<p><strong>ನವದೆಹಲಿ (ಪಿಟಿಐ): </strong>ಆಂಧ್ರಪ್ರದೇಶದಲ್ಲಿ ಕೈಗೊಳ್ಳಲಾದ ಮೂಲಸೌಕರ್ಯ ಯೋಜನೆಯಲ್ಲಿ ಅಕ್ರಮ ಹಣ ವರ್ಗಾವಣೆ ಆದ ಪ್ರಕರಣದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕ ಜಗನ್ಮೋಹನ್ ರೆಡ್ಡಿ ಹಾಗೂ ಅವರ ಆಪ್ತರಿಗೆ ಸೇರಿದ ರೂ.863 ಕೋಟಿ ಮೊತ್ತದ ಆಸ್ತಿಗಳನ್ನು ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿಕೊಂಡಿದೆ.<br /> <br /> ಹಿಂದಿನ ಆಂಧ್ರ ಸರ್ಕಾರದಿಂದ (ಜಗನ್ ತಂದೆ ವೈ.ಎಸ್. ರಾಜಶೇಖರ ರೆಡ್ಡಿ ಮುಖ್ಯಮಂತ್ರಿ ಆಗಿದ್ದ ಅವಧಿ) ಜಗನ್ ಹಾಗೂ ಅವರ ಆಪ್ತ ನಿಮ್ಮಗಡ ಪ್ರಸಾದ್ ಅವರ ಕಂಪೆನಿಗಳು ನೆರವು ಪಡೆದಿವೆ ಎಂಬ ಆರೋಪದಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.<br /> <br /> ವಿವಿಧ ಜಿಲ್ಲೆಗಳ ನಡುವೆ ರಸ್ತೆ ನಿರ್ಮಿಸುವ ‘ವ್ಯಾನ್ಪಿಕ್’ ಕಂಪೆನಿಗೆ ಆಗಿನ ಸರ್ಕಾರ ಅಕ್ರಮವಾಗಿ ಹಲವು ರಿಯಾಯತಿಗಳನ್ನು ನೀಡಿತ್ತು.<br /> ಜಗನ್ ಕಂಪೆನಿಗಳ ಅಕ್ರಮ ಹಣಕಾಸು ವ್ಯವಹಾರಗಳ ಕುರಿತು ಸಿಬಿಐ ಸಲ್ಲಿಸಿದ ಎಫ್ಐಆರ್ ಆಧರಿಸಿ ನಿರ್ದೇಶನಾಲಯ 2012ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.<br /> <br /> ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡ ಆಸ್ತಿಗಳ ಪೈಕಿ ಇದು ಗರಿಷ್ಠ ಪ್ರಮಾಣದ್ದು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಆಂಧ್ರಪ್ರದೇಶದಲ್ಲಿ ಕೈಗೊಳ್ಳಲಾದ ಮೂಲಸೌಕರ್ಯ ಯೋಜನೆಯಲ್ಲಿ ಅಕ್ರಮ ಹಣ ವರ್ಗಾವಣೆ ಆದ ಪ್ರಕರಣದಲ್ಲಿ ವೈಎಸ್ಆರ್ ಕಾಂಗ್ರೆಸ್ ನಾಯಕ ಜಗನ್ಮೋಹನ್ ರೆಡ್ಡಿ ಹಾಗೂ ಅವರ ಆಪ್ತರಿಗೆ ಸೇರಿದ ರೂ.863 ಕೋಟಿ ಮೊತ್ತದ ಆಸ್ತಿಗಳನ್ನು ತನಿಖೆ ನಡೆಸಿರುವ ಜಾರಿ ನಿರ್ದೇಶನಾಲಯ (ಇಡಿ) ಜಪ್ತಿ ಮಾಡಿಕೊಂಡಿದೆ.<br /> <br /> ಹಿಂದಿನ ಆಂಧ್ರ ಸರ್ಕಾರದಿಂದ (ಜಗನ್ ತಂದೆ ವೈ.ಎಸ್. ರಾಜಶೇಖರ ರೆಡ್ಡಿ ಮುಖ್ಯಮಂತ್ರಿ ಆಗಿದ್ದ ಅವಧಿ) ಜಗನ್ ಹಾಗೂ ಅವರ ಆಪ್ತ ನಿಮ್ಮಗಡ ಪ್ರಸಾದ್ ಅವರ ಕಂಪೆನಿಗಳು ನೆರವು ಪಡೆದಿವೆ ಎಂಬ ಆರೋಪದಡಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ.<br /> <br /> ವಿವಿಧ ಜಿಲ್ಲೆಗಳ ನಡುವೆ ರಸ್ತೆ ನಿರ್ಮಿಸುವ ‘ವ್ಯಾನ್ಪಿಕ್’ ಕಂಪೆನಿಗೆ ಆಗಿನ ಸರ್ಕಾರ ಅಕ್ರಮವಾಗಿ ಹಲವು ರಿಯಾಯತಿಗಳನ್ನು ನೀಡಿತ್ತು.<br /> ಜಗನ್ ಕಂಪೆನಿಗಳ ಅಕ್ರಮ ಹಣಕಾಸು ವ್ಯವಹಾರಗಳ ಕುರಿತು ಸಿಬಿಐ ಸಲ್ಲಿಸಿದ ಎಫ್ಐಆರ್ ಆಧರಿಸಿ ನಿರ್ದೇಶನಾಲಯ 2012ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದೆ.<br /> <br /> ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡ ಆಸ್ತಿಗಳ ಪೈಕಿ ಇದು ಗರಿಷ್ಠ ಪ್ರಮಾಣದ್ದು ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>