<p><strong>ಹೊನ್ನಾಳಿ: </strong> ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಾಲ್ಲೂಕಿನ ಬಡ ರೈತರತ್ತ ತಿರುಗಿಯೂ ನೋಡುತ್ತಿಲ್ಲ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ಆರ್. ಮಹೇಶ್ ಕಟಕಿಯಾಡಿದರು. ತುಂಗಾ ಎಡನಾಲೆಯಲ್ಲಿ ಅಪಾರ ಪ್ರಮಾಣದ ಹೂಳು ತುಂಬಿರುವ ಕಾರಣ ದೊಡ್ಡೇರಿ ಗ್ರಾಮದಿಂದ ಬಳ್ಳೇಶ್ವರ ಗ್ರಾಮದವರೆಗೆ ಸಮರ್ಪಕವಾಗಿ ನೀರು ಲಭಿಸುತ್ತಿಲ್ಲ. <br /> <br /> ಹರಳಹಳ್ಳಿ, ಬಿದರಗಡ್ಡೆ, ಮಾದಾಪುರ, ಹಿರೇಮಠ, ಬಲಮುರಿ, ಕೊನಾಯಕನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ರೈತರು ನೀರಿನ ಕೊರತೆಯಿಂದ ಕಂಗಾಲಾಗಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. <br /> ರಾಜ್ಯದ ವೈನ್ಶಾಪ್ಗಳ ಮಾಲೀಕರಿಂದ ಸಾವಿರಗಟ್ಟಲೇ ಮಾಮೂಲು ಹಣ ವಸೂಲಿ ಮಾಡುವುದರಲ್ಲೇ ರೇಣುಕಾಚಾರ್ಯ ನಿರತರಾಗಿದ್ದಾರೆ ಎಂದು ಆರೋಪಿಸಿದರು. <br /> <br /> ಜೆಡಿಎಸ್ ಮುಖಂಡ ತುಮ್ಮಿನಕಟ್ಟಿ ನಾಗರಾಜ್ ಮಾತನಾಡಿ, ಈ ಹಿಂದೆ ಎಂದೂ ಕಂಡು-ಕೇಳರಿಯದಷ್ಟು ಜಾತಿ ರಾಜಕೀಯವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ರಾಜ್ಯದ ಲಿಂಗಾಯತ ಸಮುದಾಯಕ್ಕೆ ಅವಮಾನವಾಗುತ್ತಿದೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಜನ ಬೇಸತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ವನಜಾಕ್ಷಮ್ಮ, ಲಕ್ಷ್ಮಿದೇವಮ್ಮ, ಯುವ ಘಟಕದ ಅಧ್ಯಕ್ಷ ಬಿ.ಎಸ್. ಆನಂದ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ: </strong> ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ತಾಲ್ಲೂಕಿನ ಬಡ ರೈತರತ್ತ ತಿರುಗಿಯೂ ನೋಡುತ್ತಿಲ್ಲ ಎಂದು ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಎಂ.ಆರ್. ಮಹೇಶ್ ಕಟಕಿಯಾಡಿದರು. ತುಂಗಾ ಎಡನಾಲೆಯಲ್ಲಿ ಅಪಾರ ಪ್ರಮಾಣದ ಹೂಳು ತುಂಬಿರುವ ಕಾರಣ ದೊಡ್ಡೇರಿ ಗ್ರಾಮದಿಂದ ಬಳ್ಳೇಶ್ವರ ಗ್ರಾಮದವರೆಗೆ ಸಮರ್ಪಕವಾಗಿ ನೀರು ಲಭಿಸುತ್ತಿಲ್ಲ. <br /> <br /> ಹರಳಹಳ್ಳಿ, ಬಿದರಗಡ್ಡೆ, ಮಾದಾಪುರ, ಹಿರೇಮಠ, ಬಲಮುರಿ, ಕೊನಾಯಕನಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ರೈತರು ನೀರಿನ ಕೊರತೆಯಿಂದ ಕಂಗಾಲಾಗಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. <br /> ರಾಜ್ಯದ ವೈನ್ಶಾಪ್ಗಳ ಮಾಲೀಕರಿಂದ ಸಾವಿರಗಟ್ಟಲೇ ಮಾಮೂಲು ಹಣ ವಸೂಲಿ ಮಾಡುವುದರಲ್ಲೇ ರೇಣುಕಾಚಾರ್ಯ ನಿರತರಾಗಿದ್ದಾರೆ ಎಂದು ಆರೋಪಿಸಿದರು. <br /> <br /> ಜೆಡಿಎಸ್ ಮುಖಂಡ ತುಮ್ಮಿನಕಟ್ಟಿ ನಾಗರಾಜ್ ಮಾತನಾಡಿ, ಈ ಹಿಂದೆ ಎಂದೂ ಕಂಡು-ಕೇಳರಿಯದಷ್ಟು ಜಾತಿ ರಾಜಕೀಯವನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ರಾಜ್ಯದ ಲಿಂಗಾಯತ ಸಮುದಾಯಕ್ಕೆ ಅವಮಾನವಾಗುತ್ತಿದೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳಿಂದ ಜನ ಬೇಸತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ವನಜಾಕ್ಷಮ್ಮ, ಲಕ್ಷ್ಮಿದೇವಮ್ಮ, ಯುವ ಘಟಕದ ಅಧ್ಯಕ್ಷ ಬಿ.ಎಸ್. ಆನಂದ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>