<p><strong>ಶಿವಮೊಗ್ಗ:</strong> ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕರ ರೆಸಾರ್ಟ್ ಪ್ರಯಾಣವನ್ನು ತಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ತೀಕ್ಷ್ಣವಾಗಿ ಹೇಳಿದರು.<br /> <br /> ಇದು ಆಶಿಸ್ತು ಅಲ್ಲ; ಪಕ್ಷದ ಸಂಘಟನೆ, ಸರ್ಕಾರವನ್ನು ಬಲಪಡಿಸುವ ಉದ್ದೇಶದಿಂದ ಯಡಿಯೂರಪ್ಪ ರೆಸಾರ್ಟ್ ಸಭೆ ನಡೆಸುತ್ತಿರಬಹುದು ಎಂದು ಭಾನುವಾರ ರಾತ್ರಿ ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು. ಸಭೆ ನಡೆಸಲು ಎಲ್ಲರೂ ಸ್ವತಂತ್ರರಿದ್ದಾರೆ. ಇದನ್ನು ಅಶಿಸ್ತು ಎನ್ನಲಾಗದು ಎಂದು ಸ್ಪಷ್ಟಪಡಿಸಿದರು.<br /> <br /> ಯಡಿಯೂರಪ್ಪ 48 ಗಂಟೆಯ ಗಡುವು ನೀಡಿದ್ದರಲ್ಲ ಎಂಬ ಪ್ರಶ್ನೆಗೆ, ಯಡಿಯೂರಪ್ಪ ಅವರ ಇಂತಹ ಗಡುವು ಸಾಕಷ್ಟು ನೋಡಿದ್ದೇವೆ. ಕಾಶಿ, ವೈಷ್ಣವಿದೇವಿ, ದೆಹಲಿ ಭೇಟಿ ಇಂತಹ ಹಲವು ಗಡುವುಗಳನ್ನು ಅವರು ನೀಡುತ್ತಲೇ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು. <br /> <br /> <strong>ನಾಯಕತ್ವ ಬದಲಾವಣೆ ಇಲ್ಲ<br /> ಶಿವಮೊಗ್ಗ:</strong> ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರೇ ಬಜೆಟ್ ಮಂಡಿಸುತ್ತಾರೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕರ ರೆಸಾರ್ಟ್ ಪ್ರಯಾಣವನ್ನು ತಾವು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ತೀಕ್ಷ್ಣವಾಗಿ ಹೇಳಿದರು.<br /> <br /> ಇದು ಆಶಿಸ್ತು ಅಲ್ಲ; ಪಕ್ಷದ ಸಂಘಟನೆ, ಸರ್ಕಾರವನ್ನು ಬಲಪಡಿಸುವ ಉದ್ದೇಶದಿಂದ ಯಡಿಯೂರಪ್ಪ ರೆಸಾರ್ಟ್ ಸಭೆ ನಡೆಸುತ್ತಿರಬಹುದು ಎಂದು ಭಾನುವಾರ ರಾತ್ರಿ ಭೇಟಿಯಾದ ಸುದ್ದಿಗಾರರಿಗೆ ತಿಳಿಸಿದರು. ಸಭೆ ನಡೆಸಲು ಎಲ್ಲರೂ ಸ್ವತಂತ್ರರಿದ್ದಾರೆ. ಇದನ್ನು ಅಶಿಸ್ತು ಎನ್ನಲಾಗದು ಎಂದು ಸ್ಪಷ್ಟಪಡಿಸಿದರು.<br /> <br /> ಯಡಿಯೂರಪ್ಪ 48 ಗಂಟೆಯ ಗಡುವು ನೀಡಿದ್ದರಲ್ಲ ಎಂಬ ಪ್ರಶ್ನೆಗೆ, ಯಡಿಯೂರಪ್ಪ ಅವರ ಇಂತಹ ಗಡುವು ಸಾಕಷ್ಟು ನೋಡಿದ್ದೇವೆ. ಕಾಶಿ, ವೈಷ್ಣವಿದೇವಿ, ದೆಹಲಿ ಭೇಟಿ ಇಂತಹ ಹಲವು ಗಡುವುಗಳನ್ನು ಅವರು ನೀಡುತ್ತಲೇ ಬಂದಿದ್ದಾರೆ ಎಂದು ವ್ಯಂಗ್ಯವಾಡಿದರು. <br /> <br /> <strong>ನಾಯಕತ್ವ ಬದಲಾವಣೆ ಇಲ್ಲ<br /> ಶಿವಮೊಗ್ಗ:</strong> ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರೇ ಬಜೆಟ್ ಮಂಡಿಸುತ್ತಾರೆ. ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ. ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಪುನರುಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>