<p><strong>ಚಿಕ್ಕಬಳ್ಳಾಪುರ: </strong>ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೇಷ್ಮೆ ಕೃಷಿಕರ ಹಿತರಕ್ಷಣೆಗಾಗಿ ವಿವಿಧ ಯೋಜನೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ರೇಷ್ಮೆ ಕೃಷಿಕರು ವರ್ಷಗಳಿಂದ ಎದುರಿಸುತ್ತಿರುವ ಸಂಕಷ್ಟ ಪರಿಹರಿಸಲಾಗುವುದು ಎಂದು ರೇಷ್ಮೆ ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದರು.<br /> <br /> ಬೆಂಗಳೂರಿನ ತಮ್ಮ ನಿವಾಸದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸದಸ್ಯರು ಸಲ್ಲಿಸಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೇಷ್ಮೆಗೆ ಭಾರಿ ಬೇಡಿಕೆಯಿದೆ. ರೇಷ್ಮೆ ಕೃಷಿ ಚಟುವಟಿಕೆಗಳ ಮೇಲೆ ರೈತರು ಅವಲಂಭಿತರಾಗಿದ್ದಾರೆ’ ಎಂದರು.<br /> <br /> ರೇಷ್ಮೆ ಕೃಷಿ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಬದಲಾವಣೆಗಳಿಂದ ರೈತರ ಮೇಲೆ ದುಷ್ಪರಿಣಾಮ ಬೀರುತ್ತಿರುವುದು ಗಮನಕ್ಕೆ ಬಂದಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ಸ್ಪಂದಿಸಿ ಶೀಘ್ರವೇ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> <br /> ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳು ಸೇರಿದಂತೆ ಇತರ ತಾಲ್ಲೂಕುಗಳಲ್ಲಿನ ರೇಷ್ಮೆ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. <br /> ಹೆಚ್ಚಿನ ಪ್ರೋತ್ಸಾಹ ಧನ ಒದಗಿಸುವುದರ ಮೂಲಕ ರೇಷ್ಮೆ ಕೃಷಿಕರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗುವುದು ಎಂದು ಬಚ್ಚೇಗೌಡ ಭರವಸೆ ನೀಡಿದರು.<br /> <br /> ಚಿಕ್ಕಬಳ್ಳಾಪುರ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ , ‘ಚೀನಾದಿಂದ 2500 ಮೆಟ್ರಿಕ್ ಟನ್ ರೇಷ್ಮೆಯನ್ನು ಆಮದು ಮಾಡಿಕೊಳ್ಳುವ ಬಗ್ಗೆ ಕೇಂದ್ರ ಆದೇಶ ನೀಡಿದೆ. ಇದು ರೇಷ್ಮೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಈ ಆಮದು ಪ್ರಕ್ರಿಯೆಯನ್ನು ತಡೆಗಟ್ಟುವಂತೆ ರಾಜ್ಯಸರ್ಕಾರದ ವತಿಯಿಂದ ಮನವಿ ಮಾಡಬೇಕು’ ಎಂದು ಕೋರಿದರು.