<p><strong>ಬೆಂಗಳೂರು:</strong> ಲಾಭದಾಯಕ ಹುದ್ದೆ ಅಲಂಕರಿಸಿರುವ ಆರೋಪ ಎದುರಿಸುತ್ತಿರುವ ಸಚಿವರಾದ ಜಿ.ಜನಾರ್ದನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೂ ತಲಾ 2,500 ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.<br /> <br /> ಈ ಪ್ರಕರಣವು ವಿಚಾರಣೆಗೆ ಬಂದಾಗ ರೆಡ್ಡಿ ಪರ ವಕೀಲರು ಗೈರು ಹಾಜರಾಗಿದ್ದರಿಂದ ಹಾಗೂ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ.<br /> <br /> ಓಬಳಾಪುರಂ ಮೈನಿಂಗ್ ಕಂಪೆನಿ ಹಾಗೂ ಅನಂತಪುರ ಮೈನಿಂಗ್ ಕಂಪೆನಿಯ ಮಾಲೀಕರಾಗಿರುವ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಸಚಿವ ಸಂಪುಟದಿಂದ <br /> <br /> ಕೈಬಿಡುವಂತೆ ಶಾಸಕ ಕೆ.ಸಿ. ಕೊಂಡಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ವಿವಾದ ಇದಾಗಿದೆ. ಈ ದೂರಿನ ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ಅವರು ಏಕಸದಸ್ಯಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು.<br /> <br /> <strong>ಸರ್ವೇಕ್ಷಣಾ ಇಲಾಖೆಗೆ ದಂಡ:</strong> ಜಮೀನೊಂದರ ಸರ್ವೇ ಕಾರ್ಯವನ್ನು ಹೈಕೋರ್ಟ್ ಆದೇಶದ ಹೊರತಾಗಿಯೂ ನಡೆಸದ ಭಾರತೀಯ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣಾಧಿಕಾರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಾಭದಾಯಕ ಹುದ್ದೆ ಅಲಂಕರಿಸಿರುವ ಆರೋಪ ಎದುರಿಸುತ್ತಿರುವ ಸಚಿವರಾದ ಜಿ.ಜನಾರ್ದನ ರೆಡ್ಡಿ ಹಾಗೂ ಬಿ.ಶ್ರೀರಾಮುಲು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರಿಗೂ ತಲಾ 2,500 ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.<br /> <br /> ಈ ಪ್ರಕರಣವು ವಿಚಾರಣೆಗೆ ಬಂದಾಗ ರೆಡ್ಡಿ ಪರ ವಕೀಲರು ಗೈರು ಹಾಜರಾಗಿದ್ದರಿಂದ ಹಾಗೂ ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸದ ಕಾರಣ, ಅಸಮಾಧಾನ ವ್ಯಕ್ತಪಡಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್.ಕೇಹರ್ ಹಾಗೂ ನ್ಯಾಯಮೂರ್ತಿ ಅಶೋಕ ಬಿ.ಹಿಂಚಿಗೇರಿ ಅವರು ದಂಡ ವಿಧಿಸಿ ಆದೇಶಿಸಿದ್ದಾರೆ.<br /> <br /> ಓಬಳಾಪುರಂ ಮೈನಿಂಗ್ ಕಂಪೆನಿ ಹಾಗೂ ಅನಂತಪುರ ಮೈನಿಂಗ್ ಕಂಪೆನಿಯ ಮಾಲೀಕರಾಗಿರುವ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಹಾಗೂ ಶ್ರೀರಾಮುಲು ಲಾಭದಾಯಕ ಹುದ್ದೆ ಹೊಂದಿದ್ದು, ಅವರನ್ನು ಸಚಿವ ಸಂಪುಟದಿಂದ <br /> <br /> ಕೈಬಿಡುವಂತೆ ಶಾಸಕ ಕೆ.ಸಿ. ಕೊಂಡಯ್ಯ ಅವರು ರಾಜ್ಯಪಾಲರಿಗೆ ನೀಡಿರುವ ದೂರಿನ ವಿವಾದ ಇದಾಗಿದೆ. ಈ ದೂರಿನ ಮುಂದಿನ ಪ್ರಕ್ರಿಯೆಗೆ ತಡೆ ನೀಡುವಂತೆ ಅವರು ಏಕಸದಸ್ಯಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು.<br /> <br /> <strong>ಸರ್ವೇಕ್ಷಣಾ ಇಲಾಖೆಗೆ ದಂಡ:</strong> ಜಮೀನೊಂದರ ಸರ್ವೇ ಕಾರ್ಯವನ್ನು ಹೈಕೋರ್ಟ್ ಆದೇಶದ ಹೊರತಾಗಿಯೂ ನಡೆಸದ ಭಾರತೀಯ ಸರ್ವೇಕ್ಷಣಾ ಇಲಾಖೆಯ ನಿಯಂತ್ರಣಾಧಿಕಾರಿಗೆ ಐದು ಸಾವಿರ ರೂಪಾಯಿ ದಂಡ ವಿಧಿಸಿ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>