<p>ಜಾಗತಿಕ ಮಟ್ಟದಲ್ಲಿ ರೇಷ್ಮೆಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಗುಣಮಟ್ಟದ ರೇಷ್ಮೆ ಉತ್ಪಾದನೆ ಮೂಲಕ ಭಾರತ ಜಗತ್ತಿನ ಒಂದು ಪ್ರಮುಖ ರೇಷ್ಮೆ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಲು ಸಾಕಷ್ಟು ಅವಕಾಶಗಳಿವೆ. <br /> <br /> ರೇಷ್ಮೆ ಉದ್ದಿಮೆಗೆ ಸಂಬಂಧಿಸಿದ ಉತ್ತಮ ಹಿಪ್ಪುನೇರಳೆ ತಳಿ, ಮೊಟ್ಟೆ ಉತ್ಪಾದನೆ, ಹುಳು ಸಾಕಾಣಿಕೆ, ತೋಟ-ಮನೆಗಳ ನಿರ್ವಹಣೆ, ರೋಗಗಳ ನಿಯಂತ್ರಣ-ನಿವಾರಣೆ, ರೇಷ್ಮೆ ಸಂಸ್ಕರಣೆಯ ಹಾಗೂ ನೇಯ್ಗೆಯ ಕ್ಷೇತ್ರಗಳಲ್ಲಿ ವೈಜ್ಞಾನಿಕವಾಗಿ ಹೊಸ ಹೊಸ ಆವಿಷ್ಕಾರ ಹಾಗೂ ಸಂಶೋಧನೆ ನಡೆಸುವ ಮೂಲಕ ರೇಷ್ಮೆ ಉದ್ದಿಮೆಯು ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಗಮನಹರಿಸಬೇಕು.<br /> <br /> ರೇಷ್ಮೆ ಉದ್ದಿಮೆಯಲ್ಲಿ ರೈತರು, ಕೂಲಿಕಾರರು, ಮೊಟ್ಟೆ ಉತ್ಪಾದಕರು, ರೀಲರುಗಳು, ನೇಕಾರರು, ಚಾಕಿ ಕೇಂದ್ರಗಳ ಮಾಲೀಕರು, ವ್ಯಾಪಾರಿಗಳು ಹೀಗೆ ವಿವಿಧ ಜನರನ್ನು ಕಾಣುತ್ತೇವೆ.<br /> <br /> ಹೀಗಾಗಿ ಇದೊಂದು ಬೃಹತ್ ಉದ್ದಿಮೆಯಾಗಿದೆ. ಇಲ್ಲಿ ಮಾನವ ಉದ್ಯೋಗಗಳ ಸೃಷ್ಟಿಗೆ ಅವಕಾಶವಿದೆ. ಇಂತಹ ಸ್ಥಿತಿಯಲ್ಲಿ ದೇಶದಲ್ಲಿ ರೇಷ್ಮೆ ಉದ್ದಿಮೆ ಮಾನವ ಸಂಪನ್ಮೂಲದ ಸದ್ಬಳಕೆ ಹಾಗೂ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಹೊಸ ಸಂಶೋಧನೆಗಳು ಆಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಗತಿಕ ಮಟ್ಟದಲ್ಲಿ ರೇಷ್ಮೆಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಗುಣಮಟ್ಟದ ರೇಷ್ಮೆ ಉತ್ಪಾದನೆ ಮೂಲಕ ಭಾರತ ಜಗತ್ತಿನ ಒಂದು ಪ್ರಮುಖ ರೇಷ್ಮೆ ಉತ್ಪಾದಕ ರಾಷ್ಟ್ರವಾಗಿ ಹೊರಹೊಮ್ಮಲು ಸಾಕಷ್ಟು ಅವಕಾಶಗಳಿವೆ. <br /> <br /> ರೇಷ್ಮೆ ಉದ್ದಿಮೆಗೆ ಸಂಬಂಧಿಸಿದ ಉತ್ತಮ ಹಿಪ್ಪುನೇರಳೆ ತಳಿ, ಮೊಟ್ಟೆ ಉತ್ಪಾದನೆ, ಹುಳು ಸಾಕಾಣಿಕೆ, ತೋಟ-ಮನೆಗಳ ನಿರ್ವಹಣೆ, ರೋಗಗಳ ನಿಯಂತ್ರಣ-ನಿವಾರಣೆ, ರೇಷ್ಮೆ ಸಂಸ್ಕರಣೆಯ ಹಾಗೂ ನೇಯ್ಗೆಯ ಕ್ಷೇತ್ರಗಳಲ್ಲಿ ವೈಜ್ಞಾನಿಕವಾಗಿ ಹೊಸ ಹೊಸ ಆವಿಷ್ಕಾರ ಹಾಗೂ ಸಂಶೋಧನೆ ನಡೆಸುವ ಮೂಲಕ ರೇಷ್ಮೆ ಉದ್ದಿಮೆಯು ಸರ್ವಾಂಗೀಣ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಗಮನಹರಿಸಬೇಕು.<br /> <br /> ರೇಷ್ಮೆ ಉದ್ದಿಮೆಯಲ್ಲಿ ರೈತರು, ಕೂಲಿಕಾರರು, ಮೊಟ್ಟೆ ಉತ್ಪಾದಕರು, ರೀಲರುಗಳು, ನೇಕಾರರು, ಚಾಕಿ ಕೇಂದ್ರಗಳ ಮಾಲೀಕರು, ವ್ಯಾಪಾರಿಗಳು ಹೀಗೆ ವಿವಿಧ ಜನರನ್ನು ಕಾಣುತ್ತೇವೆ.<br /> <br /> ಹೀಗಾಗಿ ಇದೊಂದು ಬೃಹತ್ ಉದ್ದಿಮೆಯಾಗಿದೆ. ಇಲ್ಲಿ ಮಾನವ ಉದ್ಯೋಗಗಳ ಸೃಷ್ಟಿಗೆ ಅವಕಾಶವಿದೆ. ಇಂತಹ ಸ್ಥಿತಿಯಲ್ಲಿ ದೇಶದಲ್ಲಿ ರೇಷ್ಮೆ ಉದ್ದಿಮೆ ಮಾನವ ಸಂಪನ್ಮೂಲದ ಸದ್ಬಳಕೆ ಹಾಗೂ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಹೊಸ ಸಂಶೋಧನೆಗಳು ಆಗಬೇಕಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>