<p><strong>ಚಿಕ್ಕಬಳ್ಳಾಪುರ:</strong> ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಬಂಧನದಿಂದ ಸರ್ಕಾರದ ಮೇಲೆ ಯಾವುದೇ ರೀತಿಯ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿಯಿಂದ ಸರ್ಕಾರಕ್ಕೆ ಅಪಾಯ ಇಲ್ಲ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, `ಜನಾರ್ಧನ ರೆಡ್ಡಿಯವರನ್ನು ಯಾವ ಹಿನ್ನೆಲೆಯಲ್ಲಿ ಬಂಧಿಸಿ ದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಸಿಬಿಐ ಪೊಲೀಸರು ತನಿಖಾ ವರದಿ ಒಪ್ಪಿಸಿದ ನಂತರವಷ್ಟೇ ಬಂಧನದ ಕಾರಣ ತಿಳಿದು ಬರಲಿದೆ~ ಎಂದರು.<br /> <br /> `ಕೊಪ್ಪಳ ಉಪಚುನಾವಣೆಯನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಎದುರಿಸುತ್ತೇವೆ. <br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರು ಸಹ ಪಕ್ಷದ ಗೆಲುವಿಗಾಗಿ ತಮ್ಮದೇ ಆದ ರೀತಿಯಲ್ಲಿ ಶ್ರಮಿಸಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> `ಮಾಜಿ ಸಚಿವ ಶ್ರೀರಾಮುಲು ಅವರು ಸಂಘ ಪರಿವಾರದಿಂದ ಬಂದವರು. ಬಿಜೆಪಿಯ ಕಟ್ಟಾ ಕಾರ್ಯ ಕರ್ತರು. ಅವರು ಬಿಜೆಪಿ ಯನ್ನು ತೊರೆಯುವುದಿಲ್ಲ ಎಂಬ ನಂಬಿಕೆಯಿದೆ. ಅವರು ಬಿಜೆಪಿಯಲ್ಲೇ ಉಳಿದುಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> ಚಿಕ್ಕಬಳ್ಳಾಪುರದಲ್ಲಿ ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, `ಶಿಕ್ಷಕರಲ್ಲಿ ಒಗ್ಗಟ್ಟಿನ ಕೊರತೆ ಮತ್ತು ಗುಂಪುಗಾರಿಕೆಯಿಂದ ಗುರುಭವನ ಇನ್ನೂ ನಿರ್ಮಾಣಗೊಂಡಿಲ್ಲ. ಜಿಲ್ಲಾಧಿಕಾರಿ, ಶಾಸಕರು ಮತ್ತು ಶಿಕ್ಷಕರ ಜತೆ ಸಭೆನಡೆಸಿ, ಗುರುಭವನ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಬಂಧನದಿಂದ ಸರ್ಕಾರದ ಮೇಲೆ ಯಾವುದೇ ರೀತಿಯ ಪ್ರತಿಕೂಲ ಪರಿಣಾಮ ಬೀರುವುದಿಲ್ಲ. ಒಬ್ಬ ವ್ಯಕ್ತಿಯಿಂದ ಸರ್ಕಾರಕ್ಕೆ ಅಪಾಯ ಇಲ್ಲ ಎಂದು ಜಿಲ್ಲಾ ಉಸ್ತು ವಾರಿ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.<br /> <br /> ನಗರದಲ್ಲಿ ಸೋಮವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, `ಜನಾರ್ಧನ ರೆಡ್ಡಿಯವರನ್ನು ಯಾವ ಹಿನ್ನೆಲೆಯಲ್ಲಿ ಬಂಧಿಸಿ ದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಸಿಬಿಐ ಪೊಲೀಸರು ತನಿಖಾ ವರದಿ ಒಪ್ಪಿಸಿದ ನಂತರವಷ್ಟೇ ಬಂಧನದ ಕಾರಣ ತಿಳಿದು ಬರಲಿದೆ~ ಎಂದರು.<br /> <br /> `ಕೊಪ್ಪಳ ಉಪಚುನಾವಣೆಯನ್ನು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರ ನೇತೃತ್ವದಲ್ಲಿ ಎದುರಿಸುತ್ತೇವೆ. <br /> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂ ರಪ್ಪ ಅವರು ಸಹ ಪಕ್ಷದ ಗೆಲುವಿಗಾಗಿ ತಮ್ಮದೇ ಆದ ರೀತಿಯಲ್ಲಿ ಶ್ರಮಿಸಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> `ಮಾಜಿ ಸಚಿವ ಶ್ರೀರಾಮುಲು ಅವರು ಸಂಘ ಪರಿವಾರದಿಂದ ಬಂದವರು. ಬಿಜೆಪಿಯ ಕಟ್ಟಾ ಕಾರ್ಯ ಕರ್ತರು. ಅವರು ಬಿಜೆಪಿ ಯನ್ನು ತೊರೆಯುವುದಿಲ್ಲ ಎಂಬ ನಂಬಿಕೆಯಿದೆ. ಅವರು ಬಿಜೆಪಿಯಲ್ಲೇ ಉಳಿದುಕೊಂಡು ಪಕ್ಷವನ್ನು ಇನ್ನಷ್ಟು ಬಲಪಡಿಸಲಿದ್ದಾರೆ~ ಎಂದು ಅವರು ತಿಳಿಸಿದರು.<br /> <br /> ಚಿಕ್ಕಬಳ್ಳಾಪುರದಲ್ಲಿ ಗುರುಭವನ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, `ಶಿಕ್ಷಕರಲ್ಲಿ ಒಗ್ಗಟ್ಟಿನ ಕೊರತೆ ಮತ್ತು ಗುಂಪುಗಾರಿಕೆಯಿಂದ ಗುರುಭವನ ಇನ್ನೂ ನಿರ್ಮಾಣಗೊಂಡಿಲ್ಲ. ಜಿಲ್ಲಾಧಿಕಾರಿ, ಶಾಸಕರು ಮತ್ತು ಶಿಕ್ಷಕರ ಜತೆ ಸಭೆನಡೆಸಿ, ಗುರುಭವನ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>