<p>ತಿಪಟೂರು: ಶಿವಮೊಗ್ಗ- ಬೆಂಗಳೂರು ಪ್ಯಾಸೆಂಜರ್ ರೈಲಿನ ಸಂಚಾರ ವೇಳೆ ಬದಲಿಸುವುದನ್ನು ವಿರೋಧಿಸಿ ಪ್ರಯಾಣಿಕರ ವೇದಿಕೆ ನೇತೃತ್ವದಲ್ಲಿ ಜೂ.24ರಂದು ಬೆಳಿಗ್ಗೆ ನಗರ ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸುವುದಾಗಿ ರೈಲ್ವೆ ಸಲಹಾ ಸಮಿತಿ ಸದಸ್ಯ ಮಣಕೀಕೆರೆ ನಾಗರಾಜು ಗುರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಮುಂಜಾನೆ 4ಕ್ಕೆ ಶಿವಮೊಗ್ಗ ಬಿಟ್ಟು ಬೆಳಗ್ಗೆ 11ಕ್ಕೆ ಬೆಂಗಳೂರು ತಲುಪುತ್ತಿದ್ದ ಶಿವಮೊಗ್ಗ ಪ್ಯಾಸೆಂಜರ್ ರೈಲು ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ನೌಕರರಿಗೆ, ಸಾರ್ವಜನಿಕರಿಗೆ ಅನುಕೂಲವಾಗಿತ್ತು. ಈ ರೈಲಿನ ಸಂಚಾರ ವೇಳೆಯನ್ನು ಜು.1ರಿಂದ ಬದಲಿಸುವುದಾಗಿ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ಇದರ ಪ್ರಕಾರ ಬೆಳಗ್ಗೆ 8ಕ್ಕೆ ಶಿವಮೊಗ್ಗ ಬಿಡುವ ರೈಲು ಮಧ್ಯಾಹ್ನ 2ಕ್ಕೆ ಬೆಂಗಳೂರು ತಲುಪುತ್ತದೆ. <br /> <br /> ಆ ಪ್ರಕಾರ ಅದು ಇಲ್ಲಿನ ನಿಲ್ದಾಣಕ್ಕೆ 11.30ಕ್ಕೆ ಬರುವುದರಿಂದ ಪ್ರಯೋಜನ ತಪ್ಪುತ್ತದೆ. ಆ ರೈಲನ್ನೇ ಅವಲಂಬಿಸಿದ್ದ ಕರಡಿ, ಅರಳಗುಪ್ಪೆ, ಬನಶಂಕರಿ ಮತ್ತಿತರ ಹಳ್ಳಿ ಸೇರಿದಂತೆ ಸಾವಿರಾರು ಜನರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಮೊದಲಿನ ವೇಳೆಯಲ್ಲೇ ರೈಲು ಸಂಚಾರ ಮುಂದುವರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.<br /> <br /> ರೈಲ್ವೆ ಸಲಹಾ ಸಮಿತಿ ಸದಸ್ಯನಾಗಿ ಈಗಾಗಲೇ ರೈಲ್ವೆ ಸಚಿವರು, ಸಂಸದರು ಮತ್ತು ರೈಲ್ವೆ ಇಲಾಖೆಗೆ ಪತ್ರ ಬರೆದು ವೇಳೆ ಬದಲಿಸದಂತೆ ಕೋರಿದ್ದೇನೆ. ಹುಬ್ಬಳ್ಳಿ ಕಚೇರಿಯ ಈ ನಿರ್ಧಾರದ ಬಗ್ಗೆ ತಮಗೇನು ಗೊತ್ತಿಲ್ಲವೆಂದು ಮೈಸೂರು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರು.<br /> <br /> ರೈಲ್ವೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಶಿವಪ್ಪ ಮಾತನಾಡಿ, ಈ ಹೋರಾಟದಲ್ಲಿ ಎಲ್ಲಾ ಸಂಘಸಂಸ್ಥೆಗಳು, ವರ್ತಕರು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಭಟನೆಗೆ ಬಗ್ಗದಿದ್ದರೆ ನಿರಂತರ ಹೋರಾಟ ಕೈಗೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು. ಪ್ರಯಾಣಿಕರ ವೇದಿಕೆಯ ನಿರಂಜನ್, ಸಂಗಮೇಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಿಪಟೂರು: