<p><span id="1315850160012S" style="display: none"> </span>ಹೈದರಾಬಾದ್: ಇಲ್ಲಿನ ಚಂಚಲಗುಡ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ.ವಿ.ಶ್ರೀನಿವಾಸ್ ರೆಡ್ಡಿ ಅವರ ಜಾಮೀನು ಅರ್ಜಿಯ ಆದೇಶವನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರಕ್ಕೆ ಕಾಯ್ದಿರಿಸಿತು.<br /> <br /> ಹಾಗೆಯೇ ಹೆಚ್ಚಿನ ವಿಚಾರಣೆಗಾಗಿ ರೆಡ್ಡಿದ್ವಯ ರನ್ನು ತಮ್ಮ ವಶಕ್ಕೆ ಕೊಡಬೇಕು ಎನ್ನುವ ಸಿಬಿಐ ಅರ್ಜಿಯ ತೀರ್ಪನ್ನೂ ಮಂಗಳವಾರ ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.<br /> <br /> ರಾತ್ರಿ ಸುಮಾರು ಒಂಬತ್ತು ಗಂಟೆ ವೇಳೆಯಲ್ಲಿ ನ್ಯಾಯಾಧೀಶರು ತಮ್ಮ ನಿರ್ಧಾರ ಪ್ರಕಟಿಸಿದರು. ಇದರಿಂದಾಗಿ ಜಾಮೀನು ದೊರೆಯಬಹುದು ಎಂದು ನಿರೀಕ್ಷಿಸಿದ್ದ ರೆಡ್ಡಿಗಳಿಗೆ ಹಾಗೂ ಇಬ್ಬರನ್ನೂ ತಮ್ಮ ವಶಕ್ಕೆ ನೀಡಬಹುದು ಎನ್ನುವ ಸಿಬಿಐಗೆ ಭಾರೀ ನಿರಾಸೆಯಾಯಿತು.<br /> <br /> ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿವೇಕ್ ಟಂಕ ಅವರು, ರೆಡ್ಡಿ ದ್ವಯರು ಬಳ್ಳಾರಿ ಮತ್ತು ಆಂಧ್ರ ಪ್ರದೇಶದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಜಾಮೀನು ನೀಡಬಾರದು ಎಂದು ಹೇಳಿದರು.<br /> <br /> ಇಬ್ಬರನ್ನೂ ಬಂಧಿಸಿ ಒಂದು ವಾರವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ನಾಶವಾಗುವ ಬೆದರಿಕೆ ಇರುವುದರಿಂದ ಇಬ್ಬರನ್ನೂ ತಕ್ಷಣ ಸಿಬಿಐ ವಶಕ್ಕೆ ಕೊಡಬೇಕು ಎಂದು ಕೋರಿದರು.<br /> <br /> ಜನಾರ್ದನ ರೆಡ್ಡಿ ಅವರ ಗಣಿ ಕಂಪೆನಿ ಸುಮಾರು 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಪ್ರತಿ ನಿತ್ಯ ಮೂರು ಸಾವಿರ ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸಿದೆ. ಇದಕ್ಕೆ ಅಧಿಕಾರಿಗಳೂ ಸಹ ಸಹಕರಿಸಿದ್ದಾರೆ ಎಂದು ಆರೋಪಿಸಿದರು.<br /> <br /> ಆರೋಪಿಗಳ ಪರ ವಾದ ಮಂಡಿಸಿದ ಉದಯ್ ಯು ಲಲಿತ್ ಅವರು, ಅಧಿಕಾರಿಗಳು ಶಾಮೀಲಾಗಿದ್ದರೆ ಇದುವರೆಗೆ ಸಿಬಿಐ ಅವರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span id="1315850160012S" style="display: none"> </span>ಹೈದರಾಬಾದ್: ಇಲ್ಲಿನ ಚಂಚಲಗುಡ ಜೈಲಿನಲ್ಲಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತು ಬಿ.