ರೈತ ಸಂಘಟನೆಗಳ ರಾಷ್ಟ್ರೀಯ ಸಂಚಾಲಕರಾಗಿ ಪುಟ್ಟಣ್ಣಯ್ಯ

ಚಾಮರಾಜನಗರ: ರೈತ ಸಂಘಟನೆಗಳ ರಾಷ್ಟ್ರೀಯ ಸಮನ್ವಯ ಸಮಿತಿಯ ಸಂಚಾಲಕರನ್ನಾಗಿ ರಾಜ್ಯ ರೈತ ಸಂಘದ ವರಿಷ್ಠ, ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಅವರನ್ನು ನೇಮಕ ಮಾಡಲಾಗಿದೆ.ತಾಲ್ಲೂಕಿನ ಹೊಂಡರಬಾಳು ಸಮೀಪದ ‘ಅಮೃತಭೂಮಿ’ಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.
ರೈತರು ಬೆಳೆದ ಫಸಲಿಗೆ ನ್ಯಾಯಯುತ ಬೆಲೆ ಪಡೆಯುವ ಸಂಬಂಧ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಹೊಸ ಐಭೂಸ್ವಾಧೀನ ಕಾಯ್ದೆ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಿ ಹೋರಾಟ ಮಾಡಬೇಕು ಎಂದು ನಿರ್ಧರಿಸಲಾಯಿತು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರಕಟಣೆ ತಿಳಿಸಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.