<p><strong>ಬೆಂಗಳೂರು</strong>: ರೇಷ್ಮೆ ಇಲಾಖೆಯ ಬೆಲೆ ಸ್ಥಿರೀಕರಣ ನಿಧಿ ಪ್ರಾಧಿಕಾರವನ್ನು ಪುನಶ್ಚೇತನಗೊಳಿಸುವುದು; ಆಮದು ಶುಲ್ಕ ಕಡಿತ ಮಾಡಿರುವುದನ್ನು ರದ್ದುಗೊಳಿಸಿ, ಹಿಂದೆ ಇದ್ದ ರೀತಿಯಲ್ಲೇ ಆಮದು ಶುಲ್ಕ ವಿಧಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದು ಸೇರಿದಂತೆ ಇತರ ನಿರ್ಧಾರಗಳನ್ನು ಶನಿವಾರದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.<br /> <br /> ರೇಷ್ಮೆ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲು ರೇಷ್ಮೆ ಸಚಿವ ಬಿ.ಎನ್.ಬಚ್ಚೇಗೌಡ ಅವರು ವಿಕಾಸ ಸೌಧದಲ್ಲಿ ರೇಷ್ಮೆ ಬೆಳೆಗಾರರು, ರೀಲರುಗಳು, ವರ್ತಕರು, ಹುರಿಕಾರರು, ನೇಕಾರರು, ರಫ್ತುದಾರರು, ಆಮದುದಾರರು ಮತ್ತು ಖಾಸಗಿ ಮೊಟ್ಟೆ ತಯಾರಕರ ಸಭೆ ಕರೆದಿದ್ದರು. <br /> <br /> ಈ ಸಭೆಯಲ್ಲಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು, ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರೂ ಭಾಗವಹಿಸಿದ್ದರು.ರೇಷ್ಮೆ ಮಾರುಕಟ್ಟೆ ಮತ್ತು ವಿನಿಮಯ ಕೇಂದ್ರದ ವಹಿವಾಟುಗಳನ್ನು ಪ್ರತಿನಿತ್ಯ ಗಮನಿಸಿ, ಅಗತ್ಯ ಇದ್ದಲ್ಲಿ ಬೆಲೆ ಸ್ಥಿರೀಕರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. <br /> <br /> ರೇಷ್ಮೆ ನೂಲು ಖರೀದಿಸಲು ಅನುಕೂಲವಾಗುವಂತೆ ರೇಷ್ಮೆ ಮಾರಾಟ ಮಂಡಳಿಗೆ ಅಗತ್ಯ ಹಣಕಾಸಿನ ನೆರವು ಮುಂದುವರೆಸುು; ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕೇಂದ್ರ ರೇಷ್ಮೆ ಮಂಡಳಿಯ ಸಲಹೆ ಮತ್ತು ಆರ್ಥಿಕ ಸಹಕಾರವನ್ನು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಸಚಿವ ಬಚ್ಚೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರೇಷ್ಮೆ ಇಲಾಖೆಯ ಬೆಲೆ ಸ್ಥಿರೀಕರಣ ನಿಧಿ ಪ್ರಾಧಿಕಾರವನ್ನು ಪುನಶ್ಚೇತನಗೊಳಿಸುವುದು; ಆಮದು ಶುಲ್ಕ ಕಡಿತ ಮಾಡಿರುವುದನ್ನು ರದ್ದುಗೊಳಿಸಿ, ಹಿಂದೆ ಇದ್ದ ರೀತಿಯಲ್ಲೇ ಆಮದು ಶುಲ್ಕ ವಿಧಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರುವುದು ಸೇರಿದಂತೆ ಇತರ ನಿರ್ಧಾರಗಳನ್ನು ಶನಿವಾರದ ಸಭೆಯಲ್ಲಿ ತೆಗೆದುಕೊಳ್ಳಲಾಯಿತು.<br /> <br /> ರೇಷ್ಮೆ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾಗಿರುವ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲು ರೇಷ್ಮೆ ಸಚಿವ ಬಿ.ಎನ್.ಬಚ್ಚೇಗೌಡ ಅವರು ವಿಕಾಸ ಸೌಧದಲ್ಲಿ ರೇಷ್ಮೆ ಬೆಳೆಗಾರರು, ರೀಲರುಗಳು, ವರ್ತಕರು, ಹುರಿಕಾರರು, ನೇಕಾರರು, ರಫ್ತುದಾರರು, ಆಮದುದಾರರು ಮತ್ತು ಖಾಸಗಿ ಮೊಟ್ಟೆ ತಯಾರಕರ ಸಭೆ ಕರೆದಿದ್ದರು. <br /> <br /> ಈ ಸಭೆಯಲ್ಲಿ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು, ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷರೂ ಭಾಗವಹಿಸಿದ್ದರು.ರೇಷ್ಮೆ ಮಾರುಕಟ್ಟೆ ಮತ್ತು ವಿನಿಮಯ ಕೇಂದ್ರದ ವಹಿವಾಟುಗಳನ್ನು ಪ್ರತಿನಿತ್ಯ ಗಮನಿಸಿ, ಅಗತ್ಯ ಇದ್ದಲ್ಲಿ ಬೆಲೆ ಸ್ಥಿರೀಕರಣದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು. <br /> <br /> ರೇಷ್ಮೆ ನೂಲು ಖರೀದಿಸಲು ಅನುಕೂಲವಾಗುವಂತೆ ರೇಷ್ಮೆ ಮಾರಾಟ ಮಂಡಳಿಗೆ ಅಗತ್ಯ ಹಣಕಾಸಿನ ನೆರವು ಮುಂದುವರೆಸುು; ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕುರಿತು ಕೇಂದ್ರ ರೇಷ್ಮೆ ಮಂಡಳಿಯ ಸಲಹೆ ಮತ್ತು ಆರ್ಥಿಕ ಸಹಕಾರವನ್ನು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಸಚಿವ ಬಚ್ಚೇಗೌಡ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>