರ ಅನುಕೂಲಕ್ಕಾಗಿ ಬಿಬಿಎಂಪಿ ಸಹಯೋಗದೊಂದಿಗೆ 5.62 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗೆ ನಗರಾಭಿವೃದ್ಧಿ ಸಚಿವ ಎಸ್.ಸುರೇಶ್ಕುಮಾರ್ ಇತ್ತೀಚೆಗೆ ಚಾಲನೆ ನೀಡಿದರು. <br /> <br /> ಅತ್ಯಾಧುನಿಕ ಪುಂಗ್ ಟೆಕ್ನಿಕ್ ತಾಂತ್ರಿಕತೆ ಅಳವಡಿಸಿ ಕೈಗೊಳ್ಳುತ್ತಿರುವ ಈ ರೈಲ್ವೆ ಸುರಂಗಮಾರ್ಗ ಕಾಮಗಾರಿಗೆ ಶೇಷಾದ್ರಿಪುರದ ಲಿಂಕ್ ರಸ್ತೆಗೆ ಸಂಪರ್ಕಿಸುವ ಶ್ರೀರಾಮಪುರದ ರೈಲ್ವೆ ಕ್ರಾಸಿಂಗ್ ಬಳಿ ಚಾಲನೆ ನೀಡಿ ಮಾತನಾಡಿದ ಅವರು, `ಓಕಳಿಪುರಂ ರೈಲ್ವೆ ಕಾರಿಡಾರ್ನ್ನು ಸುಮಾರು 105 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ~ ಎಂದರು.<br /> `ಶೇಷಾದ್ರಿಪುರದ ಸ್ವಾತಿ ಹೋಟೆಲ್ ಬಳಿ ಪಾದಚಾರಿ ಮಾರ್ಗ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಸ್ಥಳ ಪರಿಶೀಲನೆ ಮಾಡಿ ಚಾಲನೆ ನೀಡಲಾಗುವುದು~ ಎಂದು ಭರವಸೆ ನೀಡಿದರು. <br /> <br /> ಶಾಸಕ ದಿನೇಶ್ ಗುಂಡೂರಾವ್, `ಕಳೆದ ಹತ್ತು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆಗೆ ಚಾಲನೆ ನೀಡಿದ್ದು ಶ್ಲಾಘನೀಯ ಕಾರ್ಯ. ಪಕ್ಷ ಭೇದ ಮರೆತು ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರೊಂದಿಗೆ ಕೈಜೋಡಿಸಿದ್ದೇನೆ~ ಎಂದು ಹೇಳಿದರು. <br /> <br /> ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹಾಗೂ ಬಿಬಿಎಂಪಿ ಸದಸ್ಯರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>