<p> <strong>ಲಖನೌ:</strong> ಕಳೆದ 15 ದಿನಗಳಿಂದ ಮೊರಾದಾಬಾದ್- ದೆಹಲಿ ರೈಲು ಮಾರ್ಗದ ಹಳಿಯ ಮೇಲೆ ಕುಳಿತು ಚಳವಳಿ ನಡೆಸುತ್ತಿದ್ದ ಜಾಟ್ ಸಮುದಾಯದ ಕಾರ್ಯಕರ್ತರನ್ನು ತೆರವುಗೊಳಿಸಬೇಕೆಂಬ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಅಧಿಕಾರಿಗಳು ಜಾರಿ ಮಾಡುವ ಮೊದಲೇ ಚಳವಳಿ ನಿರತರು ಶನಿವಾರ ಖುದ್ದಾಗಿ ಹಳಿಯನ್ನು ತೆರವುಗೊಳಿಸಿದ್ದಾರೆ.</p>.<p><br /> ಹಳಿಗಳನ್ನು ಸಂಪೂರ್ಣ ಪರಿಶೀಲನೆಗೆ ಒಳಪಡಿಸಿದ ಬಳಿಕ ರೈಲು ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಫರಪುರ ರೈಲು ನಿಲ್ದಾಣಕ್ಕೆ ಸಮೀಪದ ಶಾಲಾ ಆವರಣದಲ್ಲಿ ಚಳವಳಿ ಮುಂದುವರಿದಿದೆ. ಈ ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ಹೇಳಿಕೆ ನೀಡಿ, ಈವರೆಗೆ ರೈಲು ಪ್ರಯಾಣಿಕರಿಗೆ ಆದ ತೊಂದರೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. <br /> <br /> ಅಲ್ಲದೆ ಈ ಚಳವಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಟೀಕಿಸಿದ್ದಾರೆ. ಕೇಂದ್ರ ಸರ್ಕಾರಿ ನೌಕರಿಗಳಲ್ಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಚಳವಳಿ ಮತ್ತೆ ಹಳಿಗಳಿಗೇ ಮರಳುತ್ತದೆ ಎಂದು ಸಮುದಾಯ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> <strong>ಲಖನೌ:</strong> ಕಳೆದ 15 ದಿನಗಳಿಂದ ಮೊರಾದಾಬಾದ್- ದೆಹಲಿ ರೈಲು ಮಾರ್ಗದ ಹಳಿಯ ಮೇಲೆ ಕುಳಿತು ಚಳವಳಿ ನಡೆಸುತ್ತಿದ್ದ ಜಾಟ್ ಸಮುದಾಯದ ಕಾರ್ಯಕರ್ತರನ್ನು ತೆರವುಗೊಳಿಸಬೇಕೆಂಬ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಅಧಿಕಾರಿಗಳು ಜಾರಿ ಮಾಡುವ ಮೊದಲೇ ಚಳವಳಿ ನಿರತರು ಶನಿವಾರ ಖುದ್ದಾಗಿ ಹಳಿಯನ್ನು ತೆರವುಗೊಳಿಸಿದ್ದಾರೆ.</p>.<p><br /> ಹಳಿಗಳನ್ನು ಸಂಪೂರ್ಣ ಪರಿಶೀಲನೆಗೆ ಒಳಪಡಿಸಿದ ಬಳಿಕ ರೈಲು ಸಂಚಾರ ಪುನರಾರಂಭಗೊಳ್ಳಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕಫರಪುರ ರೈಲು ನಿಲ್ದಾಣಕ್ಕೆ ಸಮೀಪದ ಶಾಲಾ ಆವರಣದಲ್ಲಿ ಚಳವಳಿ ಮುಂದುವರಿದಿದೆ. ಈ ಮಧ್ಯೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ಹೇಳಿಕೆ ನೀಡಿ, ಈವರೆಗೆ ರೈಲು ಪ್ರಯಾಣಿಕರಿಗೆ ಆದ ತೊಂದರೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. <br /> <br /> ಅಲ್ಲದೆ ಈ ಚಳವಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಟೀಕಿಸಿದ್ದಾರೆ. ಕೇಂದ್ರ ಸರ್ಕಾರಿ ನೌಕರಿಗಳಲ್ಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂಬ ನಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಚಳವಳಿ ಮತ್ತೆ ಹಳಿಗಳಿಗೇ ಮರಳುತ್ತದೆ ಎಂದು ಸಮುದಾಯ ಎಚ್ಚರಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>