<p>ಹುಬ್ಬಳ್ಳಿ: ನೈರುತ್ಯ ರೈಲ್ವೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಘಟಕ ಬುಧವಾರ ಹಮ್ಮಿಕೊಂಡಿದ್ದ ನೇತ್ರ ತಪಾಸಣಾ ಶಿಬಿರದಲ್ಲಿ 170 ಮಂದಿ ರೈಲ್ವೆ ನೌಕರರ ಕಣ್ಣಿನ ತಪಾಸಣೆ ನಡೆಸಲಾಯಿತು.<br /> <br /> ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ನಡೆದ ಶಿಬಿರದಲ್ಲಿ ತಪಾಸಣೆಗೊಳಗಾದವರ ಪೈಕಿ ಐವರಿಗೆ ತೀವ್ರ ತೊಂದರೆ ಇರುವುದು ಪತ್ತೆಯಾಗಿದ್ದು ಅವರಿಗೆ ಶೀಘ್ರವಾಗಿ ಪರಿಣಾಮಕಾರಿ ಚಿಕಿತ್ಸೆ ಪಡೆಯಲು ಸೂಚಿಸಲಾಯಿತು. <br /> <br /> ಡಾ. ಸಚಿನ್ ಮುರ್ಗುಡೆ ಕಣ್ಣಿನ ರೋಗಗಳ ಬಗ್ಗೆ ಹಾಗೂ ಪರಿಣಾಮಕಾರಿ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ನೇತ್ರದಾನದ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸ ಲಾಯಿತು. 25 ಮಂದಿ ಸ್ಕೌಟ್ಸ್, ಗೈಡ್ಸ್, ರೋವರ್ಸ್ ಹಾಗೂ ರೇಂಜರ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.<br /> <br /> ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹಾಗೂ ಸ್ಕೌಟ್ಸ್-ಗೈಡ್ಸ್ನ ಜಿಲ್ಲಾ ಅಧ್ಯಕ್ಷ ಪ್ರವೀಣ ಮಿಶ್ರ, ಕೇಂದ್ರ ರೈಲ್ವೆ ಆಸ್ಪತ್ರೆಯ ನಿರ್ದೇಶಕ ಡಾ. ಜಯಕುಮಾರ, ಸ್ಕೌಟ್ಸ್-ಗೈಡ್ಸ್ನ ಜಿಲ್ಲಾ ಮುಖ್ಯ ಕಮಾಂಡರ್ ಪಿ.ಆರ್.ಎಸ್. ರಾಮನ್ ಉಪಸ್ಥಿತರಿದ್ದರು.<br /> <br /> ಡಾ. ಶ್ವೇತಾ ಮುರ್ಗುಡೆ, ಡಾ. ಉಪ್ಪಳ ಗಾಂಧಿ, ಡಾ. ಕುಲಕರ್ಣಿ ಹಾಗೂ ಮಲ್ಲೇಶ ಡೋಂಗ್ರೆ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಬ್ಬಳ್ಳಿ: ನೈರುತ್ಯ ರೈಲ್ವೆ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಘಟಕ ಬುಧವಾರ ಹಮ್ಮಿಕೊಂಡಿದ್ದ ನೇತ್ರ ತಪಾಸಣಾ ಶಿಬಿರದಲ್ಲಿ 170 ಮಂದಿ ರೈಲ್ವೆ ನೌಕರರ ಕಣ್ಣಿನ ತಪಾಸಣೆ ನಡೆಸಲಾಯಿತು.<br /> <br /> ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ನಡೆದ ಶಿಬಿರದಲ್ಲಿ ತಪಾಸಣೆಗೊಳಗಾದವರ ಪೈಕಿ ಐವರಿಗೆ ತೀವ್ರ ತೊಂದರೆ ಇರುವುದು ಪತ್ತೆಯಾಗಿದ್ದು ಅವರಿಗೆ ಶೀಘ್ರವಾಗಿ ಪರಿಣಾಮಕಾರಿ ಚಿಕಿತ್ಸೆ ಪಡೆಯಲು ಸೂಚಿಸಲಾಯಿತು. <br /> <br /> ಡಾ. ಸಚಿನ್ ಮುರ್ಗುಡೆ ಕಣ್ಣಿನ ರೋಗಗಳ ಬಗ್ಗೆ ಹಾಗೂ ಪರಿಣಾಮಕಾರಿ ಚಿಕಿತ್ಸೆಯ ಕುರಿತು ಮಾಹಿತಿ ನೀಡಿದರು. ನೇತ್ರದಾನದ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸ ಲಾಯಿತು. 25 ಮಂದಿ ಸ್ಕೌಟ್ಸ್, ಗೈಡ್ಸ್, ರೋವರ್ಸ್ ಹಾಗೂ ರೇಂಜರ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.<br /> <br /> ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹಾಗೂ ಸ್ಕೌಟ್ಸ್-ಗೈಡ್ಸ್ನ ಜಿಲ್ಲಾ ಅಧ್ಯಕ್ಷ ಪ್ರವೀಣ ಮಿಶ್ರ, ಕೇಂದ್ರ ರೈಲ್ವೆ ಆಸ್ಪತ್ರೆಯ ನಿರ್ದೇಶಕ ಡಾ. ಜಯಕುಮಾರ, ಸ್ಕೌಟ್ಸ್-ಗೈಡ್ಸ್ನ ಜಿಲ್ಲಾ ಮುಖ್ಯ ಕಮಾಂಡರ್ ಪಿ.ಆರ್.ಎಸ್. ರಾಮನ್ ಉಪಸ್ಥಿತರಿದ್ದರು.<br /> <br /> ಡಾ. ಶ್ವೇತಾ ಮುರ್ಗುಡೆ, ಡಾ. ಉಪ್ಪಳ ಗಾಂಧಿ, ಡಾ. ಕುಲಕರ್ಣಿ ಹಾಗೂ ಮಲ್ಲೇಶ ಡೋಂಗ್ರೆ ತಪಾಸಣೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>