<p>ರೈಲ್ವೆ ಮಂತ್ರಿ ದಿನೇಶ್ ತ್ರಿವೇದಿ ರೈಲು ಪ್ರಯಾಣ ದರ ಹೆಚ್ಚಳ ಮಾಡಿದ ಕಾರಣಕ್ಕಾಗಿ ಅವರು ರಾಜಿನಾಮೆ ಕೊಡುವ ಪರಿಸ್ಥಿತಿಯನ್ನು ಮಮತಾ ಬ್ಯಾನರ್ಜಿ ನಿರ್ಮಾಣ ಮಾಡಿದ್ದು ಕೆಟ್ಟ ರಾಜಕಾರಣ. <br /> <br /> 8 ವರ್ಷಗಳ ನಂತರ ಸ್ವಲ್ಪ ಪ್ರಯಾಣ ದರ ಹೆಚ್ಚಸಿದ್ದರಿಂದ ಜನರಿಗೆ ಹೆಚ್ಚಿನ ಹೊರೆ ಆಗುತ್ತಿರಲಿಲ್ಲ. ಆದರೂ ಮಮತಾ ಬ್ಯಾನರ್ಜಿ ದರ ಹೆಚ್ಚಳಕ್ಕೆ ತ್ರಿವೇದಿ ಅವರನ್ನು ಹೊಣೆ ಮಾಡಿದ್ದಾರೆ. <br /> <br /> ರೈಲ್ವೆ ವ್ಯವಸ್ಥೆಯ ಆಧುನೀಕರಣ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಅದಕ್ಕೆ ಅಗತ್ಯವಾದ ಸಂಪನ್ಮೂಲಗಳನ್ನು ಪ್ರಯಾಣಿಕರಿಂದ ಸಂಗ್ರಹಿಸುವುದು ತಪ್ಪೇ? ರೈಲ್ವೆ ಸುಧಾರಣೆ, ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಶುಚಿತ್ವಕ್ಕೆ ತ್ರಿವೇದಿ ಒತ್ತು ನೀಡಿದ್ದರು.<br /> <br /> ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಪ್ರಾದೇಶಿಕ ಪಕ್ಷಗಳು ಬ್ಲಾಕ್ಮೇಲ್ ತಂತ್ರ ಅನುಸರಿಸುತ್ತಿವೆ. ಇದರಿಂದ ತೊಂದರೆಯಾಗುವುದು ದೇಶದ ಜನರಿಗೆ ಎಂಬುದನ್ನೇ ಅವು ಮರೆತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರೈಲ್ವೆ ಮಂತ್ರಿ ದಿನೇಶ್ ತ್ರಿವೇದಿ ರೈಲು ಪ್ರಯಾಣ ದರ ಹೆಚ್ಚಳ ಮಾಡಿದ ಕಾರಣಕ್ಕಾಗಿ ಅವರು ರಾಜಿನಾಮೆ ಕೊಡುವ ಪರಿಸ್ಥಿತಿಯನ್ನು ಮಮತಾ ಬ್ಯಾನರ್ಜಿ ನಿರ್ಮಾಣ ಮಾಡಿದ್ದು ಕೆಟ್ಟ ರಾಜಕಾರಣ. <br /> <br /> 8 ವರ್ಷಗಳ ನಂತರ ಸ್ವಲ್ಪ ಪ್ರಯಾಣ ದರ ಹೆಚ್ಚಸಿದ್ದರಿಂದ ಜನರಿಗೆ ಹೆಚ್ಚಿನ ಹೊರೆ ಆಗುತ್ತಿರಲಿಲ್ಲ. ಆದರೂ ಮಮತಾ ಬ್ಯಾನರ್ಜಿ ದರ ಹೆಚ್ಚಳಕ್ಕೆ ತ್ರಿವೇದಿ ಅವರನ್ನು ಹೊಣೆ ಮಾಡಿದ್ದಾರೆ. <br /> <br /> ರೈಲ್ವೆ ವ್ಯವಸ್ಥೆಯ ಆಧುನೀಕರಣ ಯೋಜನೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ಅದಕ್ಕೆ ಅಗತ್ಯವಾದ ಸಂಪನ್ಮೂಲಗಳನ್ನು ಪ್ರಯಾಣಿಕರಿಂದ ಸಂಗ್ರಹಿಸುವುದು ತಪ್ಪೇ? ರೈಲ್ವೆ ಸುಧಾರಣೆ, ಪ್ರಯಾಣಿಕರ ಸುರಕ್ಷತೆ ಮತ್ತು ರೈಲುಗಳ ಶುಚಿತ್ವಕ್ಕೆ ತ್ರಿವೇದಿ ಒತ್ತು ನೀಡಿದ್ದರು.<br /> <br /> ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿರುವ ಪ್ರಾದೇಶಿಕ ಪಕ್ಷಗಳು ಬ್ಲಾಕ್ಮೇಲ್ ತಂತ್ರ ಅನುಸರಿಸುತ್ತಿವೆ. ಇದರಿಂದ ತೊಂದರೆಯಾಗುವುದು ದೇಶದ ಜನರಿಗೆ ಎಂಬುದನ್ನೇ ಅವು ಮರೆತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>