<p><strong>ಚೆನ್ನೈ (ಐಎಎನ್ಎಸ್): </strong>ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅರಕೋಣಂನಲ್ಲಿ ಮಂಗಳವಾರ ರಾತ್ರಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಸುಮಾರು 15 ಮಂದಿ ಸತ್ತಿರುವ ಮತ್ತು ಹಲವರು ಗಾಯಗೊಂಡಿರುವ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ರಾತ್ರಿ 9.30ರ ವೇಳೆಯಲ್ಲಿ ಸಿಗ್ನಲ್ಗಾಗಿ ಕಾಯುತ್ತಿದ್ದ ಕಟ್ಪಾಡಿ ಪ್ರಯಾಣಿಕರ ರೈಲಿಗೆ ಚೆನ್ನೈ ಬೀಚ್ ವೆಲ್ಲೂರು ರೈಲು ಡಿಕ್ಕಿ ಹೊಡೆದಿದೆ.<br /> </p>.<p><strong>ಭ್ರಷ್ಟಾಚಾರ ತಡೆಗೆ ಹೊಸ ಇಲಾಖೆ</strong></p>.<p><strong>ಡೆಹ್ರಾಡೂನ್ (ಪಿಟಿಐ):</strong> ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಭ್ರಷ್ಟಾಚಾರ ತಡೆಗೆ ಹೊಸದೊಂದು ಇಲಾಖೆ ರಚಿಸುವುದಾಗಿ ಉತ್ತರಾಖಂಡದ ನೂತನ ಮುಖ್ಯಮಂತ್ರಿ ಬಿ.ಸಿ. ಖಂಡೂರಿ ಮಂಗಳವಾರ ಘೋಷಿಸಿದ್ದಾರೆ.</p>.<p><strong>ಗಡ್ಕರಿಗೆ ಶಸ್ತ್ರ ಚಿಕಿತ್ಸೆ</strong></p>.<p><strong>ನವದೆಹಲಿ (ಪಿಟಿಐ): </strong>ಮಧುಮೇಹ ಕಾಯಿಲೆ (ಮಾದರಿ-2) ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಜಠರದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.</p>.<p><strong>ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್</strong></p>.<p><strong>ನವದೆಹಲಿ (ಪಿಟಿಐ):</strong> ದಸರಾ- ದೀಪಾವಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ಸಿ ಮತ್ತು ಡಿ ಗುಂಪಿನ ನೌಕರರು, ಸೇನೆ, ಅರೆಸೇನಾ ಪಡೆಗಳ ಸಿಬ್ಬಂದಿಗೆ ರೂ 3,500 ಮಧ್ಯಂತರ ಬೋನಸ್ ಅನ್ನು ಸರ್ಕಾರ ಮಂಗಳವಾರ ಪ್ರಕಟಿಸಿದೆ.</p>.<p><strong>ಮತ್ತೆ ಪ್ರತಿಭಟನೆ- `ಜಾಟ್~ ಎಚ್ಚರಿಕೆ</strong></p>.<p><strong>ಹಿಸ್ಸಾರ್ (ಪಿಟಿಐ): </strong>ಮುಂದಿನ ಫೆಬ್ರುವರಿ ಒಳಗೆ ಒಬಿಸಿ ಕೋಟಾದಡಿ ಸರ್ಕಾರಿ ಉದ್ಯೋಗದಲ್ಲಿ ಜಾಟ್ ಸಮುದಾಯದವರಿಗೆ ಮೀಸಲಾತಿ ನೀಡದಿದ್ದರೆ ಮತ್ತೆ ಪ್ರತಿಭಟನೆಯನ್ನು ಆರಂಭಿಸುವುದಾಗಿ ಹರಿಯಾಣ ಸರ್ಕಾರಕ್ಕೆ ಜಾಟ್ ಸಮುದಾಯ ಮಂಗಳವಾರ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಐಎಎನ್ಎಸ್): </strong>ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಅರಕೋಣಂನಲ್ಲಿ ಮಂಗಳವಾರ ರಾತ್ರಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಸುಮಾರು 15 ಮಂದಿ ಸತ್ತಿರುವ ಮತ್ತು ಹಲವರು ಗಾಯಗೊಂಡಿರುವ ಶಂಕೆ ಇದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ರಾತ್ರಿ 9.30ರ ವೇಳೆಯಲ್ಲಿ ಸಿಗ್ನಲ್ಗಾಗಿ ಕಾಯುತ್ತಿದ್ದ ಕಟ್ಪಾಡಿ ಪ್ರಯಾಣಿಕರ ರೈಲಿಗೆ ಚೆನ್ನೈ ಬೀಚ್ ವೆಲ್ಲೂರು ರೈಲು ಡಿಕ್ಕಿ ಹೊಡೆದಿದೆ.<br /> </p>.<p><strong>ಭ್ರಷ್ಟಾಚಾರ ತಡೆಗೆ ಹೊಸ ಇಲಾಖೆ</strong></p>.<p><strong>ಡೆಹ್ರಾಡೂನ್ (ಪಿಟಿಐ):</strong> ಉತ್ತಮ ಆಡಳಿತ ನೀಡುವ ನಿಟ್ಟಿನಲ್ಲಿ ಭ್ರಷ್ಟಾಚಾರ ತಡೆಗೆ ಹೊಸದೊಂದು ಇಲಾಖೆ ರಚಿಸುವುದಾಗಿ ಉತ್ತರಾಖಂಡದ ನೂತನ ಮುಖ್ಯಮಂತ್ರಿ ಬಿ.ಸಿ. ಖಂಡೂರಿ ಮಂಗಳವಾರ ಘೋಷಿಸಿದ್ದಾರೆ.</p>.<p><strong>ಗಡ್ಕರಿಗೆ ಶಸ್ತ್ರ ಚಿಕಿತ್ಸೆ</strong></p>.<p><strong>ನವದೆಹಲಿ (ಪಿಟಿಐ): </strong>ಮಧುಮೇಹ ಕಾಯಿಲೆ (ಮಾದರಿ-2) ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಮುಂಬೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಜಠರದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.</p>.<p><strong>ಕೇಂದ್ರ ಸರ್ಕಾರಿ ನೌಕರರಿಗೆ ಬೋನಸ್</strong></p>.<p><strong>ನವದೆಹಲಿ (ಪಿಟಿಐ):</strong> ದಸರಾ- ದೀಪಾವಳಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಿ ಸಿ ಮತ್ತು ಡಿ ಗುಂಪಿನ ನೌಕರರು, ಸೇನೆ, ಅರೆಸೇನಾ ಪಡೆಗಳ ಸಿಬ್ಬಂದಿಗೆ ರೂ 3,500 ಮಧ್ಯಂತರ ಬೋನಸ್ ಅನ್ನು ಸರ್ಕಾರ ಮಂಗಳವಾರ ಪ್ರಕಟಿಸಿದೆ.</p>.<p><strong>ಮತ್ತೆ ಪ್ರತಿಭಟನೆ- `ಜಾಟ್~ ಎಚ್ಚರಿಕೆ</strong></p>.<p><strong>ಹಿಸ್ಸಾರ್ (ಪಿಟಿಐ): </strong>ಮುಂದಿನ ಫೆಬ್ರುವರಿ ಒಳಗೆ ಒಬಿಸಿ ಕೋಟಾದಡಿ ಸರ್ಕಾರಿ ಉದ್ಯೋಗದಲ್ಲಿ ಜಾಟ್ ಸಮುದಾಯದವರಿಗೆ ಮೀಸಲಾತಿ ನೀಡದಿದ್ದರೆ ಮತ್ತೆ ಪ್ರತಿಭಟನೆಯನ್ನು ಆರಂಭಿಸುವುದಾಗಿ ಹರಿಯಾಣ ಸರ್ಕಾರಕ್ಕೆ ಜಾಟ್ ಸಮುದಾಯ ಮಂಗಳವಾರ ಎಚ್ಚರಿಕೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>