<p><strong>ಚೆನ್ನೈ : </strong>ಇಲ್ಲಿಗೆ 75 ಕಿಮೀ ದೂರದ ಅರಕ್ಕೋಣಂನಲ್ಲಿ ಮಂಗಳವಾರ ರಾತ್ರಿ ಎರಡು ಪ್ರಯಾಣಿಕರ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟು, ಸುಮಾರು 85ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. <br /> <br /> ಚಿಟ್ಟೇರಿ ರೈಲು ನಿಲ್ದಾಣದ ಬಳಿ ರಾತ್ರಿ 9.30ರ ವೇಳೆಯಲ್ಲಿ ಸಿಗ್ನಲ್ಗಾಗಿ ಕಾಯುತ್ತಿದ್ದ ಕಾಟ್ಪಾಡಿ ಪ್ರಯಾಣಿಕರ ರೈಲಿಗೆ ಚೆನ್ನೈ ಬೀಚ್ ಮತ್ತು ವೆಲ್ಲೂರು ನಡುವೆ ಸಂಚರಿಸುವ ವಿದ್ಯುತ್ ಚಾಲಿತ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಅಪಘಾತ ಸ್ಥಳದಲ್ಲಿದ್ದ ಪೊಲೀಸರು `ಪ್ರಜಾವಾಣಿ~ಗೆ ದೂರವಾಣಿ ಮೂಲಕ ಹೇಳಿದ್ದಾರೆ.<br /> <br /> ಡಿಕ್ಕಿಯಿಂದಾಗಿ ನಿಂತಿದ್ದ ರೈಲಿನ ಒಂದು ಬೋಗಿ ಮತ್ತು ಡಿಕ್ಕಿ ಹೊಡೆದ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ಇದರಡಿ ಕೆಲವು ಪ್ರಯಾಣಿಕರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಆದರೆ ಈ ಪ್ರದೇಶದಲ್ಲಿನ ಕಗ್ಗತ್ತಲು ಮತ್ತು ಭಾರಿ ಮಳೆಯಿಂದ ಪರಿಹಾರ ಕಾರ್ಯಕ್ಕೆ ತೊಂದರೆ ಆಗಿತ್ತು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.<br /> <br /> ಪರಿಹಾರ ಸಾಮಗ್ರಿ ಮತ್ತು ವೈದ್ಯಕೀಯ ಸಿಬ್ಬಂದಿಯೊಂದಿಗೆ ಎರಡು ರೈಲುಗಳು ಇಲ್ಲಿಂದ ಅಪಘಾತ ಸ್ಥಳಕ್ಕೆ ತೆರಳಿವೆ. ಗಾಯಗೊಂಡ ವರನ್ನು ಅರಕ್ಕೋಣಂ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ಹಳಿ ತಪ್ಪಿದ ಬೋಗಿಗಳಡಿ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕ ಪ್ರಯಾಣಿಕರು ಸಿಲುಕಿದ್ದಾರೆಂದು ನಂಬಲಾಗಿದೆ. ಹಿಂದಿನಿಂದ ಬಂದ ರೈಲು, ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆಯಲು ಏನು ಕಾರಣ ಎಂಬ ಬಗ್ಗೆ ಇನ್ನೂ ಗೊತ್ತಾಗಿಲ್ಲ.<br /> <br /> ಈ ಅಪಘಾತದಿಂದಾಗಿ ರಾತ್ರಿ ಚೆನ್ನೈನಿಂದ ಹೊರಡಬೇಕಿದ್ದ ಪಶ್ಚಿಮ ಕರಾವಳಿ ಮತ್ತು ಬೆಂಗಳೂರು ಮೂಲದ ರೈಲುಗಳ ಸಂಚಾರ ವ್ಯತ್ಯಯವಾಗಿದೆ. ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ : </strong>ಇಲ್ಲಿಗೆ 75 ಕಿಮೀ ದೂರದ ಅರಕ್ಕೋಣಂನಲ್ಲಿ ಮಂಗಳವಾರ ರಾತ್ರಿ ಎರಡು ಪ್ರಯಾಣಿಕರ ರೈಲುಗಳು ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟು, ಸುಮಾರು 85ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. <br /> <br /> ಚಿಟ್ಟೇರಿ ರೈಲು ನಿಲ್ದಾಣದ ಬಳಿ ರಾತ್ರಿ 9.30ರ ವೇಳೆಯಲ್ಲಿ ಸಿಗ್ನಲ್ಗಾಗಿ ಕಾಯುತ್ತಿದ್ದ ಕಾಟ್ಪಾಡಿ ಪ್ರಯಾಣಿಕರ ರೈಲಿಗೆ ಚೆನ್ನೈ ಬೀಚ್ ಮತ್ತು ವೆಲ್ಲೂರು ನಡುವೆ ಸಂಚರಿಸುವ ವಿದ್ಯುತ್ ಚಾಲಿತ ರೈಲು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಅಪಘಾತ ಸ್ಥಳದಲ್ಲಿದ್ದ ಪೊಲೀಸರು `ಪ್ರಜಾವಾಣಿ~ಗೆ ದೂರವಾಣಿ ಮೂಲಕ ಹೇಳಿದ್ದಾರೆ.<br /> <br /> ಡಿಕ್ಕಿಯಿಂದಾಗಿ ನಿಂತಿದ್ದ ರೈಲಿನ ಒಂದು ಬೋಗಿ ಮತ್ತು ಡಿಕ್ಕಿ ಹೊಡೆದ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ. ಇದರಡಿ ಕೆಲವು ಪ್ರಯಾಣಿಕರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯ ಕೈಗೊಳ್ಳಲಾಗಿದೆ. ಆದರೆ ಈ ಪ್ರದೇಶದಲ್ಲಿನ ಕಗ್ಗತ್ತಲು ಮತ್ತು ಭಾರಿ ಮಳೆಯಿಂದ ಪರಿಹಾರ ಕಾರ್ಯಕ್ಕೆ ತೊಂದರೆ ಆಗಿತ್ತು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.<br /> <br /> ಪರಿಹಾರ ಸಾಮಗ್ರಿ ಮತ್ತು ವೈದ್ಯಕೀಯ ಸಿಬ್ಬಂದಿಯೊಂದಿಗೆ ಎರಡು ರೈಲುಗಳು ಇಲ್ಲಿಂದ ಅಪಘಾತ ಸ್ಥಳಕ್ಕೆ ತೆರಳಿವೆ. ಗಾಯಗೊಂಡ ವರನ್ನು ಅರಕ್ಕೋಣಂ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.<br /> <br /> ಹಳಿ ತಪ್ಪಿದ ಬೋಗಿಗಳಡಿ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕ ಪ್ರಯಾಣಿಕರು ಸಿಲುಕಿದ್ದಾರೆಂದು ನಂಬಲಾಗಿದೆ. ಹಿಂದಿನಿಂದ ಬಂದ ರೈಲು, ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆಯಲು ಏನು ಕಾರಣ ಎಂಬ ಬಗ್ಗೆ ಇನ್ನೂ ಗೊತ್ತಾಗಿಲ್ಲ.<br /> <br /> ಈ ಅಪಘಾತದಿಂದಾಗಿ ರಾತ್ರಿ ಚೆನ್ನೈನಿಂದ ಹೊರಡಬೇಕಿದ್ದ ಪಶ್ಚಿಮ ಕರಾವಳಿ ಮತ್ತು ಬೆಂಗಳೂರು ಮೂಲದ ರೈಲುಗಳ ಸಂಚಾರ ವ್ಯತ್ಯಯವಾಗಿದೆ. ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>