<p><strong>ಹೊನ್ನಾಳಿ: </strong>ಪಟ್ಟಣದ ಪಿಎಲ್ಡಿ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಉತ್ತಮವಾಗಿ ವ್ಯವಹಾರ ನಡೆಸಿದೆ. ನಬಾರ್ಡ್ನ ಎಲ್ಲಾ ಸೂಚನೆಗಳನ್ನು ಪಾಲಿಸಿ ಸಹಾಯಧನ ಪಡೆದು ರೈತರಿಗೆ ಸಮರ್ಪಕವಾಗಿ ಸಾಲ ವಿತರಿಸಿ, ಎಲ್ಲರ ಪ್ರೀತಿಗೆ ಪಾತ್ರವಾಗಿದೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಸ್.ಪಿ. ಬಸವನಗೌಡ ಹೇಳಿದರು. <br /> <br /> ಸೋಮವಾರ ಪಟ್ಟಣದಲ್ಲಿ ನಡೆದ ಪಿಎಲ್ಡಿ ಬ್ಯಾಂಕ್ನ 2010-11ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.<br /> <br /> ರಾಜ್ಯದ 177 ಪಿಎಲ್ಡಿ ಬ್ಯಾಂಕ್ಗಳಲ್ಲಿ 2 ಸೂಪರ್ಸೀಡ್ ಆಗಿವೆ. 8 ಬ್ಯಾಂಕ್ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಉಳಿದ 167 ಬ್ಯಾಂಕ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಆ ಪೈಕಿ ಹೊನ್ನಾಳಿಯ ಪಿಎಲ್ಡಿ ಬ್ಯಾಂಕ್ ಕೂಡಾ ಒಂದಾಗಿದೆ.</p>.<p>ಸಾಲ ವಸೂಲಾತಿಗಾಗಿ ಬ್ಯಾಂಕ್ ಕೆಲ ಕಠಿಣ ಕ್ರಮ ಕೈಗೊಂಡಿದೆ. ಇದರಿಂದ ರೈತರು ಬೇಸರ ಮಾಡಿಕೊಳ್ಳಬಾರದು. ಬ್ಯಾಂಕ್ನ ಅಭಿವೃದ್ಧಿಗೆ ಮತ್ತು ನಬಾರ್ಡ್ನಿಂದ ಹೆಚ್ಚಿನ ಸಹಾಯಧನ ಪಡೆಯಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.<br /> <br /> ಇನ್ನೂ ಸಾಲ ಉಳಿಸಿಕೊಂಡಿರುವ ರೈತರು ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕ್ನ ಏಳಿಗೆಗೆ ಕಾರಣೀಭೂತರಾಗಬೇಕು ಎಂದು ಅವರು ತಿಳಿಸಿದರು. <br /> <br /> ಉಪಾಧ್ಯಕ್ಷೆ ಸುಭದ್ರಮ್ಮ, ಜಿ. ಶಂಕರಮೂರ್ತಿ, ಎಚ್.ಎಂ. ಗಂಗಾಧರಯ್ಯ, ಕೆ.ವಿ. ನಾಗರಾಜ್, ಕೆ. ಕರಿಬಸಪ್ಪ, ಬಿ.ಜಿ. ಶಿವಕುಮಾರ್, ಕೆ.ಇ. ನಾಗರಾಜ್ ಮಾದೇನಹಳ್ಳಿ, ಟಿ. ನಾಗರಾಜಪ್ಪ, ಎಚ್.ಪಿ. ವೇದಮೂರ್ತಿ, ಕೆ. ಶಿವಮೂರ್ತಿ, ಜಿ. ಈಶ್ವರಪ್ಪ, ಕೆ.ಎಸ್. ಸಿದ್ದಬಸಪ್ಪ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong>ಪಟ್ಟಣದ ಪಿಎಲ್ಡಿ ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ ಉತ್ತಮವಾಗಿ ವ್ಯವಹಾರ ನಡೆಸಿದೆ. ನಬಾರ್ಡ್ನ ಎಲ್ಲಾ ಸೂಚನೆಗಳನ್ನು ಪಾಲಿಸಿ ಸಹಾಯಧನ ಪಡೆದು ರೈತರಿಗೆ ಸಮರ್ಪಕವಾಗಿ ಸಾಲ ವಿತರಿಸಿ, ಎಲ್ಲರ ಪ್ರೀತಿಗೆ ಪಾತ್ರವಾಗಿದೆ ಎಂದು ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಸ್.ಪಿ. ಬಸವನಗೌಡ ಹೇಳಿದರು. <br /> <br /> ಸೋಮವಾರ ಪಟ್ಟಣದಲ್ಲಿ ನಡೆದ ಪಿಎಲ್ಡಿ ಬ್ಯಾಂಕ್ನ 2010-11ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.<br /> <br /> ರಾಜ್ಯದ 177 ಪಿಎಲ್ಡಿ ಬ್ಯಾಂಕ್ಗಳಲ್ಲಿ 2 ಸೂಪರ್ಸೀಡ್ ಆಗಿವೆ. 8 ಬ್ಯಾಂಕ್ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಉಳಿದ 167 ಬ್ಯಾಂಕ್ಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತವೆ. ಆ ಪೈಕಿ ಹೊನ್ನಾಳಿಯ ಪಿಎಲ್ಡಿ ಬ್ಯಾಂಕ್ ಕೂಡಾ ಒಂದಾಗಿದೆ.</p>.<p>ಸಾಲ ವಸೂಲಾತಿಗಾಗಿ ಬ್ಯಾಂಕ್ ಕೆಲ ಕಠಿಣ ಕ್ರಮ ಕೈಗೊಂಡಿದೆ. ಇದರಿಂದ ರೈತರು ಬೇಸರ ಮಾಡಿಕೊಳ್ಳಬಾರದು. ಬ್ಯಾಂಕ್ನ ಅಭಿವೃದ್ಧಿಗೆ ಮತ್ತು ನಬಾರ್ಡ್ನಿಂದ ಹೆಚ್ಚಿನ ಸಹಾಯಧನ ಪಡೆಯಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.<br /> <br /> ಇನ್ನೂ ಸಾಲ ಉಳಿಸಿಕೊಂಡಿರುವ ರೈತರು ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕ್ನ ಏಳಿಗೆಗೆ ಕಾರಣೀಭೂತರಾಗಬೇಕು ಎಂದು ಅವರು ತಿಳಿಸಿದರು. <br /> <br /> ಉಪಾಧ್ಯಕ್ಷೆ ಸುಭದ್ರಮ್ಮ, ಜಿ. ಶಂಕರಮೂರ್ತಿ, ಎಚ್.ಎಂ. ಗಂಗಾಧರಯ್ಯ, ಕೆ.ವಿ. ನಾಗರಾಜ್, ಕೆ. ಕರಿಬಸಪ್ಪ, ಬಿ.ಜಿ. ಶಿವಕುಮಾರ್, ಕೆ.ಇ. ನಾಗರಾಜ್ ಮಾದೇನಹಳ್ಳಿ, ಟಿ. ನಾಗರಾಜಪ್ಪ, ಎಚ್.ಪಿ. ವೇದಮೂರ್ತಿ, ಕೆ. ಶಿವಮೂರ್ತಿ, ಜಿ. ಈಶ್ವರಪ್ಪ, ಕೆ.ಎಸ್. ಸಿದ್ದಬಸಪ್ಪ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>