<p><strong>ಬೆಂಗಳೂರು: </strong>ಚಲಿಸುವ ರೈಲುಗಳ ಮೇಲೆ ಕಲ್ಲು ಎಸೆಯದಂತೆ ಅರಿವು ಮೂಡಿಸುವ ಸಲುವಾಗಿ ನೈರುತ್ಯ ವಿಭಾಗದ ರೈಲ್ವೆ ಅಧಿಕಾರಿಗಳು ನಗರದಲ್ಲಿ ಶನಿವಾರ ವಿಶೇಷ ಅಭಿಯಾನ ನಡೆಸಿದರು.<br /> <br /> ‘ಬೆಂಗಳೂರು– ಕೆಂಗೇರಿ ಮಾರ್ಗದಲ್ಲಿ ಚಲಿಸುವ ರೈಲುಗಳ ಮೇಲೆ ಕಲ್ಲು ಎಸೆಯುವ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಆ ಭಾಗದ ಜನರಲ್ಲಿ ಅರಿವು ಮೂಡಿಸಲು ಅಭಿಯಾನವನ್ನು ನಡೆಸಲಾಯಿತು. ಸ್ಥಳೀಯರು ಹಾಗೂ ಮಕ್ಕಳಿಗೆ ಕರ ಪತ್ರ ಹಂಚಿ ಜಾಗೃತಿ ಮೂಡಿಸಲಾಯಿತು’ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ‘ಈ ವರ್ಷ ಬೆಂಗಳೂರು–ಮೈಸೂರು ಮಾರ್ಗದಲ್ಲಿ ಚಲಿಸುವ ರೈಲಿನ ಮೇಲೆ ಕಲ್ಲು ಎಸೆದ ಸಂಬಂಧ ಆರು ಪ್ರಕರಣಗಳು ದಾಖಲಾಗಿವೆ. ಈ ಪ್ರತ್ಯೇಕ ಪ್ರಕರಣಗಳಲ್ಲಿ ಲೋಕೊ ಪೈಲಟ್ಗಳು ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರು ಅಥವಾ ಮಕ್ಕಳು ಲೋಕೊ ಪೈಲೆಟ್ ಮೇಲೆ ಎಸೆಯುವ ಒಂದು ಕಲ್ಲಿನಿಂದ ಸಾವಿರಾರು ಪ್ರಯಾಣಿಕರು ಸಾವನ್ನಪ್ಪುವ ಸನ್ನಿವೇಶ ನಿರ್ಮಾಣವಾಗಬಹುದು ಎಂಬ ವಿಷಯವನ್ನು ಇದೇ ವೇಳೆ ತಿಳಿಸಿದರು.<br /> <br /> ಇದನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು’ ಎಂದು ಅಧಿಕಾರಿಗಳು ಹೇಳಿದರು.<br /> <br /> ಶಾಸಕರಾದ ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ, ರೈಲ್ವೆ ಸುರಕ್ಷತಾ ಪಡೆಯ (ಆರ್ಪಿಎಫ್) ವಿಭಾಗೀಯ ಭದ್ರತಾ ಆಯುಕ್ತ ಲೂಯಿಸ್ ಅಮೂಥನ್, ವಿಭಾಗೀಯ ಭದ್ರತಾಧಿಕಾರಿ ಪ್ರವೀಣ್ ಪಾಂಡೆ, ಎಸ್ಪಿ ಎಸ್.ಎನ್.ಸಿದ್ದರಾಮಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಚಲಿಸುವ ರೈಲುಗಳ ಮೇಲೆ ಕಲ್ಲು ಎಸೆಯದಂತೆ ಅರಿವು ಮೂಡಿಸುವ ಸಲುವಾಗಿ ನೈರುತ್ಯ ವಿಭಾಗದ ರೈಲ್ವೆ ಅಧಿಕಾರಿಗಳು ನಗರದಲ್ಲಿ ಶನಿವಾರ ವಿಶೇಷ ಅಭಿಯಾನ ನಡೆಸಿದರು.<br /> <br /> ‘ಬೆಂಗಳೂರು– ಕೆಂಗೇರಿ ಮಾರ್ಗದಲ್ಲಿ ಚಲಿಸುವ ರೈಲುಗಳ ಮೇಲೆ ಕಲ್ಲು ಎಸೆಯುವ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಆ ಭಾಗದ ಜನರಲ್ಲಿ ಅರಿವು ಮೂಡಿಸಲು ಅಭಿಯಾನವನ್ನು ನಡೆಸಲಾಯಿತು. ಸ್ಥಳೀಯರು ಹಾಗೂ ಮಕ್ಕಳಿಗೆ ಕರ ಪತ್ರ ಹಂಚಿ ಜಾಗೃತಿ ಮೂಡಿಸಲಾಯಿತು’ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ‘ಈ ವರ್ಷ ಬೆಂಗಳೂರು–ಮೈಸೂರು ಮಾರ್ಗದಲ್ಲಿ ಚಲಿಸುವ ರೈಲಿನ ಮೇಲೆ ಕಲ್ಲು ಎಸೆದ ಸಂಬಂಧ ಆರು ಪ್ರಕರಣಗಳು ದಾಖಲಾಗಿವೆ. ಈ ಪ್ರತ್ಯೇಕ ಪ್ರಕರಣಗಳಲ್ಲಿ ಲೋಕೊ ಪೈಲಟ್ಗಳು ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯರು ಅಥವಾ ಮಕ್ಕಳು ಲೋಕೊ ಪೈಲೆಟ್ ಮೇಲೆ ಎಸೆಯುವ ಒಂದು ಕಲ್ಲಿನಿಂದ ಸಾವಿರಾರು ಪ್ರಯಾಣಿಕರು ಸಾವನ್ನಪ್ಪುವ ಸನ್ನಿವೇಶ ನಿರ್ಮಾಣವಾಗಬಹುದು ಎಂಬ ವಿಷಯವನ್ನು ಇದೇ ವೇಳೆ ತಿಳಿಸಿದರು.<br /> <br /> ಇದನ್ನು ಗಂಭೀರವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುವುದು’ ಎಂದು ಅಧಿಕಾರಿಗಳು ಹೇಳಿದರು.<br /> <br /> ಶಾಸಕರಾದ ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ, ರೈಲ್ವೆ ಸುರಕ್ಷತಾ ಪಡೆಯ (ಆರ್ಪಿಎಫ್) ವಿಭಾಗೀಯ ಭದ್ರತಾ ಆಯುಕ್ತ ಲೂಯಿಸ್ ಅಮೂಥನ್, ವಿಭಾಗೀಯ ಭದ್ರತಾಧಿಕಾರಿ ಪ್ರವೀಣ್ ಪಾಂಡೆ, ಎಸ್ಪಿ ಎಸ್.ಎನ್.ಸಿದ್ದರಾಮಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಅಭಿಯಾನದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>