<p><strong>ಬೆಂಗಳೂರು: </strong>ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರನ್ನು ಕಳ್ಳಸಾಗಣೆ ಮಾಡಿರುವ ಆರೋಪ ಎದುರಿಸು-ತ್ತಿರುವ ಯಲ್ಲಾಪುರದ ಶಾಸಕ ಕೆ.ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್, ಅವರ ನಿಕಟವರ್ತಿ ಪ್ರಕಾಶ್ ಹೆಗಡೆ, ಹೊಸಪೇಟೆಯ ಕೆ.ಜನಾರ್ದನ ರೆಡ್ಡಿ ಮತ್ತು ಐ.ಎರ್ರಿಸ್ವಾಮಿ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.</p>.<p><br /> ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರವಿ ಎಂ. ನಾಯಕ್ ತಿರಸ್ಕರಿಸಿ, ಆದೇಶ ಹೊರಡಿಸಿದ್ದಾರೆ. ಎಲ್ಲ ಆರೋಪಿಗಳೂ ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಅವರಿಗೆ ತಿಳಿಯದೆಯೇ ತಪ್ಪು ನಡೆದಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ನ್ಯಾಯಾಧೀಶರು ಆದೇಶದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೇಲೆಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರನ್ನು ಕಳ್ಳಸಾಗಣೆ ಮಾಡಿರುವ ಆರೋಪ ಎದುರಿಸು-ತ್ತಿರುವ ಯಲ್ಲಾಪುರದ ಶಾಸಕ ಕೆ.ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್, ಅವರ ನಿಕಟವರ್ತಿ ಪ್ರಕಾಶ್ ಹೆಗಡೆ, ಹೊಸಪೇಟೆಯ ಕೆ.ಜನಾರ್ದನ ರೆಡ್ಡಿ ಮತ್ತು ಐ.ಎರ್ರಿಸ್ವಾಮಿ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.</p>.<p><br /> ಜಾಮೀನು ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ರವಿ ಎಂ. ನಾಯಕ್ ತಿರಸ್ಕರಿಸಿ, ಆದೇಶ ಹೊರಡಿಸಿದ್ದಾರೆ. ಎಲ್ಲ ಆರೋಪಿಗಳೂ ಈ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ. ಅವರಿಗೆ ತಿಳಿಯದೆಯೇ ತಪ್ಪು ನಡೆದಿದೆ ಎಂಬ ವಾದವನ್ನು ಒಪ್ಪಲಾಗದು ಎಂದು ನ್ಯಾಯಾಧೀಶರು ಆದೇಶದಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>