<p>ಬೆಂಗಳೂರು: ನಾಡಿನ ರೈತರ ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಬಲ್ಲ ಒಂದು ಲಕ್ಷಕ್ಕೂ ಹೆಚ್ಚಿನ ತಾಂತ್ರಿಕ ಆವಿಷ್ಕಾರಗಳ ಮಾಹಿತಿ ಟೆಕ್ಪೀಡಿಯಾ ((<a href="http://www.techpedia.in">www.techpedia.in</a>) ವೆಬ್ಸೈಟ್ನಲ್ಲಿ ದೊರೆಯುತ್ತಿದೆ. <br /> <br /> ಇಲ್ಲಿ ವಿವರಿಸಲಾದ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದು. ಇದಕ್ಕೆ ಯಾರ ಪೂರ್ವಾನುಮತಿಯೂ ಬೇಕಿಲ್ಲ ಎಂದು ಅಹಮದಾಬಾದ್ನ `ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆ~ಯ (ಐಐಎಂ-ಎ) ಪ್ರೊ. ಅನಿಲ್ ಗುಪ್ತ ಹೇಳಿದರು.<br /> <br /> ವಿಕಾಸಸೌಧದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ `ಗ್ರಾಮೀಣಾಭಿವೃದ್ಧಿ, ಕೃಷಿ, ಆಡಳಿತ ವಿಷಯದಲ್ಲಿ ಅವಿಷ್ಕಾರಗಳು~ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, `ದೇಶದ 500ಕ್ಕೂ ಹೆಚ್ಚಿನ ತಾಂತ್ರಿಕ ಕಾಲೇಜುಗಳ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ಕ್ಷೇತ್ರಕ್ಕೆ ಅನುಕೂಲವಾಗಬಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದಾರೆ. ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಸೇವೆಯನ್ನು ಕೃಷಿಯಂತಹ ಅಸಂಘಟಿತ ವಲಯದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು~ ಎಂದು ಸಲಹೆ ನೀಡಿದರು.<br /> <br /> `ಗ್ರಾಮೀಣ ಭಾರತ ಎದುರಿಸುತ್ತಿರುವ ಅನೇಕ ಸವಾಲುಗಳಿಗೆ ರೈತ ಸಮುದಾಯದಲ್ಲೇ ಪರಿಹಾರ ಇದೆ~ ಎಂದ ಅವರು, `ಟೆಕ್ಪೀಡಿಯಾ ವೆಬ್ಸೈಟ್ನಲ್ಲಿರುವ ಮಾಹಿತಿಯನ್ನು ಕನ್ನಡಕ್ಕೆ ಅನುವಾದಿಸಬೇಕು. ಇದರಿಂದ ನಾಡಿನ ಎಲ್ಲ ರೈತರಿಗೂ ಅನುಕೂಲವಾಗುತ್ತದೆ~ ಎಂದು ಸರ್ಕಾರಕ್ಕೆ ಸಲಹೆ ಮಾಡಿದರು.<br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರು, `ಇಲ್ಲಿಯವರೆಗೆ ನಾಡಿನ ಕೈಗಾರಿಕಾ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಆವಿಷ್ಕಾರಗಳನ್ನು ಅಭಿವೃದ್ಧಿಪಡಿಸಿದ್ದಾಯಿತು. ಇನ್ನಾದರೂ ಕೃಷಿ ಕ್ಷೇತ್ರ ಕುರಿತು ಗಮಹರಿಸಬೇಕು~ ಎಂದರು.