<p><strong>ಅಜ್ಮೀರ್(ಐಎಎನ್ಎಸ್): </strong>ರಾಜಸ್ತಾನ ಮಾರ್ಗವಾಗಿ ಇಲ್ಲಿಗೆ ಬರುತ್ತಿದ್ದ ಜೋಧಾಪುರ-ರಟ್ಲಮ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿ ತೀವ್ರ ಆತಂಕಕ್ಕೆ ಕಾರಣವಾದ ಘಟನೆ ಸೋಮವಾರ ಇಲ್ಲಿ ನಡೆದಿದೆ. <br /> <br /> ಮಧ್ಯಾಹ್ನದ ವೇಳೆಗೆ ಇಲ್ಲಿಗೆ ಬರಲಿರುವ ಜೋಧಾಪುರ-ರಟ್ಲಮ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿ ತಿಳಿದ ಪೊಲೀಸರು ಇಲ್ಲಿಂದ 40 ಕಿ.ಮಿ.ದೂರದ ಕಾರ್ವ ನಿಲ್ದಾಣದಲ್ಲಿ ಆ ರೈಲನ್ನು ನಿಲ್ಲಿಸಿದರು. ನಂತರ ಪ್ರಯಾಣಿಕರೆಲ್ಲರನ್ನು ತೆರವುಗೊಳಿಸಿ ರೈಲಿನ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದವರು ಅವರೊಂದಿಗಿದ್ದರು. </p>.<p>ಈ ಸಂಬಂಧವಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ಅವನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೂ ಬಾಂಬ್ ಸಿಕ್ಕಿತೆ? ಅಥವಾ ಅದು ಹುಸಿ ಬೆದರಿಕೆಯೆ? ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ.<br /> <br /> ರಾಷ್ಟ್ರಪತಿ ಪ್ರತಿಭಾ ಪಾಟೇಲ್ ಅವರು ಸೋಮವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಂದೋಬಸ್ತ ವ್ಯವಸ್ಥೆಮಾಡಲಾಗಿತ್ತು. ರಾಷ್ಟ್ರಪತಿ ಆಗಮನದ ದಿನದಂದೇ ರೈಲಿನಲ್ಲಿ ಬಾಂಬ್ ಇದೆ ಎಂಬ ಕರೆ ಆತಂಕಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಮೀರ್(ಐಎಎನ್ಎಸ್): </strong>ರಾಜಸ್ತಾನ ಮಾರ್ಗವಾಗಿ ಇಲ್ಲಿಗೆ ಬರುತ್ತಿದ್ದ ಜೋಧಾಪುರ-ರಟ್ಲಮ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿ ತೀವ್ರ ಆತಂಕಕ್ಕೆ ಕಾರಣವಾದ ಘಟನೆ ಸೋಮವಾರ ಇಲ್ಲಿ ನಡೆದಿದೆ. <br /> <br /> ಮಧ್ಯಾಹ್ನದ ವೇಳೆಗೆ ಇಲ್ಲಿಗೆ ಬರಲಿರುವ ಜೋಧಾಪುರ-ರಟ್ಲಮ್ ಎಕ್ಸ್ಪ್ರೆಸ್ ರೈಲಿನಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಮಾಹಿತಿ ತಿಳಿದ ಪೊಲೀಸರು ಇಲ್ಲಿಂದ 40 ಕಿ.ಮಿ.ದೂರದ ಕಾರ್ವ ನಿಲ್ದಾಣದಲ್ಲಿ ಆ ರೈಲನ್ನು ನಿಲ್ಲಿಸಿದರು. ನಂತರ ಪ್ರಯಾಣಿಕರೆಲ್ಲರನ್ನು ತೆರವುಗೊಳಿಸಿ ರೈಲಿನ ತಪಾಸಣೆ ನಡೆಸಿದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದವರು ಅವರೊಂದಿಗಿದ್ದರು. </p>.<p>ಈ ಸಂಬಂಧವಾಗಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಪೊಲೀಸರು ಅವನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆದರೂ ಬಾಂಬ್ ಸಿಕ್ಕಿತೆ? ಅಥವಾ ಅದು ಹುಸಿ ಬೆದರಿಕೆಯೆ? ಎಂಬುದನ್ನು ಅವರು ಸ್ಪಷ್ಟಪಡಿಸಿಲ್ಲ.<br /> <br /> ರಾಷ್ಟ್ರಪತಿ ಪ್ರತಿಭಾ ಪಾಟೇಲ್ ಅವರು ಸೋಮವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಂದೋಬಸ್ತ ವ್ಯವಸ್ಥೆಮಾಡಲಾಗಿತ್ತು. ರಾಷ್ಟ್ರಪತಿ ಆಗಮನದ ದಿನದಂದೇ ರೈಲಿನಲ್ಲಿ ಬಾಂಬ್ ಇದೆ ಎಂಬ ಕರೆ ಆತಂಕಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>