ವಿ.ಶ್ರೀನಿವಾಸ್ ರೆಡ್ಡಿ ಅವರ ಜಾಮೀನು ಅರ್ಜಿಯ ಆದೇಶವನ್ನು ವಿಶೇಷ ಸಿಬಿಐ ನ್ಯಾಯಾಲಯ ಮಂಗಳವಾರಕ್ಕೆ ಕಾಯ್ದಿರಿಸಿತು.<br /> <br /> ಹಾಗೆಯೇ ಹೆಚ್ಚಿನ ವಿಚಾರಣೆಗಾಗಿ ರೆಡ್ಡಿದ್ವಯ ರನ್ನು ತಮ್ಮ ವಶಕ್ಕೆ ಕೊಡಬೇಕು ಎನ್ನುವ ಸಿಬಿಐ ಅರ್ಜಿಯ ತೀರ್ಪನ್ನೂ ಮಂಗಳವಾರ ಪ್ರಕಟಿಸುವುದಾಗಿ ನ್ಯಾಯಾಧೀಶರು ತಿಳಿಸಿದರು.<br /> <br /> ರಾತ್ರಿ ಸುಮಾರು ಒಂಬತ್ತು ಗಂಟೆ ವೇಳೆಯಲ್ಲಿ ನ್ಯಾಯಾಧೀಶರು ತಮ್ಮ ನಿರ್ಧಾರ ಪ್ರಕಟಿಸಿದರು. ಇದರಿಂದಾಗಿ ಜಾಮೀನು ದೊರೆಯಬಹುದು ಎಂದು ನಿರೀಕ್ಷಿಸಿದ್ದ ರೆಡ್ಡಿಗಳಿಗೆ ಹಾಗೂ ಇಬ್ಬರನ್ನೂ ತಮ್ಮ ವಶಕ್ಕೆ ನೀಡಬಹುದು ಎನ್ನುವ ಸಿಬಿಐಗೆ ಭಾರೀ ನಿರಾಸೆಯಾಯಿತು.<br /> <br /> ಜಾಮೀನು ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರವಾಗಿ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ವಿವೇಕ್ ಟಂಕ ಅವರು, ರೆಡ್ಡಿ ದ್ವಯರು ಬಳ್ಳಾರಿ ಮತ್ತು ಆಂಧ್ರ ಪ್ರದೇಶದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಕಾರಣ ಜಾಮೀನು ನೀಡಬಾರದು ಎಂದು ಹೇಳಿದರು.<br /> <br /> ಇಬ್ಬರನ್ನೂ ಬಂಧಿಸಿ ಒಂದು ವಾರವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ನಾಶವಾಗುವ ಬೆದರಿಕೆ ಇರುವುದರಿಂದ ಇಬ್ಬರನ್ನೂ ತಕ್ಷಣ ಸಿಬಿಐ ವಶಕ್ಕೆ ಕೊಡಬೇಕು ಎಂದು ಕೋರಿದರು.<br /> <br /> ಜನಾರ್ದನ ರೆಡ್ಡಿ ಅವರ ಗಣಿ ಕಂಪೆನಿ ಸುಮಾರು 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಪ್ರತಿ ನಿತ್ಯ ಮೂರು ಸಾವಿರ ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸಿದೆ. ಇದಕ್ಕೆ ಅಧಿಕಾರಿಗಳೂ ಸಹ ಸಹಕರಿಸಿದ್ದಾರೆ ಎಂದು ಆರೋಪಿಸಿದರು.<br /> <br /> ಆರೋಪಿಗಳ ಪರ ವಾದ ಮಂಡಿಸಿದ ಉದಯ್ ಯು ಲಲಿತ್ ಅವರು, ಅಧಿಕಾರಿಗಳು ಶಾಮೀಲಾಗಿದ್ದರೆ ಇದುವರೆಗೆ ಸಿಬಿಐ ಅವರನ್ನು ಏಕೆ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>