<p><strong>ಮುಂಬೈ (ಐಎಎನ್ಎಸ್): </strong>ಸ್ಥಳೀಯ ರೈಲಿನಲ್ಲಿ ಅತಿಯಾದ ಜನದಟ್ಟಣೆಯಿಂದಾಗಿ ಮೂವರು ಪ್ರಯಾಣಿಕರು ಬಿದ್ದು ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.<br /> <br /> ಕುರ್ಲಾ- ವಿದ್ಯಾವಿಹಾರ್ ನಿಲ್ದಾಣಗಳ ನಡುವಿನ ಸಿಗ್ನಲ್ ನಿಯಂತ್ರಣ ಕೊಠಡಿಯಲ್ಲಿ ಮಂಗಳವಾರ ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ನಗರದಲ್ಲಿ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಎರಡನೇ ದಿನವಾದ ಗುರುವಾರವೂ ಇದೇ ಸ್ಥಿತಿ ಮುಂದುವರಿದಿತ್ತು. ಈ ನಡುವೆಯೇ, ವಿಳಂಬವಾಗಿ ಸಂಚರಿಸುತ್ತಿದ್ದ ರೈಲುಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿಕೊಂಡೇ ಪ್ರಯಾಣಿಸುತ್ತಿದ್ದರು.<br /> <br /> `ಕೇಂದ್ರ ರೈಲ್ವೆ ಮಾರ್ಗದಲ್ಲಿರುವ ಭಾಂಡುಪ್ ಹಾಗೂ ನಹುರ್ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದಾಗ ಹೊರಭಾಗದಲ್ಲಿ ಕಿಟಕಿಯನ್ನು ಆಧಾರವಾಗಿ ಹಿಡಿದು ನಿಂತುಕೊಂಡಿದ್ದ ಇಬ್ಬರಿಗೆ ಹಳಿಗಳ ಬದಿಯಲ್ಲಿದ್ದ ಕಬ್ಬಿಣದ ಕಂಬ ಡಿಕ್ಕಿ ಹೊಡೆಯಿತು. ಆಗ ಅವರು ಕೆಳಗೆ ಬಿದ್ದು ಸಾವಿಗೀಡಾದರು~ ಎಂದು ಕೇಂದ್ರ ರೈಲ್ವೆ ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಐಎಎನ್ಎಸ್): </strong>ಸ್ಥಳೀಯ ರೈಲಿನಲ್ಲಿ ಅತಿಯಾದ ಜನದಟ್ಟಣೆಯಿಂದಾಗಿ ಮೂವರು ಪ್ರಯಾಣಿಕರು ಬಿದ್ದು ಮೃತಪಟ್ಟು, 15 ಮಂದಿ ಗಾಯಗೊಂಡ ಘಟನೆ ಗುರುವಾರ ನಡೆದಿದೆ.<br /> <br /> ಕುರ್ಲಾ- ವಿದ್ಯಾವಿಹಾರ್ ನಿಲ್ದಾಣಗಳ ನಡುವಿನ ಸಿಗ್ನಲ್ ನಿಯಂತ್ರಣ ಕೊಠಡಿಯಲ್ಲಿ ಮಂಗಳವಾರ ಮಧ್ಯರಾತ್ರಿ ಬೆಂಕಿ ಹೊತ್ತಿಕೊಂಡು ನಗರದಲ್ಲಿ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಎರಡನೇ ದಿನವಾದ ಗುರುವಾರವೂ ಇದೇ ಸ್ಥಿತಿ ಮುಂದುವರಿದಿತ್ತು. ಈ ನಡುವೆಯೇ, ವಿಳಂಬವಾಗಿ ಸಂಚರಿಸುತ್ತಿದ್ದ ರೈಲುಗಳಲ್ಲಿ ಪ್ರಯಾಣಿಕರು ಕಿಕ್ಕಿರಿದು ತುಂಬಿಕೊಂಡೇ ಪ್ರಯಾಣಿಸುತ್ತಿದ್ದರು.<br /> <br /> `ಕೇಂದ್ರ ರೈಲ್ವೆ ಮಾರ್ಗದಲ್ಲಿರುವ ಭಾಂಡುಪ್ ಹಾಗೂ ನಹುರ್ ನಿಲ್ದಾಣಗಳ ನಡುವೆ ರೈಲು ಸಂಚರಿಸುತ್ತಿದ್ದಾಗ ಹೊರಭಾಗದಲ್ಲಿ ಕಿಟಕಿಯನ್ನು ಆಧಾರವಾಗಿ ಹಿಡಿದು ನಿಂತುಕೊಂಡಿದ್ದ ಇಬ್ಬರಿಗೆ ಹಳಿಗಳ ಬದಿಯಲ್ಲಿದ್ದ ಕಬ್ಬಿಣದ ಕಂಬ ಡಿಕ್ಕಿ ಹೊಡೆಯಿತು. ಆಗ ಅವರು ಕೆಳಗೆ ಬಿದ್ದು ಸಾವಿಗೀಡಾದರು~ ಎಂದು ಕೇಂದ್ರ ರೈಲ್ವೆ ಅಧಿಕಾರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>