<p><strong>ನವದೆಹಲಿ: </strong>ರಾಜ್ಯದ ರೇಷ್ಮೆ ಬೆಳೆಗಾರರ ಸಂಕಷ್ಟದ ಕುರಿತು ಅಧ್ಯಯನ ನಡೆಸಿ ಶೀಘ್ರ ವರದಿ ನೀಡುವಂತೆ ಯೋಜನಾ ಆಯೋಗದ ಉಪಾಧ್ಯಕ್ಷ ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ಆಯೋಗದ ಸದಸ್ಯ ಕೆ. ಕಸ್ತೂರಿ ರಂಗನ್ ಅವರಿಗೆ ಸೂಚನೆ ನೀಡಿದ್ದಾರೆ.<br /> <br /> ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ರಾಜ್ಯದ ವಾರ್ಷಿಕ ಯೋಜನಾ ಗಾತ್ರದ ಕುರಿತು ಚರ್ಚೆ ನಡೆಸಲು ಬುಧವಾರ ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು. <br /> <br /> ರೇಷ್ಮೆ ಬೆಳೆಗಾರರ ಸಮಸ್ಯೆ ಪ್ರಸ್ತಾಪಿಸಿದ ಸಿಎಂ, ಆಮದು ಕಚ್ಚಾ ರೇಷ್ಮೆ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದರ ಜತೆಯಲ್ಲಿ ರೇಷ್ಮೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದರು. <br /> <br /> ಕಸ್ತೂರಿ ರಂಗನ್ ವರದಿಯ ನಂತರ ತಾವು ಹಣಕಾಸು ಸಚಿವರೊಂದಿಗೆ ಚರ್ಚೆ ಕೈಗೊಂಡು ಪರಿಹಾರ ಕ್ರಮ ಕೈಗೊಳ್ಳುವುದಾಗಿ ಅಹ್ಲುವಾಲಿಯಾ ಈ ಸಂದರ್ಭದಲ್ಲಿ ಸಿಎಂಗೆ ಭರವಸೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಜ್ಯದ ರೇಷ್ಮೆ ಬೆಳೆಗಾರರ ಸಂಕಷ್ಟದ ಕುರಿತು ಅಧ್ಯಯನ ನಡೆಸಿ ಶೀಘ್ರ ವರದಿ ನೀಡುವಂತೆ ಯೋಜನಾ ಆಯೋಗದ ಉಪಾಧ್ಯಕ್ಷ ಮೋಂಟೆಕ್ ಸಿಂಗ್ ಅಹ್ಲುವಾಲಿಯಾ ಆಯೋಗದ ಸದಸ್ಯ ಕೆ. ಕಸ್ತೂರಿ ರಂಗನ್ ಅವರಿಗೆ ಸೂಚನೆ ನೀಡಿದ್ದಾರೆ.<br /> <br /> ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ರಾಜ್ಯದ ವಾರ್ಷಿಕ ಯೋಜನಾ ಗಾತ್ರದ ಕುರಿತು ಚರ್ಚೆ ನಡೆಸಲು ಬುಧವಾರ ಇಲ್ಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ನಿರ್ಧಾರ ಪ್ರಕಟಿಸಲಾಯಿತು. <br /> <br /> ರೇಷ್ಮೆ ಬೆಳೆಗಾರರ ಸಮಸ್ಯೆ ಪ್ರಸ್ತಾಪಿಸಿದ ಸಿಎಂ, ಆಮದು ಕಚ್ಚಾ ರೇಷ್ಮೆ ಮೇಲೆ ಹೆಚ್ಚಿನ ತೆರಿಗೆ ವಿಧಿಸುವುದರ ಜತೆಯಲ್ಲಿ ರೇಷ್ಮೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರವನ್ನು ಒತ್ತಾಯಿಸಿದರು. <br /> <br /> ಕಸ್ತೂರಿ ರಂಗನ್ ವರದಿಯ ನಂತರ ತಾವು ಹಣಕಾಸು ಸಚಿವರೊಂದಿಗೆ ಚರ್ಚೆ ಕೈಗೊಂಡು ಪರಿಹಾರ ಕ್ರಮ ಕೈಗೊಳ್ಳುವುದಾಗಿ ಅಹ್ಲುವಾಲಿಯಾ ಈ ಸಂದರ್ಭದಲ್ಲಿ ಸಿಎಂಗೆ ಭರವಸೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>