<p>ಪಾಂಡವಪುರ: ಪಾಂಡವಪುರ ರೈಲ್ವೆ ನಿಲ್ದಾಣದ ಮೇಲು ಸೇತುವೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ಭರವಸೆ ನೀಡಿದರು.<br /> <br /> ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಮತ್ತು ಕಟ್ಟಡಗಳ ಶಂಕುಸ್ಥಾಪನೆಗೆ ಸೋಮವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಚಾಲನೆ ನೀಡಿ ನಂತರ ಪಾಂಡವಪುರ ರೈಲ್ವೆ ನಿಲ್ದಾಣದ ಮೇಲು ಸೇತುವೆಯನ್ನು ವೀಕ್ಷಿಸಿ ಅವರು ಮಾತನಾಡಿದರು.<br /> ಬಹಳ ವರ್ಷಗಳಿಂದ ಮೇಲುಸೇತುವೆ ಕಾಮಗಾರಿ ನೆನಗುದಿಗೆ ಬಿದ್ದಿದ್ದು, ನಂತರ ಕಾಮಗಾರಿ ಪ್ರಾರಂಭಗೊಂಡಿದೆ. ಬಹುತೇಕ ಮೇಲು ಸೇತುವೆ ನಿರ್ಮಾಣದ ಹಂತದಲ್ಲಿದ್ದು, ಕಾಮಗಾರಿ ಪೂರ್ಣಗೊಳ್ಳಲು ಇನ್ನು ಹಣದ ಅಗತ್ಯವಿರುವುದು ಗೊತ್ತಾಗಿದೆ.<br /> <br /> ಸಂಬಂಧಪಟ್ಟ ಲೋಕೋಪಯೋಗಿ ಎಂಜಿನಿಯರ್ ಅವರಿಗೆ ಕಾಮಗಾರಿಯ ಅಂದಾಜು ವೆಚ್ಚ ತಯಾರು ಮಾಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳ ಜತೆ ಮಾತನಾಡಿ ಅಂದಾಜು ವೆಚ್ಚವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಅವರಣದಲ್ಲಿ ಒಟ್ಟು ರೂ. 725.13 ಲಕ್ಷದ 12 ಕಾಮಗಾರಿಗಳಿಗೆ, ಕೆನ್ನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.1242.75 ಲಕ್ಷಗಳ 3 ಕಾಮಗಾರಿಗಳಿಗೆ, ಅರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 3277.36 ಲಕ್ಷದ ಕಾಮಗಾರಿಗಳಿಗೆ, ಬನ್ನಂಗಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 46.00 ಲಕ್ಷದ 2 ಕಾಮಗಾರಿಗಳಿಗೆ ಹಾಗೂ ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ರಾಗಿಮುದ್ದನಹಳ್ಳಿ ವ್ಯಾಪ್ತಿಯಲ್ಲಿ ರೂ.19.00 ಲಕ್ಷದ 2 ಕಾಮಗಾರಿಗಳಿಗೆ ಚಾಲನೆ ದೊರೆಯಿತು.<br /> <br /> ಅಧ್ಯಕ್ಷತೆಯನ್ನು ಶಾಸಕ ಸಿ.ಎಸ್.ಪುಟ್ಟರಾಜು ವಹಿಸಿದ್ದರು. ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಸಿ.ಜಯಣ್ಣ, ತಹಶೀಲ್ದಾರ್ ಬಿ.ಸಿ.ಶಿವಾನಂದಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾ. ಪಂ. ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾಂಡವಪುರ: ಪಾಂಡವಪುರ ರೈಲ್ವೆ ನಿಲ್ದಾಣದ ಮೇಲು ಸೇತುವೆಯ ಕಾಮಗಾರಿಯನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ.ಯೋಗೇಶ್ವರ್ ಭರವಸೆ ನೀಡಿದರು.<br /> <br /> ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಮತ್ತು ಕಟ್ಟಡಗಳ ಶಂಕುಸ್ಥಾಪನೆಗೆ ಸೋಮವಾರ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಚಾಲನೆ ನೀಡಿ ನಂತರ ಪಾಂಡವಪುರ ರೈಲ್ವೆ ನಿಲ್ದಾಣದ ಮೇಲು ಸೇತುವೆಯನ್ನು ವೀಕ್ಷಿಸಿ ಅವರು ಮಾತನಾಡಿದರು.<br /> ಬಹಳ ವರ್ಷಗಳಿಂದ ಮೇಲುಸೇತುವೆ ಕಾಮಗಾರಿ ನೆನಗುದಿಗೆ ಬಿದ್ದಿದ್ದು, ನಂತರ ಕಾಮಗಾರಿ ಪ್ರಾರಂಭಗೊಂಡಿದೆ. ಬಹುತೇಕ ಮೇಲು ಸೇತುವೆ ನಿರ್ಮಾಣದ ಹಂತದಲ್ಲಿದ್ದು, ಕಾಮಗಾರಿ ಪೂರ್ಣಗೊಳ್ಳಲು ಇನ್ನು ಹಣದ ಅಗತ್ಯವಿರುವುದು ಗೊತ್ತಾಗಿದೆ.<br /> <br /> ಸಂಬಂಧಪಟ್ಟ ಲೋಕೋಪಯೋಗಿ ಎಂಜಿನಿಯರ್ ಅವರಿಗೆ ಕಾಮಗಾರಿಯ ಅಂದಾಜು ವೆಚ್ಚ ತಯಾರು ಮಾಡಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳ ಜತೆ ಮಾತನಾಡಿ ಅಂದಾಜು ವೆಚ್ಚವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಅವರಣದಲ್ಲಿ ಒಟ್ಟು ರೂ. 725.13 ಲಕ್ಷದ 12 ಕಾಮಗಾರಿಗಳಿಗೆ, ಕೆನ್ನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.1242.75 ಲಕ್ಷಗಳ 3 ಕಾಮಗಾರಿಗಳಿಗೆ, ಅರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 3277.36 ಲಕ್ಷದ ಕಾಮಗಾರಿಗಳಿಗೆ, ಬನ್ನಂಗಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ. 46.00 ಲಕ್ಷದ 2 ಕಾಮಗಾರಿಗಳಿಗೆ ಹಾಗೂ ಗುಮ್ಮನಹಳ್ಳಿ ಗ್ರಾಮ ಪಂಚಾಯಿತಿ ರಾಗಿಮುದ್ದನಹಳ್ಳಿ ವ್ಯಾಪ್ತಿಯಲ್ಲಿ ರೂ.19.00 ಲಕ್ಷದ 2 ಕಾಮಗಾರಿಗಳಿಗೆ ಚಾಲನೆ ದೊರೆಯಿತು.<br /> <br /> ಅಧ್ಯಕ್ಷತೆಯನ್ನು ಶಾಸಕ ಸಿ.ಎಸ್.ಪುಟ್ಟರಾಜು ವಹಿಸಿದ್ದರು. ಜಿಲ್ಲಾಧಿಕಾರಿ ಬಿ.ಎನ್.ಕೃಷ್ಣಯ್ಯ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಸಿ.ಜಯಣ್ಣ, ತಹಶೀಲ್ದಾರ್ ಬಿ.ಸಿ.ಶಿವಾನಂದಮೂರ್ತಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜು, ಜಿಲ್ಲಾ ಪಂಚಾಯಿತಿ ಸದಸ್ಯರು, ತಾಲ್ಲೂಕು ಪಂಚಾಯಿತಿ ಸದಸ್ಯರು, ಗ್ರಾ. ಪಂ. ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>