<p><strong>ಮುಳಬಾಗಲು: </strong>ದೇಶಕ್ಕೆ ಸ್ವಾತಂತ್ರ್ಯ ಬಂದು 65 ವರ್ಷ ಕಳೆದರೂ ರೈತರ ಸಂಕಷ್ಟ ಹಾಗೂ ರೈತರ ಕ್ಷೇಮಾಭಿವೃದ್ಧಿ ಸಲುವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಶಾಸಕ ಅಮರೇಶ್ ಇಲ್ಲಿ ಬುಧವಾರ ವಿಷಾದಿಸಿದರು.<br /> <br /> ರೇಷ್ಮೆ ಮತ್ತು ಟೊಮೆಟೊ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿ, ರೈತರ ಸಂಕಷ್ಟಗಳಿಗೆ ಸರ್ಕಾರಗಳು ಸ್ಪಂದಿಸದಿದ್ದರೆ ಭವಿಷ್ಯದಲ್ಲಿ ಆಹಾರ ಅಭಾವ ಉಂಟಾಗಲಿದೆ ಎಂದು ಎಚ್ಚರಿಸಿದರು.ಕಿಸಾನ್ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್ ಮಾತನಾಡಿ ಬೇಸಾಯ ಪದ್ಧತಿ ಸುಧಾರಣೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. <br /> <br /> ಆದರೆ ಅಧಿಕಾರಿಗಳು, ರಾಜಕಾರಣಿಗಳ ಕಪಿಮುಷ್ಠಿಗಳಿಂದ ಯೋಜನೆಗಳು ರೈತರಿಗೆ ತಲುಪುತ್ತಿಲ್ಲ ಎಂದರು. ರೈತಸೇನೆ ರಾಜ್ಯ ಘಟಕದ ಗೌರವಾಧ್ಯಕ್ಷ ಡಾ.ಎಸ್.ವಿ.ರಮೇಶ್, ಅಧ್ಯಕ್ಷ ಆರ್.ನಾರಾಯಣಗೌಡ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ತ್ರೀವೇಣಮ್ಮ.<br /> <br /> ಉಪಾಧ್ಯಕ್ಷ ಎಂ.ಎಸ್.ಶ್ರೀನಿವಾಸರೆಡ್ಡಿ, ಕನ್ನಡಭಟ ವೆಂಕಟಪ್ಪ, ವರ್ತಕರ ಸಂಘದ ಅಧ್ಯಕ್ಷ ಎನ್.ಆರ್.ಸತ್ಯಾ, ವಕೀಲರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಜಯಪ್ಪ, ನಾಗರಾಜ್. ಎಸ್.ಎನ್.ರಾಮಕೃಷ್ಣೇಗೌಡ, ಕುಮಾರಾಚಾರಿ ಮಾತನಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಲು: </strong>ದೇಶಕ್ಕೆ ಸ್ವಾತಂತ್ರ್ಯ ಬಂದು 65 ವರ್ಷ ಕಳೆದರೂ ರೈತರ ಸಂಕಷ್ಟ ಹಾಗೂ ರೈತರ ಕ್ಷೇಮಾಭಿವೃದ್ಧಿ ಸಲುವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಶಾಸಕ ಅಮರೇಶ್ ಇಲ್ಲಿ ಬುಧವಾರ ವಿಷಾದಿಸಿದರು.<br /> <br /> ರೇಷ್ಮೆ ಮತ್ತು ಟೊಮೆಟೊ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿ, ರೈತರ ಸಂಕಷ್ಟಗಳಿಗೆ ಸರ್ಕಾರಗಳು ಸ್ಪಂದಿಸದಿದ್ದರೆ ಭವಿಷ್ಯದಲ್ಲಿ ಆಹಾರ ಅಭಾವ ಉಂಟಾಗಲಿದೆ ಎಂದು ಎಚ್ಚರಿಸಿದರು.ಕಿಸಾನ್ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್ ಮಾತನಾಡಿ ಬೇಸಾಯ ಪದ್ಧತಿ ಸುಧಾರಣೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. <br /> <br /> ಆದರೆ ಅಧಿಕಾರಿಗಳು, ರಾಜಕಾರಣಿಗಳ ಕಪಿಮುಷ್ಠಿಗಳಿಂದ ಯೋಜನೆಗಳು ರೈತರಿಗೆ ತಲುಪುತ್ತಿಲ್ಲ ಎಂದರು. ರೈತಸೇನೆ ರಾಜ್ಯ ಘಟಕದ ಗೌರವಾಧ್ಯಕ್ಷ ಡಾ.ಎಸ್.ವಿ.ರಮೇಶ್, ಅಧ್ಯಕ್ಷ ಆರ್.ನಾರಾಯಣಗೌಡ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ತ್ರೀವೇಣಮ್ಮ.<br /> <br /> ಉಪಾಧ್ಯಕ್ಷ ಎಂ.ಎಸ್.ಶ್ರೀನಿವಾಸರೆಡ್ಡಿ, ಕನ್ನಡಭಟ ವೆಂಕಟಪ್ಪ, ವರ್ತಕರ ಸಂಘದ ಅಧ್ಯಕ್ಷ ಎನ್.ಆರ್.ಸತ್ಯಾ, ವಕೀಲರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಜಯಪ್ಪ, ನಾಗರಾಜ್. ಎಸ್.ಎನ್.ರಾಮಕೃಷ್ಣೇಗೌಡ, ಕುಮಾರಾಚಾರಿ ಮಾತನಾಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>