<br /> <br /> ಹೊಸ ಆವಿಷ್ಕಾರಗಳತ್ತ ಮುಖ ಮಾಡುವ ಪ್ರವೃತ್ತಿ ದೇಶದಲ್ಲಿ ಇನ್ನೂ ಬಾಲ್ಯಾವಸ್ಥೆಯಲ್ಲೇ ಇದೆ. ಪ್ರೊ. ಗುಪ್ತ ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಭರವಸೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ನಾಡಿನ ರೈತರ ವಿವಿಧ ಸಮಸ್ಯೆಗಳಿಗೆ ಪರಿಹಾರ ಸೂಚಿಸಬಲ್ಲ ಒಂದು ಲಕ್ಷಕ್ಕೂ ಹೆಚ್ಚಿನ ತಾಂತ್ರಿಕ ಆವಿಷ್ಕಾರಗಳ ಮಾಹಿತಿ ಟೆಕ್ಪೀಡಿಯಾ ((<a href="http://www.techpedia.in">www.techpedia.in</a>) ವೆಬ್ಸೈಟ್ನಲ್ಲಿ ದೊರೆಯುತ್ತಿದೆ. <br /> <br /> ಇಲ್ಲಿ ವಿವರಿಸಲಾದ ತಂತ್ರಜ್ಞಾನವನ್ನು ಬಳಸಿಕೊಳ್ಳಬಹುದು. ಇದಕ್ಕೆ ಯಾರ ಪೂರ್ವಾನುಮತಿಯೂ ಬೇಕಿಲ್ಲ ಎಂದು ಅಹಮದಾಬಾದ್ನ `ಭಾರತೀಯ ಆಡಳಿತ ನಿರ್ವಹಣಾ ಸಂಸ್ಥೆ~ಯ (ಐಐಎಂ-ಎ) ಪ್ರೊ. ಅನಿಲ್ ಗುಪ್ತ ಹೇಳಿದರು.<br /> <br /> ವಿಕಾಸಸೌಧದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ `ಗ್ರಾಮೀಣಾಭಿವೃದ್ಧಿ, ಕೃಷಿ, ಆಡಳಿತ ವಿಷಯದಲ್ಲಿ ಅವಿಷ್ಕಾರಗಳು~ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, `ದೇಶದ 500ಕ್ಕೂ ಹೆಚ್ಚಿನ ತಾಂತ್ರಿಕ ಕಾಲೇಜುಗಳ ಮೂರು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಕೃಷಿ ಕ್ಷೇತ್ರಕ್ಕೆ ಅನುಕೂಲವಾಗಬಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿದ್ದಾರೆ. ತಾಂತ್ರಿಕ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ಸೇವೆಯನ್ನು ಕೃಷಿಯಂತಹ ಅಸಂಘಟಿತ ವಲಯದ ಅಭಿವೃದ್ಧಿಗಾಗಿ ಬಳಸಿಕೊಳ್ಳಬೇಕು~ ಎಂದು ಸಲಹೆ ನೀಡಿದರು.<br /> <br /> `ಗ್ರಾಮೀಣ ಭಾರತ ಎದುರಿಸುತ್ತಿರುವ ಅನೇಕ ಸವಾಲುಗಳಿಗೆ ರೈತ ಸಮುದಾಯದಲ್ಲೇ ಪರಿಹಾರ ಇದೆ~ ಎಂದ ಅವರು, `ಟೆಕ್ಪೀಡಿಯಾ ವೆಬ್ಸೈಟ್ನಲ್ಲಿರುವ ಮಾಹಿತಿಯನ್ನು ಕನ್ನಡಕ್ಕೆ ಅನುವಾದಿಸಬೇಕು. ಇದರಿಂದ ನಾಡಿನ ಎಲ್ಲ ರೈತರಿಗೂ ಅನುಕೂಲವಾಗುತ್ತದೆ~ ಎಂದು ಸರ್ಕಾರಕ್ಕೆ ಸಲಹೆ ಮಾಡಿದರು.<br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರು, `ಇಲ್ಲಿಯವರೆಗೆ ನಾಡಿನ ಕೈಗಾರಿಕಾ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಆವಿಷ್ಕಾರಗಳನ್ನು ಅಭಿವೃದ್ಧಿಪಡಿಸಿದ್ದಾಯಿತು. ಇನ್ನಾದರೂ ಕೃಷಿ ಕ್ಷೇತ್ರ ಕುರಿತು ಗಮಹರಿಸಬೇಕು~ ಎಂದರು.<br /> <br /> ಹೊಸ ಆವಿಷ್ಕಾರಗಳತ್ತ ಮುಖ ಮಾಡುವ ಪ್ರವೃತ್ತಿ ದೇಶದಲ್ಲಿ ಇನ್ನೂ ಬಾಲ್ಯಾವಸ್ಥೆಯಲ್ಲೇ ಇದೆ. ಪ್ರೊ. ಗುಪ್ತ ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ. ಜೈರಾಜ್ ಭರವಸೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>