ಶಿವಮೊಗ್ಗ- ಬೆಂಗಳೂರು ಪ್ಯಾಸೆಂಜರ್ ರೈಲಿನ ಸಂಚಾರ ವೇಳೆ ಬದಲಿಸುವುದನ್ನು ವಿರೋಧಿಸಿ ಪ್ರಯಾಣಿಕರ ವೇದಿಕೆ ನೇತೃತ್ವದಲ್ಲಿ ಜೂ.24ರಂದು ಬೆಳಿಗ್ಗೆ ನಗರ ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸುವುದಾಗಿ ರೈಲ್ವೆ ಸಲಹಾ ಸಮಿತಿ ಸದಸ್ಯ ಮಣಕೀಕೆರೆ ನಾಗರಾಜು ಗುರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ಮುಂಜಾನೆ 4ಕ್ಕೆ ಶಿವಮೊಗ್ಗ ಬಿಟ್ಟು ಬೆಳಗ್ಗೆ 11ಕ್ಕೆ ಬೆಂಗಳೂರು ತಲುಪುತ್ತಿದ್ದ ಶಿವಮೊಗ್ಗ ಪ್ಯಾಸೆಂಜರ್ ರೈಲು ವಿದ್ಯಾರ್ಥಿಗಳಿಗೆ, ಕೂಲಿ ಕಾರ್ಮಿಕರಿಗೆ, ನೌಕರರಿಗೆ, ಸಾರ್ವಜನಿಕರಿಗೆ ಅನುಕೂಲವಾಗಿತ್ತು. ಈ ರೈಲಿನ ಸಂಚಾರ ವೇಳೆಯನ್ನು ಜು.1ರಿಂದ ಬದಲಿಸುವುದಾಗಿ ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ಇದರ ಪ್ರಕಾರ ಬೆಳಗ್ಗೆ 8ಕ್ಕೆ ಶಿವಮೊಗ್ಗ ಬಿಡುವ ರೈಲು ಮಧ್ಯಾಹ್ನ 2ಕ್ಕೆ ಬೆಂಗಳೂರು ತಲುಪುತ್ತದೆ. <br /> <br /> ಆ ಪ್ರಕಾರ ಅದು ಇಲ್ಲಿನ ನಿಲ್ದಾಣಕ್ಕೆ 11.30ಕ್ಕೆ ಬರುವುದರಿಂದ ಪ್ರಯೋಜನ ತಪ್ಪುತ್ತದೆ. ಆ ರೈಲನ್ನೇ ಅವಲಂಬಿಸಿದ್ದ ಕರಡಿ, ಅರಳಗುಪ್ಪೆ, ಬನಶಂಕರಿ ಮತ್ತಿತರ ಹಳ್ಳಿ ಸೇರಿದಂತೆ ಸಾವಿರಾರು ಜನರಿಗೆ ತೊಂದರೆಯಾಗುತ್ತದೆ. ಆದ್ದರಿಂದ ಮೊದಲಿನ ವೇಳೆಯಲ್ಲೇ ರೈಲು ಸಂಚಾರ ಮುಂದುವರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು.<br /> <br /> ರೈಲ್ವೆ ಸಲಹಾ ಸಮಿತಿ ಸದಸ್ಯನಾಗಿ ಈಗಾಗಲೇ ರೈಲ್ವೆ ಸಚಿವರು, ಸಂಸದರು ಮತ್ತು ರೈಲ್ವೆ ಇಲಾಖೆಗೆ ಪತ್ರ ಬರೆದು ವೇಳೆ ಬದಲಿಸದಂತೆ ಕೋರಿದ್ದೇನೆ. ಹುಬ್ಬಳ್ಳಿ ಕಚೇರಿಯ ಈ ನಿರ್ಧಾರದ ಬಗ್ಗೆ ತಮಗೇನು ಗೊತ್ತಿಲ್ಲವೆಂದು ಮೈಸೂರು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರು.<br /> <br /> ರೈಲ್ವೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಶಿವಪ್ಪ ಮಾತನಾಡಿ, ಈ ಹೋರಾಟದಲ್ಲಿ ಎಲ್ಲಾ ಸಂಘಸಂಸ್ಥೆಗಳು, ವರ್ತಕರು, ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ. ಈ ಪ್ರತಿಭಟನೆಗೆ ಬಗ್ಗದಿದ್ದರೆ ನಿರಂತರ ಹೋರಾಟ ಕೈಗೊಳ್ಳಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕೋರಿದರು. ಪ್ರಯಾಣಿಕರ ವೇದಿಕೆಯ ನಿರಂಜನ್, ಸಂಗಮೇಶ್ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>