<p>ಆಲೂರು: ರೇಷ್ಮೆ ಕೃಷಿ ಲಾಭದಾಯಕವಾಗಿದೆ. ರೇಷ್ಮೆ ಇಲಾಖೆಯಿಂದ ತಾಂತ್ರಿಕ ಮಾಹಿತಿಯನ್ನು ಪಡೆದು ರೈತರು ಹೆಚ್ಚಿನ ಲಾಭ ಪಡೆಯಬೇಕು ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ರಾಧ ಹೇಳಿದರು.<br /> <br /> ಅವರು ಪಟ್ಟಣದ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರೇಷ್ಮೆ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ರೇಷ್ಮೆ ಕೃಷಿ ವಿಚಾರ ಸಂಕಿರಣ ಹಾಗೂ ಕ್ಷೇತ್ರೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದರು.<br /> <br /> ತಾಲ್ಲೂಕು ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಬಿ.ರಾಜಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ರೇಷ್ಮೆ ಕೃಷಿ ಮಾಡುವವರು ರೋಗ ನಿಯಂತ್ರಣದ ಬಗ್ಗೆ ಎಚ್ಚರವಹಿಸಬೇಕು. ರೋಗಕ್ಕೆ ತುತ್ತಾದ ಬೆಳೆ ರಕ್ಷಿಸಲು ಯಾವುದೇ ಔಷಧ ಇರುವುದಿಲ್ಲ ಆದ್ದರಿಂದ ರೋಗ ಬರದಂತೆ ಎಚ್ಚರ ವಹಿಸಿ ಬೆಳೆ ಕಾಪಾಡಬೇಕು ಎಂದರು.<br /> <br /> ಅರಕಲಗೋಡು ಪ್ರಗತಿಪರ ರೇಷ್ಮೆ ಬೆಳೆಗಾರ ಕುಮಾರ್ ಮತ್ತು ಕಣತೂರು ಪ್ರಗತಿಪರ ರೈತ ರಾಜಶೇಖರ್ ಅವರು ರೇಷ್ಮೆ ಬೆಳೆಯ ಮಹತ್ವದ ಕುರಿತು ಮಾತಾಡಿದರು.<br /> <br /> ತಾಲ್ಲೂಕು ಪಂಚಾಯ್ತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರಪ್ಪ ಇದ್ದರು.<br /> ರೇಷ್ಮೆ ಕೃಷಿ ನಿರೀಕ್ಷಕ ದೇವೇಂದ್ರ ಕುಮಾರ್ ಸ್ವಾಗತಿಸಿ, ರೇಷ್ಮೆ ಕೃಷಿ ನಿರೀಕ್ಷಕ ವೆಂಕಟರಾಮಣಗೌಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲೂರು: ರೇಷ್ಮೆ ಕೃಷಿ ಲಾಭದಾಯಕವಾಗಿದೆ. ರೇಷ್ಮೆ ಇಲಾಖೆಯಿಂದ ತಾಂತ್ರಿಕ ಮಾಹಿತಿಯನ್ನು ಪಡೆದು ರೈತರು ಹೆಚ್ಚಿನ ಲಾಭ ಪಡೆಯಬೇಕು ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ರಾಧ ಹೇಳಿದರು.<br /> <br /> ಅವರು ಪಟ್ಟಣದ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರೇಷ್ಮೆ ಇಲಾಖೆ ವತಿಯಿಂದ ಶನಿವಾರ ಏರ್ಪಡಿಸಿದ್ದ ರೇಷ್ಮೆ ಕೃಷಿ ವಿಚಾರ ಸಂಕಿರಣ ಹಾಗೂ ಕ್ಷೇತ್ರೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೈತರು ಕೃಷಿ ಚಟುವಟಿಕೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳಬೇಕು ಎಂದರು.<br /> <br /> ತಾಲ್ಲೂಕು ರೇಷ್ಮೆ ಕೃಷಿ ವಿಸ್ತರಣಾಧಿಕಾರಿ ಬಿ.ರಾಜಗೋಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ರೇಷ್ಮೆ ಕೃಷಿ ಮಾಡುವವರು ರೋಗ ನಿಯಂತ್ರಣದ ಬಗ್ಗೆ ಎಚ್ಚರವಹಿಸಬೇಕು. ರೋಗಕ್ಕೆ ತುತ್ತಾದ ಬೆಳೆ ರಕ್ಷಿಸಲು ಯಾವುದೇ ಔಷಧ ಇರುವುದಿಲ್ಲ ಆದ್ದರಿಂದ ರೋಗ ಬರದಂತೆ ಎಚ್ಚರ ವಹಿಸಿ ಬೆಳೆ ಕಾಪಾಡಬೇಕು ಎಂದರು.<br /> <br /> ಅರಕಲಗೋಡು ಪ್ರಗತಿಪರ ರೇಷ್ಮೆ ಬೆಳೆಗಾರ ಕುಮಾರ್ ಮತ್ತು ಕಣತೂರು ಪ್ರಗತಿಪರ ರೈತ ರಾಜಶೇಖರ್ ಅವರು ರೇಷ್ಮೆ ಬೆಳೆಯ ಮಹತ್ವದ ಕುರಿತು ಮಾತಾಡಿದರು.<br /> <br /> ತಾಲ್ಲೂಕು ಪಂಚಾಯ್ತಿ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರಪ್ಪ ಇದ್ದರು.<br /> ರೇಷ್ಮೆ ಕೃಷಿ ನಿರೀಕ್ಷಕ ದೇವೇಂದ್ರ ಕುಮಾರ್ ಸ್ವಾಗತಿಸಿ, ರೇಷ್ಮೆ ಕೃಷಿ ನಿರೀಕ್ಷಕ ವೆಂಕಟರಾಮಣಗೌಡ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>