<p><strong>ಚಿತ್ರದುರ್ಗ:</strong> ಮಧ್ಯಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯಾದ ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ರೈಲ್ವೆ ಹೋರಾಟ ಸಮಿತಿಯ ಮೂರು ಜಿಲ್ಲೆಗಳ ಮುಖಂಡರು ಗುರುವಾರ ಸಂಸದ ಜನಾರ್ದನ ಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.<br /> <br /> ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಮಾತನಾಡಿ, ನೇರ ರೈಲ್ವೆ ಮಾರ್ಗ ಯೋಜನೆಗೆ ತ್ವರಿತಗತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.<br /> <br /> ಈ ಯೋಜನೆ ಅನುಷ್ಠಾನವಾದರೆ ಈ ಭಾಗದ ಅಭಿವೃದ್ಧಿಗೂ ಅನುಕೂಲವಾಗುತ್ತದೆ. ಬಡವರಿಗೆ, ಕೃಷಿಕರಿಗೆ ಕೈಗೆಟಕುವ ದರದಲ್ಲಿ ಪ್ರಯಾಣಿಸಲು ಮತ್ತು ಕೃಷಿ ಉತ್ಪನ್ನಗಳು ಸಾಗಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.<br /> <br /> ಸಂಸದ ಜನಾರ್ದನಸ್ವಾಮಿ ಮಾತನಾಡಿ, ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವ ಕಾರಣಕ್ಕೆ ಈ ಯೋಜನೆ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದ್ದು, 913 ಕೋಟಿ ರೂಪಾಯಿಯ ಈ ಯೋಜನೆಯನ್ನು ಹಿಂದಿನ ಬಜೆಟ್ನಲ್ಲಿ ಸೇರಿಸಲಾಗಿದೆ. ಯೋಜನಾ ಆಯೋಗ ಸಹ ಅನುಮೋದನೆ ನೀಡಿದೆ. <br /> <br /> ರೈಲ್ವೆ ಮಂಡಳಿಯೂ ಅನುಮೋದನೆ ನೀಡಿದೆ. ಪ್ರಸ್ತುತ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡುವುದು ಮಾತ್ರ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು.<br /> <br /> ಎರಡು ವರ್ಷಗಳಲ್ಲಿ ಯೋಜನೆ ಮುಕ್ತಾಯವಾಗಬೇಕು ಎನ್ನುವುದು ನಮ್ಮ ಬಯಕೆ. ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಆರಂಭವಾಗುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯ ಸರ್ಕಾರ 502 ಕೋಟಿ ರೂ ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.<br /> <br /> ಮುಖಂಡರಾದ ಮೀರಾಜುದ್ದೀನ್, ಮುರುಘರಾಜೇಂದ್ರ ಒಡೆಯರ್, ರಮಾ ನಾಗರಾಜ್, ವಾಮದೇವಪ್ಪ, ಪರಮೇಶ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಮಧ್ಯಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆಯಾದ ದಾವಣಗೆರೆ- ಚಿತ್ರದುರ್ಗ- ತುಮಕೂರು ನೇರ ರೈಲ್ವೆ ಮಾರ್ಗ ಯೋಜನೆಯನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸುವ ಕುರಿತು ರೈಲ್ವೆ ಹೋರಾಟ ಸಮಿತಿಯ ಮೂರು ಜಿಲ್ಲೆಗಳ ಮುಖಂಡರು ಗುರುವಾರ ಸಂಸದ ಜನಾರ್ದನ ಸ್ವಾಮಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.<br /> <br /> ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿ. ಪುಟ್ಟಕಾಮಣ್ಣ ಮಾತನಾಡಿ, ನೇರ ರೈಲ್ವೆ ಮಾರ್ಗ ಯೋಜನೆಗೆ ತ್ವರಿತಗತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.<br /> <br /> ಈ ಯೋಜನೆ ಅನುಷ್ಠಾನವಾದರೆ ಈ ಭಾಗದ ಅಭಿವೃದ್ಧಿಗೂ ಅನುಕೂಲವಾಗುತ್ತದೆ. ಬಡವರಿಗೆ, ಕೃಷಿಕರಿಗೆ ಕೈಗೆಟಕುವ ದರದಲ್ಲಿ ಪ್ರಯಾಣಿಸಲು ಮತ್ತು ಕೃಷಿ ಉತ್ಪನ್ನಗಳು ಸಾಗಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.<br /> <br /> ಸಂಸದ ಜನಾರ್ದನಸ್ವಾಮಿ ಮಾತನಾಡಿ, ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವ ಕಾರಣಕ್ಕೆ ಈ ಯೋಜನೆ 40 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದ್ದು, 913 ಕೋಟಿ ರೂಪಾಯಿಯ ಈ ಯೋಜನೆಯನ್ನು ಹಿಂದಿನ ಬಜೆಟ್ನಲ್ಲಿ ಸೇರಿಸಲಾಗಿದೆ. ಯೋಜನಾ ಆಯೋಗ ಸಹ ಅನುಮೋದನೆ ನೀಡಿದೆ. <br /> <br /> ರೈಲ್ವೆ ಮಂಡಳಿಯೂ ಅನುಮೋದನೆ ನೀಡಿದೆ. ಪ್ರಸ್ತುತ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡುವುದು ಮಾತ್ರ ಬಾಕಿ ಉಳಿದಿದೆ ಎಂದು ಮಾಹಿತಿ ನೀಡಿದರು.<br /> <br /> ಎರಡು ವರ್ಷಗಳಲ್ಲಿ ಯೋಜನೆ ಮುಕ್ತಾಯವಾಗಬೇಕು ಎನ್ನುವುದು ನಮ್ಮ ಬಯಕೆ. ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಆರಂಭವಾಗುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯ ಸರ್ಕಾರ 502 ಕೋಟಿ ರೂ ಅನುದಾನ ನೀಡಿದೆ ಎಂದು ಮಾಹಿತಿ ನೀಡಿದರು.<br /> <br /> ಮುಖಂಡರಾದ ಮೀರಾಜುದ್ದೀನ್, ಮುರುಘರಾಜೇಂದ್ರ ಒಡೆಯರ್, ರಮಾ ನಾಗರಾಜ್, ವಾಮದೇವಪ್ಪ, ಪರಮೇಶ್ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>