<p><strong>ಮೂಡಿಗೆರೆ:</strong> ಗೋಣಿಬೀಡು ಹೋಬಳಿ ರೆವಿನ್ಯೂ ಇನ್ಸ್ಪೆಕ್ಟರ್ ಪೂರ್ಣೇಶ್ಮೂರ್ತಿ ರೂ 1.50ಲಕ್ಷ ಲಂಚ ಪಡೆದುಕೊಳ್ಳುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ತಾಲ್ಲೂಕಿನ ಗೋಣಿಬೀಡು ಹೋಬಳಿ ಹಿರೇಶಿಗರ ಬಳಿಯ ಬಾಸೂರು ಚಂದ್ರೇಗೌಡ ಎಂಬವವರಿಗೆ ಅಕ್ರಮ-ಸಕ್ರಮ ಯೋಜನೆ ನಮೂನೆ 53ರಲ್ಲಿ ಐದು ಎಕರೆ ಜಮೀನು ಮಂಜೂರಾತಿಗಾಗಿ ಬುಧವಾರ ಬೆಳಿಗ್ಗೆ ರೂ 1.50ಲಕ್ಷ ಹಣ ಪಡೆಯುವಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ರಾಮಾನಾಯಕ್, ಸಿಬ್ಬಂದಿ ಬಂಧಿಸಿದರು.<br /> <br /> ಸುದ್ದಿಗಾರರಿಗೆ ಮಾಹಿತಿ ನೀಡಿದ ಡಿವೈಎಸ್ಪಿ ರಾಮಾನಾಯಕ್, ಹಿರೀಶಿಗರ ಗ್ರಾಮದ ಸರ್ವೆ ನಂ 55 ರಲ್ಲಿ ಐದು ಎಕರೆ ಭೂಮಿ ಮಂಜೂರುಗೊಳಿಸಲು ಹಣಪಡೆಯುತ್ತ್ದ್ದಿದ ಮಾಹಿತಿ ಆಧಾರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದರು.<br /> <br /> ಕಾರ್ಯಚರಣೆ ಸಂದರ್ಭ ಹಾಸನ ಲೋಕಾಯುಕ್ತ ಪ್ರಭಾರಿ ಎಸ್.ಪಿ. ಡಿ.ಸೋಜ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಗುರುರಾಜ್, ವಿನಯ್, ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ಗೋಣಿಬೀಡು ಹೋಬಳಿ ರೆವಿನ್ಯೂ ಇನ್ಸ್ಪೆಕ್ಟರ್ ಪೂರ್ಣೇಶ್ಮೂರ್ತಿ ರೂ 1.50ಲಕ್ಷ ಲಂಚ ಪಡೆದುಕೊಳ್ಳುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ತಾಲ್ಲೂಕಿನ ಗೋಣಿಬೀಡು ಹೋಬಳಿ ಹಿರೇಶಿಗರ ಬಳಿಯ ಬಾಸೂರು ಚಂದ್ರೇಗೌಡ ಎಂಬವವರಿಗೆ ಅಕ್ರಮ-ಸಕ್ರಮ ಯೋಜನೆ ನಮೂನೆ 53ರಲ್ಲಿ ಐದು ಎಕರೆ ಜಮೀನು ಮಂಜೂರಾತಿಗಾಗಿ ಬುಧವಾರ ಬೆಳಿಗ್ಗೆ ರೂ 1.50ಲಕ್ಷ ಹಣ ಪಡೆಯುವಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಡಿವೈಎಸ್ಪಿ ರಾಮಾನಾಯಕ್, ಸಿಬ್ಬಂದಿ ಬಂಧಿಸಿದರು.<br /> <br /> ಸುದ್ದಿಗಾರರಿಗೆ ಮಾಹಿತಿ ನೀಡಿದ ಡಿವೈಎಸ್ಪಿ ರಾಮಾನಾಯಕ್, ಹಿರೀಶಿಗರ ಗ್ರಾಮದ ಸರ್ವೆ ನಂ 55 ರಲ್ಲಿ ಐದು ಎಕರೆ ಭೂಮಿ ಮಂಜೂರುಗೊಳಿಸಲು ಹಣಪಡೆಯುತ್ತ್ದ್ದಿದ ಮಾಹಿತಿ ಆಧಾರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದರು.<br /> <br /> ಕಾರ್ಯಚರಣೆ ಸಂದರ್ಭ ಹಾಸನ ಲೋಕಾಯುಕ್ತ ಪ್ರಭಾರಿ ಎಸ್.ಪಿ. ಡಿ.ಸೋಜ ಭೇಟಿ ನೀಡಿ ಪರಿಶೀಲಿಸಿದರು. ಕಾರ್ಯಾಚರಣೆಯಲ್ಲಿ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ಗಳಾದ ಗುರುರಾಜ್, ವಿನಯ್, ಸಿಬ್ಬಂದಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>