<p>ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ–ಬೆಂಗಳೂರು ಪ್ಯಾಸೆಂಜರ್ ರೈಲು ಬುಧವಾರ ಸರಿಯಾದ ಸಮಯಕ್ಕೆ ಸಂಚಾರ ಆರಂಭಿಸಲಿಲ್ಲ. ಸಾವಿರಾರು ಮಂದಿ ಪ್ರಯಾಣಿಕರಿಗೆ ತೊಂದರೆಯಾಯಿತು. ಆದರೆ ಏಕೆ ಹೀಗಾಯಿತು? ಎಂಬ ಪ್ರಶ್ನೆಗೆ ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು.<br /> <br /> ಶ್ರೀಕಂಠದತ್ತ ಒಡೆಯರ್ ನಿಧನದ ಹಿನ್ನೆಲೆಯಲ್ಲಿ ರೈಲು ಸಂಚಾರವೂ ಕೂಡ ಸ್ಥಗಿತಗೊಳ್ಳಲಿ ಎಂಬ ಕಾರಣಕ್ಕೆ ಕೆಲವರು ಹೀಗೆ ಮಾಡಿರಬಹುದು ಎಂದು ಒಬ್ಬರು ವ್ಯಕ್ತಪಡಿಸಿದರೆ, ಖಾಸಗಿ ಬಸ್ಗಳ ಸಂಚಾರ ಸ್ಥಗಿತಗೊಂಡಿದ್ದು ಅದರ ಬಿಸಿಯೂ ಜನರಿಗೆ ಗೊತ್ತಾಗಲಿ ಎಂಬ ಕಾರಣಕ್ಕಾಗಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಮತ್ತೊಬ್ಬರು ಹೇಳಿದರು.<br /> <br /> ಇದೆಲ್ಲದಕ್ಕೂ ರೈಲ್ವೆ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕೆಲವರು ಆರೋಪಿಸಿದರು. ಜನರ ಸುಗಮ ಪ್ರಯಾಣಕ್ಕೆ ತೊಂದರೆ ಮಾಡಲಿಯೆಂದೇ ಈ ಕೃತ್ಯ ನಡೆದಿದೆ ಎಂದು ಕೆಲವರು ತಿಳಿಸಿದರು.<br /> <br /> ‘ಚಿಕ್ಕಬಳ್ಳಾಪುರದ ಜನರಲ್ಲದೇ ನಂದಿ, ಆವತಿ, ದೇವನಹಳ್ಳಿ, ಯಲಹಂಕ ಮುಂತಾದ ಪ್ರದೇಶಗಳ ನಿವಾಸಿಗಳು ಭಾರಿ ಸಮಸ್ಯೆ ಎದುರಿಸಿದರು’ ಎಂದು ಚಿಕ್ಕಬಳ್ಳಾಪುರದ ನಿವಾಸಿ ನಾಗೇಶ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಇಡೀ ರೈಲಿಗೆ ಭದ್ರತಾ ವ್ಯವಸ್ಥೆಯಿರುವುದಿಲ್ಲ. ಇದೆಲ್ಲವನ್ನು ಗಮನಿಸಿರುವ ಕೆಲ ಕಿಡಿಗೇಡಿಗಳು ಬೇಕೆಂದೇ ಎಂಜಿನ್ನೊಳಗೆ ಮರಳು, ಜೆಲ್ಲಿಕಲ್ಲು ಪುಡಿ ರೈಲು ಸಂಚಾರ ಸ್ಥಗಿತಗೊಳಿಸಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ–ಬೆಂಗಳೂರು ಪ್ಯಾಸೆಂಜರ್ ರೈಲು ಬುಧವಾರ ಸರಿಯಾದ ಸಮಯಕ್ಕೆ ಸಂಚಾರ ಆರಂಭಿಸಲಿಲ್ಲ. ಸಾವಿರಾರು ಮಂದಿ ಪ್ರಯಾಣಿಕರಿಗೆ ತೊಂದರೆಯಾಯಿತು. ಆದರೆ ಏಕೆ ಹೀಗಾಯಿತು? ಎಂಬ ಪ್ರಶ್ನೆಗೆ ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ, ಅನಿಸಿಕೆ ವ್ಯಕ್ತಪಡಿಸಿದರು.<br /> <br /> ಶ್ರೀಕಂಠದತ್ತ ಒಡೆಯರ್ ನಿಧನದ ಹಿನ್ನೆಲೆಯಲ್ಲಿ ರೈಲು ಸಂಚಾರವೂ ಕೂಡ ಸ್ಥಗಿತಗೊಳ್ಳಲಿ ಎಂಬ ಕಾರಣಕ್ಕೆ ಕೆಲವರು ಹೀಗೆ ಮಾಡಿರಬಹುದು ಎಂದು ಒಬ್ಬರು ವ್ಯಕ್ತಪಡಿಸಿದರೆ, ಖಾಸಗಿ ಬಸ್ಗಳ ಸಂಚಾರ ಸ್ಥಗಿತಗೊಂಡಿದ್ದು ಅದರ ಬಿಸಿಯೂ ಜನರಿಗೆ ಗೊತ್ತಾಗಲಿ ಎಂಬ ಕಾರಣಕ್ಕಾಗಿ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಮತ್ತೊಬ್ಬರು ಹೇಳಿದರು.<br /> <br /> ಇದೆಲ್ಲದಕ್ಕೂ ರೈಲ್ವೆ ಇಲಾಖೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಕೆಲವರು ಆರೋಪಿಸಿದರು. ಜನರ ಸುಗಮ ಪ್ರಯಾಣಕ್ಕೆ ತೊಂದರೆ ಮಾಡಲಿಯೆಂದೇ ಈ ಕೃತ್ಯ ನಡೆದಿದೆ ಎಂದು ಕೆಲವರು ತಿಳಿಸಿದರು.<br /> <br /> ‘ಚಿಕ್ಕಬಳ್ಳಾಪುರದ ಜನರಲ್ಲದೇ ನಂದಿ, ಆವತಿ, ದೇವನಹಳ್ಳಿ, ಯಲಹಂಕ ಮುಂತಾದ ಪ್ರದೇಶಗಳ ನಿವಾಸಿಗಳು ಭಾರಿ ಸಮಸ್ಯೆ ಎದುರಿಸಿದರು’ ಎಂದು ಚಿಕ್ಕಬಳ್ಳಾಪುರದ ನಿವಾಸಿ ನಾಗೇಶ್ಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಇಡೀ ರೈಲಿಗೆ ಭದ್ರತಾ ವ್ಯವಸ್ಥೆಯಿರುವುದಿಲ್ಲ. ಇದೆಲ್ಲವನ್ನು ಗಮನಿಸಿರುವ ಕೆಲ ಕಿಡಿಗೇಡಿಗಳು ಬೇಕೆಂದೇ ಎಂಜಿನ್ನೊಳಗೆ ಮರಳು, ಜೆಲ್ಲಿಕಲ್ಲು ಪುಡಿ ರೈಲು ಸಂಚಾರ ಸ್ಥಗಿತಗೊಳಿಸಿದ್ದಾರೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>