<br /> <br /> ವೇದಿಕೆ ಅಧ್ಯಕ್ಷ ಮಳ್ಳೂರು ಶಿವಣ್ಣ, ಸಂಘಟನಾ ಕಾರ್ಯದರ್ಶಿಗಳಾದ ಮಳ್ಳೂರು ಹರೀಶ್, ಕೆಂಪರೆಡ್ಡಿ, ಭಾಸ್ಕರರೆಡ್ಡಿ, ಆಂಜನೇಯರೆಡ್ಡಿ, ಅಹಮದ್ ಹುಸೇನ್, ವೆಂಕಟೇಶ್, ಹಿತ್ತಲಹಳ್ಳಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ರೇಷ್ಮೆ ಕೃಷಿಕರ ಹಿತರಕ್ಷಣೆಗಾಗಿ ವಿವಿಧ ಯೋಜನೆಯನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುವುದು. ರೇಷ್ಮೆ ಕೃಷಿಕರು ವರ್ಷಗಳಿಂದ ಎದುರಿಸುತ್ತಿರುವ ಸಂಕಷ್ಟ ಪರಿಹರಿಸಲಾಗುವುದು ಎಂದು ರೇಷ್ಮೆ ಸಚಿವ ಬಿ.ಎನ್.ಬಚ್ಚೇಗೌಡ ತಿಳಿಸಿದರು.<br /> <br /> ಬೆಂಗಳೂರಿನ ತಮ್ಮ ನಿವಾಸದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸದಸ್ಯರು ಸಲ್ಲಿಸಿದ ಮನವಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ರೇಷ್ಮೆಗೆ ಭಾರಿ ಬೇಡಿಕೆಯಿದೆ. ರೇಷ್ಮೆ ಕೃಷಿ ಚಟುವಟಿಕೆಗಳ ಮೇಲೆ ರೈತರು ಅವಲಂಭಿತರಾಗಿದ್ದಾರೆ’ ಎಂದರು.<br /> <br /> ರೇಷ್ಮೆ ಕೃಷಿ ಕ್ಷೇತ್ರದಲ್ಲಿ ಇತ್ತೀಚಿನ ದಿನಗಳಲ್ಲಿ ಆಗುತ್ತಿರುವ ಬದಲಾವಣೆಗಳಿಂದ ರೈತರ ಮೇಲೆ ದುಷ್ಪರಿಣಾಮ ಬೀರುತ್ತಿರುವುದು ಗಮನಕ್ಕೆ ಬಂದಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ಸ್ಪಂದಿಸಿ ಶೀಘ್ರವೇ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.<br /> <br /> ಚಿಕ್ಕಬಳ್ಳಾಪುರ ಮತ್ತು ಶಿಡ್ಲಘಟ್ಟ ತಾಲ್ಲೂಕುಗಳು ಸೇರಿದಂತೆ ಇತರ ತಾಲ್ಲೂಕುಗಳಲ್ಲಿನ ರೇಷ್ಮೆ ಮಾರುಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. <br /> ಹೆಚ್ಚಿನ ಪ್ರೋತ್ಸಾಹ ಧನ ಒದಗಿಸುವುದರ ಮೂಲಕ ರೇಷ್ಮೆ ಕೃಷಿಕರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಾಗುವುದು ಎಂದು ಬಚ್ಚೇಗೌಡ ಭರವಸೆ ನೀಡಿದರು.<br /> <br /> ಚಿಕ್ಕಬಳ್ಳಾಪುರ ಜಿಲ್ಲಾ ರೇಷ್ಮೆ ಕೃಷಿ ಹಿತರಕ್ಷಣಾ ವೇದಿಕೆಯ ಸಂಚಾಲಕ ಯಲುವಹಳ್ಳಿ ಸೊಣ್ಣೇಗೌಡ , ‘ಚೀನಾದಿಂದ 2500 ಮೆಟ್ರಿಕ್ ಟನ್ ರೇಷ್ಮೆಯನ್ನು ಆಮದು ಮಾಡಿಕೊಳ್ಳುವ ಬಗ್ಗೆ ಕೇಂದ್ರ ಆದೇಶ ನೀಡಿದೆ. ಇದು ರೇಷ್ಮೆ ಕೃಷಿಕರಿಗೆ ಸಂಕಷ್ಟವಾಗಲಿದೆ. ಈ ಆಮದು ಪ್ರಕ್ರಿಯೆಯನ್ನು ತಡೆಗಟ್ಟುವಂತೆ ರಾಜ್ಯಸರ್ಕಾರದ ವತಿಯಿಂದ ಮನವಿ ಮಾಡಬೇಕು’ ಎಂದು ಕೋರಿದರು.<br /> <br /> ವೇದಿಕೆ ಅಧ್ಯಕ್ಷ ಮಳ್ಳೂರು ಶಿವಣ್ಣ, ಸಂಘಟನಾ ಕಾರ್ಯದರ್ಶಿಗಳಾದ ಮಳ್ಳೂರು ಹರೀಶ್, ಕೆಂಪರೆಡ್ಡಿ, ಭಾಸ್ಕರರೆಡ್ಡಿ, ಆಂಜನೇಯರೆಡ್ಡಿ, ಅಹಮದ್ ಹುಸೇನ್, ವೆಂಕಟೇಶ್, ಹಿತ್ತಲಹಳ್ಳಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>