<p><strong>ಬೆಂಗಳೂರು:</strong> ಕೃಷಿ ಉತ್ಪನ್ನಗಳಿಗೆ ಬೆಲೆ ನಿರ್ಧರಿಸಲು ರೈತರ ಸಮಿತಿ ರಚಿಸಬೇಕು, ಉದ್ಯೋಗ ಖಾತರಿ ಯೋಜನೆಯ ಹಣವನ್ನು ಕೃಷಿಯ ಎಲ್ಲ ಚಟುವಟಿಕೆಗಳಿಗೂ ಬಳಸಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಕೆಪಿಸಿಸಿ ಕಿಸಾನ್ ಘಟಕ, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಸಲ್ಲಿಸಿತು.<br /> <br /> ಕಿಸಾನ್ ಘಟಕದ ಹಿರಿಯ ಉಪಾಧ್ಯಕ್ಷ ಆನಂದ್ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಇಲ್ಲಿ ಭೇಟಿ ಮಾಡಿದ ಘಟಕದ ಸದಸ್ಯರು, ವಿವಿಧ ಬೇಡಿಕೆಗಳಿರುವ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರದಲ್ಲಿ ಇರುವ ಅಂಶಗಳನ್ನು ಮುಂಬರುವ ಬಜೆಟ್ನಲ್ಲಿ ಸೇರಿಸಬೇಕು ಎಂದು ಕೋರಿದರು.<br /> <br /> ಕೃಷಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಸಾವಿಗೀಡಾಗುವ ರೈತರ ಜಾನುವಾರುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಮನವಿಗಳು ಇದರಲ್ಲಿ ಸೇರಿವೆ. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಈ ಕುರಿತು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೃಷಿ ಉತ್ಪನ್ನಗಳಿಗೆ ಬೆಲೆ ನಿರ್ಧರಿಸಲು ರೈತರ ಸಮಿತಿ ರಚಿಸಬೇಕು, ಉದ್ಯೋಗ ಖಾತರಿ ಯೋಜನೆಯ ಹಣವನ್ನು ಕೃಷಿಯ ಎಲ್ಲ ಚಟುವಟಿಕೆಗಳಿಗೂ ಬಳಸಬೇಕು ಎಂಬ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಕೆಪಿಸಿಸಿ ಕಿಸಾನ್ ಘಟಕ, ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಸಲ್ಲಿಸಿತು.<br /> <br /> ಕಿಸಾನ್ ಘಟಕದ ಹಿರಿಯ ಉಪಾಧ್ಯಕ್ಷ ಆನಂದ್ ಕುಮಾರ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಇಲ್ಲಿ ಭೇಟಿ ಮಾಡಿದ ಘಟಕದ ಸದಸ್ಯರು, ವಿವಿಧ ಬೇಡಿಕೆಗಳಿರುವ ಮನವಿ ಪತ್ರ ಸಲ್ಲಿಸಿದರು. ಮನವಿ ಪತ್ರದಲ್ಲಿ ಇರುವ ಅಂಶಗಳನ್ನು ಮುಂಬರುವ ಬಜೆಟ್ನಲ್ಲಿ ಸೇರಿಸಬೇಕು ಎಂದು ಕೋರಿದರು.<br /> <br /> ಕೃಷಿ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಸಾವಿಗೀಡಾಗುವ ರೈತರ ಜಾನುವಾರುಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂಬ ಮನವಿಗಳು ಇದರಲ್ಲಿ ಸೇರಿವೆ. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಈ ಕುರಿತು ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>